ETV Bharat / state

ಮೈಸೂರು ರಾಜ್ಯ 'ಕರ್ನಾಟಕ'ವಾಗಿ 50 ಸಂವತ್ಸರ: ವರ್ಷಪೂರ್ತಿ ಸರ್ಕಾರದಿಂದ ವಿವಿಧ ಕಾರ್ಯಕ್ರಮ

author img

By ETV Bharat Karnataka Team

Published : Oct 30, 2023, 6:40 PM IST

ನವೆಂಬರ್ 1ರಂದು ಸರ್ಕಾರದಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ವೈವಿಧ್ಯಮಯ ಕಾರ್ಯಕ್ರಮಗಳ ಮಾಹಿತಿ ಇಲ್ಲಿದೆ.

50th Anniversary of Karnataka Name: Various programs by Govt throughout year
ಮೈಸೂರು ರಾಜ್ಯ 'ಕರ್ನಾಟಕ'ವಾಗಿ 50 ಸಂವತ್ಸರ: ವರ್ಷಪೂರ್ತಿ ಸರ್ಕಾರದಿಂದ ವಿವಿಧ ಕಾರ್ಯಕ್ರಮ

ಬೆಂಗಳೂರು: ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿದ್ದ ನಾಡಿಗೆ 1973ರಲ್ಲಿ ಕರ್ನಾಟಕ ಎಂದು ಹೆಸರಿಟ್ಟಿದ್ದು, ಇದೀಗ 50 ವರ್ಷ ಪೂರ್ಣಗೊಂಡಿದೆ. ಈ ವಿಶೇಷ ಸಂದರ್ಭದಲ್ಲಿ ವರ್ಷಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ವರ್ಷದ ನ. 1ರಿಂದ‌ ಮುಂದಿನ‌ ವರ್ಷ 2024ರ ನವೆಂಬರ್ 30ರವರೆಗೆ ಕರ್ನಾಟಕದ‌ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನಿಸಲು ಉದ್ದೇಶಿಸಲಾಗಿದೆ.

ನವೆಂಬರ್ 1ರಂದು ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ಶಾಸಕರು ಧ್ವಜವಂದನೆ ನೆರವೇರಿಸಲಿದ್ದಾರೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸಂಭ್ರಮ ಸಡಗರದಿಂದ ನಾಡ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಾಡಿನ ಎಲ್ಲ ಕನ್ನಡಿಗರು, ಕನ್ನಡ ಮನಸ್ಸುಗಳು, ಕನ್ನಡ ಪರ ಹೋರಾಟಗಾರರು ಈ ಸಂಭ್ರಮದಲ್ಲಿ ತೊಡಗುವಂತಾಗಬೇಕು ಎಂದು ಕರೆ ನೀಡಲಾಗಿದೆ.

ಮನೆಗಳ ಮುಂದೆ ರಂಗೋಲಿ: ನ.1ರಂದು ರಾಜ್ಯದ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, "ಕರ್ನಾಟಕ ಸಂಭ್ರಮ-50: ಉಸಿರಾಯಿತು ಕರ್ನಾಟಕ ಹೆಸರಾಗಲಿ ಕನ್ನಡ" ಎನ್ನುವ ಘೋಷ ವಾಕ್ಯವನ್ನು ಮನೆಯ ಮಹಿಳೆಯರು ಬರೆಯಬೇಕು.
ಬೆಳಿಗ್ಗೆ 9 ಗಂಟೆಗೆ ಎಲ್ಲಾ ರೇಡಿಯೋಗಳಲ್ಲಿ ನಾಡಗೀತೆ ಮೊಳಗಲಿದೆ. ರಾಷ್ಟ್ರಗೀತೆಯಂತೆ ಎಲ್ಲರೂ ಎದ್ದು ನಿಂತು ನಾಡಗೀತೆಗೆ ಗೌರವ ಸಮರ್ಪಣೆ ಮಾಡಬೇಕು. ನ.1ರ ಸಂಜೆ 5 ಗಂಟೆಗೆ ನಿಮ್ಮ-ನಿಮ್ಮ ಊರುಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟಗಳನ್ನು ಬಾನೆತ್ತರಕ್ಕೆ ಹಾರಿಸಿ. ಈ ಗಾಳಿಪಟ ಉತ್ಸವದ ಮೂಲಕ ನಮ್ಮ ಸುವರ್ಣ ಸಂಭ್ರಮವನ್ನು ಜಗತ್ತಿಗೆ ಸಾರಿ ಹೇಳಲಾಗುವುದು. ನ. 1ರ ರಾತ್ರಿ ಏಳು ಗಂಟೆಗೆ ಪ್ರತಿಯೊಬ್ಬರ ಮನೆ, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆಯಲ್ಲಿ ಕನ್ನಡ ಜ್ಯೋತಿ ಬೆಳಗಿಸುವುದು.

