ETV Bharat / state

ಸಾರಿಗೆ ನೌಕರರ ಮುಷ್ಕರ: ಊರಿಗೆ ತೆರಳಲು ಬಸ್​​ಗಳಿಲ್ಲದೆ ಪ್ರಯಾಣಿಕರ ಪರದಾಟ

author img

By

Published : Apr 11, 2021, 6:32 PM IST

severe trouble for passengers
ಊರಿಗೆ ತೆರಳಲು ಬಸ್​​ಗಳಿಲ್ಲದೆ ಪ್ರಯಾಣಿಕರ ಪರದಾಟ

ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ಯುಗಾದಿ ಹಬ್ಬಕ್ಕೆ ಊರುಗಳಿಗೆ ಹೋಗಲು ಬಸ್​​ಗಳಿಲ್ಲದೆ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಹೊಸಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಿಲ್ಲದೆ ಸಾರ್ವಜನಿಕರು ಪರದಾಡುವಂತಾಯಿತು.

ಯುಗಾದಿ ಹಬ್ಬಕ್ಕೆ ಊರುಗಳಿಗೆ ಹೋಗಲು ಬಸ್​​ಗಳಿಲ್ಲದೆ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆಯಿಂದ ಸುಮಾರು ಎರಡು ಮೂರು ಗಂಟೆಗಳಿಗೂ ಹೆಚ್ಚು ಸಮಯದಿಂದ ಕಾದರು ಯಾವುದೇ ಬಸ್ ಬಾರದೆ ಇರುವುದರಿಂದ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಜನರು ಪ್ರಯಾಣ ಮಾಡುತ್ತಿದ್ದಾರೆ.

ಸಾರಿಗೆ ನೌಕರರ ಮುಷ್ಕರ: ಊರಿಗೆ ತೆರಳಲು ಬಸ್​​ಗಳಿಲ್ಲದೆ ಪ್ರಯಾಣಿಕರ ಪರದಾಟ

ಹೊಸಕೋಟೆಯಿಂದ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಿಗೆ ಹೊರಡುವ ಪ್ರಯಾಣಿಕರು ಬಸ್​ಗಳಿಲ್ಲದೆ ಪರ್ಯಾಯವಾಗಿ ಕ್ಯಾಬ್, ಟೆಂಪೋಗಳ ಮೂಲಕ ಕೋಲಾರ, ಮುಳಬಾಗಿಲು, ಚಿಂತಾಮಣಿ, ಮಾಲೂರು, ಕೆಜಿಎಫ್ ನಗರಗಳಿಗೆ ತೆರಳಿ ಅಲ್ಲಿಂದ ಯಾವುದಾದರೂ ಬಸ್​ಗಳು ಬಂದರೆ ಹೋಗಬಹುದೆಂದು ತೆರಳುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.