ETV Bharat / state

ಕಿಲ್ಲರ್​ ಬಿಎಂಟಿಸಿ ಬಸ್​​ಗೆ ಖಾಸಗಿ ಕಂಪನಿ ಉದ್ಯೋಗಿ ಬಲಿ

author img

By

Published : Jul 18, 2019, 9:26 PM IST

ವಿಘ್ನ ಸಾಗರ್

ಬೆಂಗಳೂರಿನ ವೈಟ್ ಫೀಲ್ಡ್ ಮುಖ್ಯರಸ್ತೆಯಲ್ಲಿ ಇಂದು ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿಘ್ನ ಸಾಗರ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಇಂದು ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿವೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ವೈಟ್ ಫೀಲ್ಡ್ ಮುಖ್ಯರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟಿರುವ ಯುವಕ ವಿಘ್ನ ಸಾಗರ್(೨೪) ಎಂದು ತಿಳಿದುಬಂದಿದೆ. ಮೂಲತಃ ಬಳ್ಳಾರಿಯವನಾದ ವಿಘ್ನ ಸಾಗರ್ ವೈಟ್ ಫೀಲ್ಡ್ ನ ಖಾಸಗಿ ಕಂಪನಿಯಲ್ಲಿ ಮೆಕ್ಯಾನಿಕ್​ ಆಗಿ ಕೆಲಸ ಮಾಡಿಕೊಂಡು ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪಟ್ಟಣದಲ್ಲಿ ನೆಲೆಸಿದ್ದರು.

ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ: ಓರ್ವ ಬಲಿ

ಎಂದಿನಂತೆ ಇಂದು ಬೆಳಗ್ಗೆ ತಮ್ಮ ಬೈಕ್ ನಲ್ಲಿ ಕೆಲಸಕ್ಕೆ ಬರುವಾಗ ವೈಟ್ ಫೀಲ್ಡ್ ಮುಖ್ಯರಸ್ತೆಯ ಕಾಡುಗೋಡಿಯ ಸಫಲ್ ಆಯಿಲ್ ಕಂಪನಿ ಬಳಿ ಹಿಂಬದಿಯಿಂದ ಬಿಎಂಟಿಸಿ ಬಸ್ ಇವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸದಿಂದ ವಿಘ್ನ ಸಾಗರ್​ ರಸ್ತೆಗೆ ಬಿದ್ದಾಗ ತಲೆಯ ಮೇಲೆ ಬಸ್ ಚಕ್ರ ಹರಿದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವಿಘ್ನ ಸಾಗರ್ ಪೋಷಕರ ಇಬ್ಬರು ಮಕ್ಕಳಲ್ಲಿ ದೊಡ್ಡವನಾಗಿದ್ದು, ಪೋಷಕರಿಗೆ ಆಧಾರ ಸ್ತಂಭವಾಗಿದ್ದ ಮಗನನ್ನು ಕಳೆದುಕೊಂಡ ಪೋಷಕರಿಗೆ ಆಕಾಶವೇ ಕಳಚಿ ತಲೆ ಬಿದ್ದಂತಾಗಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ಸದ್ಯ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಿಲ್ಲರ್ ಬಿಎಂಟಿಸಿ ಗೆ ಯುವಕ ಬಲಿ


ಆತ ಮೂಲತಹ ಬಳ್ಳಾರಿಯವನಾಗಿದ್ದು, ವೃತ್ತಿಯಲ್ಲಿ ಮೆಕ್ಯಾನಿಕಲ್ ಆಗಿದ್ದು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಇಂದು ಬೆಳಗ್ಗೆ ಬೈಕ್ ಏರಿ ಕೆಲಸಕ್ಕೆ ತೆರಳುವಾಗ ಯಮ‌ಸ್ವರೂಪಿಯಾಗಿ ಬಂದ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆತನ ತಲೆಯ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.


ಪೋಟೊದಲ್ಲಿ ಕಾಣುವ ಯುವಕನ ಹೆಸರು ವಿಘ್ನ ಸಾಗರ್(೨೪). ಮೂಲತಹ ಬಳ್ಳಾರಿಯವನಾದ ಈತ ಬೆಂಗಳೂರಿನ ವೈಟ್ ಫೀಲ್ಡ್ ನ ಖಾಸಗಿ ಕಂಪನಿಯಲ್ಲಿ ಮೆಕ್ಯಾನಿಕಲ್ ಆಗಿ ಕೆಲಸ ಮಾಡಿಕೊಂಡು ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪಟ್ಟಣದಲ್ಲಿ ನೆಲೆಸಿದ್ದ. ಎಂದಿನಂತೆ ಇಂದು ಬೆಳಗ್ಗೆ ತನ್ನ ಬೈಕ್ ನಲ್ಲಿ ಕೆಲಸಕ್ಕೆ ಬರುವಾಗ ವೈಟ್ ಫೀಲ್ಡ್ ಮುಖ್ಯರಸ್ತೆಯ ಕಾಡುಗೋಡಿಯ ಸಫಲ್ ಆಯಿಲ್ ಕಂಪನಿ ಹತ್ತಿರ ಹಿಂಬದಿಯಿಂದ ಬಿಎಂಟಿಸಿ ಬಸ್ ಈತನ ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಾಗ ತಲೆಯ ಮೇಲೆ ಬಸ್ ಚಕ್ರ ಹರಿದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.



Body:ಇನ್ನು ಮೃತ ವಿಜ್ನಾಸಾಗರ್ ಪೋಷಕರ ಇಬ್ಬರು ಮಕ್ಕಳಲ್ಲಿ ದೊಡ್ಡವನಾಗಿದ್ದು ಪೋಷಕರಿಗೆ,ಆಧಾರ ಸ್ಥಂಬವಾಗಿದ್ದ ಮಗನನ್ನು ಕಳೆದುಕೊಂಡ ಪೊಷಕರಿಗೆ ಆಕಾಶವೆ ಕಳಚಿ ಬಿದ್ದಂತಾಗಿದೆ. ಈ ಸಂಬಂದ ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಕೆಲಸ ಅರಿಸಿ ದೂರದ ಬಳ್ಳಾರಿ ಯ ಕಪ್ಲಿಯಿಂದ ಬೆಂಗಳೂರಿಗೆ ಬಂದ ಯುವಕ ಅಪಘಾತದಲ್ಲಿ ಕೊನೆ ಊಸಿರು ಬಿಟ್ಟಿದ್ದಾನೆ.

ಪೋಷಕರ ಮುದ್ದಿನ ಮಗನಾಗಿ, ಸಹೋದ್ಯೋಗಿಗಳ ನೆಚ್ಚಿನ ಗೆಳೆಯನಾಗಿದ್ದ ವಿಘ್ನ ಸಾಗರ್ ಅಕಾಲಿಕ ಸಾವಿನಿಂದ ಕಂಗಾಲಾಗಿರುವುದು ಮಾತ್ರ ವಿಪರ್ಯಾಸ.

ಧರ್ಮರಾಜು ಎಂ ಕೆಆರ್ ಪುರ.

ಬೈಟ್: ಅಯ್ಯಪ್ಪ, ಸಹೋದ್ಯೋಗಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.