ಭವ್ಯ ಕರ್ನಾಟಕ ರಥಯಾತ್ರೆ: ಕರ್ನಾಟಕ ಏಕೀಕರಣದ ವಿಷಯ, ಸಾಹಿತ್ಯ, ಸಾಧನೆಗಳ ಪಥ, ಐತಿಹಾಸಿಕ ನೆಲೆಗಳ ಮಾಹಿತಿ, ಕನ್ನಡ ಜ್ಯೋತಿ, ಭುವನೇಶ್ವರಿ ಪ್ರತಿಮೆಸಹಿತ ಕರ್ನಾಟಕದ ಎಲ್ಲಾ 31 ಜಿಲ್ಲೆಗಳ ಪರಿಚಯ ಮಾಡಿಕೊಡುವ ವಿಶೇಷ ಕರ್ನಾಟಕ ಪಾರಂಪರಿಕ ರಥಯಾತ್ರೆ ಎಲ್ಲಾ 31 ಜಿಲ್ಲೆಗಳ ಸಹಿತ ಎಲ್ಲಾ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರ ಹಾಗೂ ಮತ್ತು ಎಲ್ಲ ಗ್ರಾಮಗಳಲ್ಲೂ ಪರ್ಯಟನೆ ನಡೆಸಲಿದೆ. ಇದಕ್ಕೆ‌‌ ಸಂಬಂಧಿಸಿದ ರೂಟ್ ಮ್ಯಾಪ್ ಕೂಡ ಸಿದ್ಧಪಡಿಸಿದ್ದು, ಅದರಂತೆ ರಥಯಾತ್ರೆ ಹಾಗೂ ಜ್ಯೋತಿ ಸಾಗಲಿದೆ.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ: ರಾಜ್ಯದ ಪ್ರತಿ ಶಾಲೆಗಳು, ವಲಯಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ‌ ಮಟ್ಟ, ನಾಲ್ಕು ಕಂದಾಯ ವಿಭಾಗಗಳು ಮತ್ತು ರಾಜ್ಯ ಮಟ್ಟದಲ್ಲಿ‌ ನನ್ನ ಭಾಷೆ, ನನ್ನ ಹಾಡು ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ‌ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವುದು. ಕನ್ನಡ ಭಾಷೆ, ರಾಜ್ಯದ ಕುರಿತು ಮಕ್ಕಳಲ್ಲಿ ಅಭಿಮಾನ ಮೂಡಿಸಬೇಕು ಎಂಬುದು ‌ಇದರ ಹಿಂದಿನ‌ ಆಶಯ. ಹಾಗೆಯೇ ವಿಶೇಷವೆಂದರೆ 1973ರಲ್ಲಿ‌‌‌ ಅಂದಿನ‌‌ ಮುಖ್ಯಮಂತ್ರಿ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟ ಬಳಿಕ ನ.2ರಂದು ಹಂಪಿಯಲ್ಲಿ ಹಾಗೂ ನ.3.ರಂದು ಗದಗ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅದೇ ಮಾದರಿಯಲ್ಲಿ ಎರಡು ಜಿಲ್ಲೆಗಳಲ್ಲಿ ಕಾರ್ಯಕ್ರಮ‌ ನಡೆಯಲಿದೆ.‌

