ETV Bharat / state

ದೊಡ್ಡಬಳ್ಳಾಪುರ: ಪೂಜಾ ಸಾಮಗ್ರಿ ತರಲು ಹೋಗಿದ್ದ ತಂದೆ-ಮಗ ರಸ್ತೆ ಅಪಘಾತದಲ್ಲಿ ದುರ್ಮರಣ

author img

By

Published : Mar 15, 2022, 8:02 PM IST

Accident
ಆಕ್ಸಿಡೆಂಟ್​

ದೊಡ್ಡಬಳ್ಳಾಪುರ ತಾಲೂಕಿನ ಶಿವಪುರ ಗ್ರಾಮದ ಬಳಿ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ ತಂದೆ ಮೀಸೆ ರಾಮಯ್ಯ (64) ಮಗ ನಾರಾಯಣ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಸೊಣ್ಣಪ್ಪನಹಳ್ಳಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ.

ದೊಡ್ಡಬಳ್ಳಾಪುರ: ಮುನೇಶ್ವರಸ್ವಾಮಿ ಪೂಜೆಗಾಗಿ ಪೂಜಾ ಸಾಮಗ್ರಿಗಳನ್ನ ತರಲು ಬೈಕ್​ನಲ್ಲಿ ಹೊರಟಿದ್ದ ಅಪ್ಪ-ಮಗ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ ಬೆಂಗಲೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ತಾಲೂಕಿನ ಶಿವಪುರ ಗ್ರಾಮದ ಬಳಿ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ ತಂದೆ ಮೀಸೆ ರಾಮಯ್ಯ (64) ಮಗ ನಾರಾಯಣ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಸೊಣ್ಣಪ್ಪನಹಳ್ಳಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ.

father-and-son-died-in-bike-accident-at-doddaballapura
ತಂದೆ - ಮಗ ರಸ್ತೆ ಅಪಘಾತದಲ್ಲಿ ದುರ್ಮರಣ

ಮನೆಯಲ್ಲಿ ಮುನೇಶ್ವರಸ್ವಾಮಿ ಪೂಜಾ ಕಾರ್ಯಕ್ರಮ ಇದ್ದಿದ್ದರಿಂದ ಇಂದು ಬೆಳಗ್ಗೆ ತಂದೆ-ಮಗ ಪೂಜೆಗೆ ಬೇಕಾದ ಸಾಮಗ್ರಿಗಳನ್ನು ತರಲು ಸ್ಕೂಟರ್​ನಲ್ಲಿ ದೊಡ್ಡಬಳ್ಳಾಪುರ ನಗರಕ್ಕೆ ಹೊರಟ್ಟಿದ್ದರು. ಮಾರ್ಗ ಮಧ್ಯದಲ್ಲಿ ನಿಯಂತ್ರಣ ತಪ್ಪಿ ಸ್ಕೂಟರ್ ಮರಕ್ಕೆ ಗುದ್ದಿ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ.

ಮತ್ತೊಂದೆಡೆ ಅಪರಿಚಿತ ವಾಹನ ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರಬಹುದೆಂಬ ಸಂಶಯವೂ ಸಹ ವ್ಯಕ್ತವಾಗಿದೆ. ಈ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಹಿಜಾಬ್ ವಿರುದ್ಧದ ಹೈಕೋರ್ಟ್​ನ​ ತೀರ್ಪು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿ : ಪಿಎಫ್​ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.