ETV Bharat / state

ಬಿಎಂಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಸುಟ್ಟು ಕರಕಲು: ವಿಡಿಯೋ

author img

By ETV Bharat Karnataka Team

Published : Dec 4, 2023, 12:40 PM IST

Updated : Dec 4, 2023, 2:40 PM IST

Car collided with BMTC bus: ಇಂದು ಬೆಳಿಗ್ಗೆ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಬಸ್​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

caught fire in a car
ಬಸ್​ನೊಂದಿಗೆ ಉರಿಯುತ್ತಿರುವ ಕಾರು

ಬಿಎಂಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಸುಟ್ಟು ಕರಕಲು

ಬೆಂಗಳೂರು: ವೇಗವಾಗಿ ಬಂದ ಕಾರು ಬಿಎಂಟಿಸಿ ಬಸ್‌ಗೆ ಡಿಕ್ಕಿಯಾಗಿ ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆಯಿತು.

ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ ಬಸ್​ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಿಕೊಳ್ಳಲು ಚಂದ್ರಾಲೇಔಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಉಂಟಾದ ಘರ್ಷಣೆಯಿಂದ ಬೆಂಕಿ ಹತ್ತಿಕೊಂಡಿದ್ದು, ಕಾರು ಪೂರ್ತಿಯಾಗಿ ಅಗ್ನಿಗಾಹುತಿಯಾಯಿತು. ಬಸ್ಸಿನ ಹಿಂಬದಿ ಆಸನಗಳು ಸುಟ್ಟು ಕರಕಲಾಗಿವೆ. ಕಾರು ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಇನ್ನು ಕಾರಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಒಳಗಿದ್ದವರು ತಕ್ಷಣವೇ ಕೆಳಗಿಳಿದಿದ್ದಾರೆ. ಘಟನೆಯಲ್ಲಿ ಕಾರಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಇನ್ನು ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ಸಿನ ಚಾಲಕ ಸಮಯಪ್ರಜ್ಞೆ ಮೆರೆದು ಕಾರಿನಿಂದ ದೂರಕ್ಕೆ ಬಸ್ ಅನ್ನು ತೆಗೆದುಕೊಂಡು ಹೋಗಿ ಆಗಬಹುದಾದ ಅಪಾಯ ತಪ್ಪಿಸಿದ್ದಾರೆ.

ಇದನ್ನೂ ಓದಿ: ಕಾರಿಗೆ ಗುದ್ದಿದ ಬೈಕ್​ ಸವಾರನ ಮೇಲೆ ಗದರಿದ ಭವಾನಿ‌ ರೇವಣ್ಣ: ವಿಡಿಯೋ ವೈರಲ್​

Last Updated : Dec 4, 2023, 2:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.