ಸಚಿವ ಶಿವರಾಜ ತಂಗಡಗಿ ಹೇಳಿದ್ದೇನು?: ಈಗಾಗಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು, ಅರ್ಥಪೂರ್ಣವಾಗಿ ಕಾರ್ಯಕ್ರಮಗಳು ನಡೆಯುವ ಬಗ್ಗೆ ತಮ್ಮ‌ ಜಿಲ್ಲೆಗಳಲ್ಲಿ ‌ರಥಯಾತ್ರೆ ಹಾಗೂ ಜ್ಯೋತಿ ಬಂದಾಗ ಮಾಡಬೇಕಾದ ಕೆಲಸಗಳ ಬಗ್ಗೆ ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳ ಸ್ಥಳೀಯ ಕಲಾಪ್ರಕಾರ, ಸ್ಥಳೀಯ ಕಲಾವಿದರು ಹಾಗೂ ಕಲಾ ತಂಡಗಳನ್ನು ಬಳಸಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಕಲಾ ಪ್ರಕಾರಗಳನ್ನು ಹಳೇ ಮೈಸೂರು ಭಾಗಕ್ಕೆ ಇಲ್ಲಿನ‌ ಕಲಾ ಪ್ರಕಾರಗಳನ್ನು ಆ ಭಾಗಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಲಾಗುತ್ತದೆ. ಕನ್ನಡ ಸಾಂಸ್ಕೃತಿಕ ಲೋಕದ ಹಬ್ಬ ಇದಾಗಿದ್ದು, ಕನ್ನಡದ ಸೊಗಡನ್ನು ಯುವ ಪೀಳಿಗೆಗೆ ಪರಿಚಯಿಸುವ‌ ಉದ್ದೇಶ ಹೊಂದಿದ್ದು, ಹೊರನಾಡು ಕನ್ನಡಿಗರು ಹಾಗೂ ಅನಿವಾಸಿ ಕನ್ನಡಿಗರು ಕೂಡ ಇದರಲ್ಲಿ ಪಾಲ್ಗೊಳ್ಳಬೇಕು. 50ಕ್ಕೂ ಹೆಚ್ಚು ದೇಶದಲ್ಲಿನ ಅನಿವಾಸಿ ಕನ್ನಡಿಗರೊಂದಿಗೆ ಈ ಸಂಭ್ರಮದಲ್ಲಿ‌ ಪಾಲ್ಗೊಳ್ಳುವ ಬಗ್ಗೆ ಶೀಘ್ರದಲ್ಲೇ ವರ್ಚುವಲ್ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಮೂಲಕ ಇದು ಸರ್ಕಾರದ ಹಬ್ಬವಲ್ಲ,‌ ಕರ್ನಾಟಕದ ಪ್ರತಿಯೊಂದು ಮನೆ-ಮನಗಳ ಹಬ್ಬವಾಗಬೇಕು ಎಂಬುದು ನಮ್ಮ ಉದ್ದೇಶ. ಈ ಸಂಭ್ರಮದಲ್ಲಿ ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳು ಕರ್ನಾಟಕ ಸಂಭ್ರಮದ ಭಾಗವಾಗಲಿದ್ದು, ಅವರೊಂದಿಗೂ ಚರ್ಚೆ ನಡೆಸಲಾಗಿದೆ. ಅವರ ಕಚೇರಿಗಳಲ್ಲಿ ಕನ್ನಡದ ಕಂಪು ಕುರಿತು ಕಾರ್ಯಕ್ರಮ ಆಯೋಜನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕನ್ನಡ ಗೀತೆಗಳ ಗಾಯನ: ನ. 1ರಂದು ರಾಜ್ಯೋತ್ಸವ ‌ಕಾರ್ಯಕ್ರಮದಲ್ಲಿ ನಾಡಿನ‌ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು‌ ಕನ್ನಡಾಂಬೆಗೆ ನುಡಿ ನಮನ(ಗೀತೆ ಗಾಯನ) ಸಲ್ಲಿಸುವ ಬಗ್ಗೆ ಆದೇಶ ಕೂಡ ಆಗಿದೆ. ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ್ ಹೊತ್ತಿತ್ತೋ ಹೊತ್ತಿತ್ತು ಕನ್ನಡದ ದೀಪ, ಚನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಗೀತಾ ಗಾಯನ ನಡೆಯಲಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ: ಈ ಬಾರಿ 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.. 2 ದಿನದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿದ್ದ ನಾಡಿಗೆ 1973ರಲ್ಲಿ ಕರ್ನಾಟಕ ಎಂದು ಹೆಸರಿಟ್ಟಿದ್ದು, ಇದೀಗ 50 ವರ್ಷ ಪೂರ್ಣಗೊಂಡಿದೆ. ಈ ವಿಶೇಷ ಸಂದರ್ಭದಲ್ಲಿ ವರ್ಷಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ವರ್ಷದ ನ. 1ರಿಂದ‌ ಮುಂದಿನ‌ ವರ್ಷ 2024ರ ನವೆಂಬರ್ 30ರವರೆಗೆ ಕರ್ನಾಟಕದ‌ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು-ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನಿಸಲು ಉದ್ದೇಶಿಸಲಾಗಿದೆ.

