ಆಯತಪ್ಪಿ ಬೈಕ್​ನಿಂದ ಬಿದ್ದ ಸವಾರ, ರಸ್ತೆಯಲ್ಲಿ ಚೆಲ್ಲಿದ ಮಾಂಸ: ಗೋಮಾಂಸ ಕಂಡು ಬೈಕ್​ಗೆ ಬೆಂಕಿ ಇಟ್ಟ ಸ್ಥಳೀಯರು

author img

By

Published : Sep 17, 2022, 4:07 PM IST

locals-set-the-bike-on-fire-in-doddaballapura

ಬೈಕ್​ ಆಯತಪ್ಪಿ ಬಿದ್ದಾಗ ಅದರಲ್ಲಿ ಗೋಮಾಂಸ ಸಾಗಿಸುತ್ತಿರುವುದು ತಿಳಿದ ಸ್ಥಳಿಯರು ದ್ವಿಚಕ್ರ ವಾಹನಕ್ಕೆ ಬೆಂಕಿ ಇಟ್ಟ ಪ್ರಕರಣ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ : ಆಯತಪ್ಪಿ ಬೈಕ್ ಸವಾರ ಕೆಳಗೆ ಬಿದ್ದಾಗ ಅದರಲ್ಲಿದ್ದ ಗೋಮಾಂಸ ರಸ್ತೆಯಲ್ಲಿ ಚೆಲ್ಲಿದೆ. ಗೋಮಾಂಸ ಕಂಡ ಸ್ಥಳೀಯರು ಬೈಕ್​ಗೆ ಬೆಂಕಿ ಇಟ್ಟು ಸವಾರನನ್ನು ಪೊಲೀಸರ ವಶಕ್ಕೆ ನೀಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ.

ಹಿಂದೂಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬೈಕ್ ಸವಾರ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬೈಕ್​ನಲ್ಲಿ ಸಾಗಿಸುತ್ತಿದ್ದ ಗೋಮಾಂಸ ಸಹ ರಸ್ತೆಯಲ್ಲಿ ಚೆಲ್ಲಿದೆ, ಗೋಮಾಂಸ ಸಾಗಟ ಮಾಡುತ್ತಿದ್ದರಿಂದ ಅಕ್ರೋಶಗೊಂಡ ಸ್ಥಳೀಯರು ಬೈಕ್​ಗೆ ಬೆಂಕಿ ಇಟ್ಟಿದ್ದಾರೆ. ನಂತರ ಬೈಕ್​ ಸವಾರನನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ : ಬೆಂಗಳೂರು: ಮಾದಕ ದಂಧೆಯಿಂದ ಕೋಟಿ ಕೋಟಿ ಗಳಿಸಿದವನ ಆಸ್ತಿ ಮುಟ್ಟುಗೋಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.