ನವೆಂಬರ್ 1ರಂದು ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ಶಾಸಕರು ಧ್ವಜವಂದನೆ ನೆರವೇರಿಸಲಿದ್ದಾರೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸಂಭ್ರಮ ಸಡಗರದಿಂದ ನಾಡ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ನಾಡಿನ ಎಲ್ಲ ಕನ್ನಡಿಗರು, ಕನ್ನಡ ಮನಸ್ಸುಗಳು, ಕನ್ನಡ ಪರ ಹೋರಾಟಗಾರರು ಈ ಸಂಭ್ರಮದಲ್ಲಿ ತೊಡಗುವಂತಾಗಬೇಕು ಎಂದು ಕರೆ ನೀಡಲಾಗಿದೆ.

ಮನೆಗಳ ಮುಂದೆ ರಂಗೋಲಿ: ನ.1ರಂದು ರಾಜ್ಯದ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ, "ಕರ್ನಾಟಕ ಸಂಭ್ರಮ-50: ಉಸಿರಾಯಿತು ಕರ್ನಾಟಕ ಹೆಸರಾಗಲಿ ಕನ್ನಡ" ಎನ್ನುವ ಘೋಷ ವಾಕ್ಯವನ್ನು ಮನೆಯ ಮಹಿಳೆಯರು ಬರೆಯಬೇಕು.
ಬೆಳಿಗ್ಗೆ 9 ಗಂಟೆಗೆ ಎಲ್ಲಾ ರೇಡಿಯೋಗಳಲ್ಲಿ ನಾಡಗೀತೆ ಮೊಳಗಲಿದೆ. ರಾಷ್ಟ್ರಗೀತೆಯಂತೆ ಎಲ್ಲರೂ ಎದ್ದು ನಿಂತು ನಾಡಗೀತೆಗೆ ಗೌರವ ಸಮರ್ಪಣೆ ಮಾಡಬೇಕು. ನ.1ರ ಸಂಜೆ 5 ಗಂಟೆಗೆ ನಿಮ್ಮ-ನಿಮ್ಮ ಊರುಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಣದ ಗಾಳಿಪಟಗಳನ್ನು ಬಾನೆತ್ತರಕ್ಕೆ ಹಾರಿಸಿ. ಈ ಗಾಳಿಪಟ ಉತ್ಸವದ ಮೂಲಕ ನಮ್ಮ ಸುವರ್ಣ ಸಂಭ್ರಮವನ್ನು ಜಗತ್ತಿಗೆ ಸಾರಿ ಹೇಳಲಾಗುವುದು. ನ. 1ರ ರಾತ್ರಿ ಏಳು ಗಂಟೆಗೆ ಪ್ರತಿಯೊಬ್ಬರ ಮನೆ, ಕಚೇರಿ, ಅಂಗಡಿ ಮಳಿಗೆಗಳ ಮುಂದೆ ಹಣತೆಯಲ್ಲಿ ಕನ್ನಡ ಜ್ಯೋತಿ ಬೆಳಗಿಸುವುದು.

ಭವ್ಯ ಕರ್ನಾಟಕ ರಥಯಾತ್ರೆ: ಕರ್ನಾಟಕ ಏಕೀಕರಣದ ವಿಷಯ, ಸಾಹಿತ್ಯ, ಸಾಧನೆಗಳ ಪಥ, ಐತಿಹಾಸಿಕ ನೆಲೆಗಳ ಮಾಹಿತಿ, ಕನ್ನಡ ಜ್ಯೋತಿ, ಭುವನೇಶ್ವರಿ ಪ್ರತಿಮೆಸಹಿತ ಕರ್ನಾಟಕದ ಎಲ್ಲಾ 31 ಜಿಲ್ಲೆಗಳ ಪರಿಚಯ ಮಾಡಿಕೊಡುವ ವಿಶೇಷ ಕರ್ನಾಟಕ ಪಾರಂಪರಿಕ ರಥಯಾತ್ರೆ ಎಲ್ಲಾ 31 ಜಿಲ್ಲೆಗಳ ಸಹಿತ ಎಲ್ಲಾ ತಾಲ್ಲೂಕು ಕೇಂದ್ರ, ಹೋಬಳಿ ಕೇಂದ್ರ ಹಾಗೂ ಮತ್ತು ಎಲ್ಲ ಗ್ರಾಮಗಳಲ್ಲೂ ಪರ್ಯಟನೆ ನಡೆಸಲಿದೆ. ಇದಕ್ಕೆ‌‌ ಸಂಬಂಧಿಸಿದ ರೂಟ್ ಮ್ಯಾಪ್ ಕೂಡ ಸಿದ್ಧಪಡಿಸಿದ್ದು, ಅದರಂತೆ ರಥಯಾತ್ರೆ ಹಾಗೂ ಜ್ಯೋತಿ ಸಾಗಲಿದೆ.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ: ರಾಜ್ಯದ ಪ್ರತಿ ಶಾಲೆಗಳು, ವಲಯಮಟ್ಟ, ತಾಲ್ಲೂಕು ಮಟ್ಟ, ಜಿಲ್ಲಾ‌ ಮಟ್ಟ, ನಾಲ್ಕು ಕಂದಾಯ ವಿಭಾಗಗಳು ಮತ್ತು ರಾಜ್ಯ ಮಟ್ಟದಲ್ಲಿ‌ ನನ್ನ ಭಾಷೆ, ನನ್ನ ಹಾಡು ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ‌ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವುದು. ಕನ್ನಡ ಭಾಷೆ, ರಾಜ್ಯದ ಕುರಿತು ಮಕ್ಕಳಲ್ಲಿ ಅಭಿಮಾನ ಮೂಡಿಸಬೇಕು ಎಂಬುದು ‌ಇದರ ಹಿಂದಿನ‌ ಆಶಯ. ಹಾಗೆಯೇ ವಿಶೇಷವೆಂದರೆ 1973ರಲ್ಲಿ‌‌‌ ಅಂದಿನ‌‌ ಮುಖ್ಯಮಂತ್ರಿ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟ ಬಳಿಕ ನ.2ರಂದು ಹಂಪಿಯಲ್ಲಿ ಹಾಗೂ ನ.3.ರಂದು ಗದಗ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅದೇ ಮಾದರಿಯಲ್ಲಿ ಎರಡು ಜಿಲ್ಲೆಗಳಲ್ಲಿ ಕಾರ್ಯಕ್ರಮ‌ ನಡೆಯಲಿದೆ.‌

ಸಚಿವ ಶಿವರಾಜ ತಂಗಡಗಿ ಹೇಳಿದ್ದೇನು?: ಈಗಾಗಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ನಡೆಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು, ಅರ್ಥಪೂರ್ಣವಾಗಿ ಕಾರ್ಯಕ್ರಮಗಳು ನಡೆಯುವ ಬಗ್ಗೆ ತಮ್ಮ‌ ಜಿಲ್ಲೆಗಳಲ್ಲಿ ‌ರಥಯಾತ್ರೆ ಹಾಗೂ ಜ್ಯೋತಿ ಬಂದಾಗ ಮಾಡಬೇಕಾದ ಕೆಲಸಗಳ ಬಗ್ಗೆ ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳ ಸ್ಥಳೀಯ ಕಲಾಪ್ರಕಾರ, ಸ್ಥಳೀಯ ಕಲಾವಿದರು ಹಾಗೂ ಕಲಾ ತಂಡಗಳನ್ನು ಬಳಸಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಕಲಾ ಪ್ರಕಾರಗಳನ್ನು ಹಳೇ ಮೈಸೂರು ಭಾಗಕ್ಕೆ ಇಲ್ಲಿನ‌ ಕಲಾ ಪ್ರಕಾರಗಳನ್ನು ಆ ಭಾಗಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಲಾಗುತ್ತದೆ. ಕನ್ನಡ ಸಾಂಸ್ಕೃತಿಕ ಲೋಕದ ಹಬ್ಬ ಇದಾಗಿದ್ದು, ಕನ್ನಡದ ಸೊಗಡನ್ನು ಯುವ ಪೀಳಿಗೆಗೆ ಪರಿಚಯಿಸುವ‌ ಉದ್ದೇಶ ಹೊಂದಿದ್ದು, ಹೊರನಾಡು ಕನ್ನಡಿಗರು ಹಾಗೂ ಅನಿವಾಸಿ ಕನ್ನಡಿಗರು ಕೂಡ ಇದರಲ್ಲಿ ಪಾಲ್ಗೊಳ್ಳಬೇಕು. 50ಕ್ಕೂ ಹೆಚ್ಚು ದೇಶದಲ್ಲಿನ ಅನಿವಾಸಿ ಕನ್ನಡಿಗರೊಂದಿಗೆ ಈ ಸಂಭ್ರಮದಲ್ಲಿ‌ ಪಾಲ್ಗೊಳ್ಳುವ ಬಗ್ಗೆ ಶೀಘ್ರದಲ್ಲೇ ವರ್ಚುವಲ್ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಮೂಲಕ ಇದು ಸರ್ಕಾರದ ಹಬ್ಬವಲ್ಲ,‌ ಕರ್ನಾಟಕದ ಪ್ರತಿಯೊಂದು ಮನೆ-ಮನಗಳ ಹಬ್ಬವಾಗಬೇಕು ಎಂಬುದು ನಮ್ಮ ಉದ್ದೇಶ. ಈ ಸಂಭ್ರಮದಲ್ಲಿ ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳು ಕರ್ನಾಟಕ ಸಂಭ್ರಮದ ಭಾಗವಾಗಲಿದ್ದು, ಅವರೊಂದಿಗೂ ಚರ್ಚೆ ನಡೆಸಲಾಗಿದೆ. ಅವರ ಕಚೇರಿಗಳಲ್ಲಿ ಕನ್ನಡದ ಕಂಪು ಕುರಿತು ಕಾರ್ಯಕ್ರಮ ಆಯೋಜನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕನ್ನಡ ಗೀತೆಗಳ ಗಾಯನ: ನ. 1ರಂದು ರಾಜ್ಯೋತ್ಸವ ‌ಕಾರ್ಯಕ್ರಮದಲ್ಲಿ ನಾಡಿನ‌ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು‌ ಕನ್ನಡಾಂಬೆಗೆ ನುಡಿ ನಮನ(ಗೀತೆ ಗಾಯನ) ಸಲ್ಲಿಸುವ ಬಗ್ಗೆ ಆದೇಶ ಕೂಡ ಆಗಿದೆ. ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ಅವರ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ್ ಹೊತ್ತಿತ್ತೋ ಹೊತ್ತಿತ್ತು ಕನ್ನಡದ ದೀಪ, ಚನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಗೀತಾ ಗಾಯನ ನಡೆಯಲಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ: ಈ ಬಾರಿ 68 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.. 2 ದಿನದಲ್ಲಿ ಪಟ್ಟಿ ಪ್ರಕಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.