ETV Bharat / state

Watch.. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದ ಡಿವೈನ್ ಸ್ಟಾರ್

author img

By

Published : Mar 16, 2023, 8:32 PM IST

Updated : Mar 17, 2023, 7:15 AM IST

ನಟ ರಿಷಬ್ ಶೆಟ್ಟಿ
ನಟ ರಿಷಬ್ ಶೆಟ್ಟಿ

ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಪರಿಸರ ಮತ್ತು ಅರಣ್ಯದಂಚಿನಲ್ಲಿರೋ ಜನರ ಸಮಸ್ಯೆಗಳ ಬಗ್ಗೆ ಕನ್ನಡದಲ್ಲೇ ಮಾತನಾಡಿ ಗಮನ ಸೆಳೆದಿದ್ದಾರೆ.

ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ನಟ ರಿಷಬ್ ಶೆಟ್ಟಿ

ಬೆಂಗಳೂರು: ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯ ನಿರ್ವಹಿಸುತ್ತಿರುವ ಭಾರತದ ಏಕೋಪಾಸ್​ ಪ್ರತಿನಿಧಿಯಾಗಿ ನಾನು ವಿಶ್ವಸಂಸ್ಥೆಗೆ ಬಂದಿದ್ದೇನೆ. ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇವಾಗಿದೆ ಎಂದು ವಿಶ್ವಸಂಸ್ಥೆಯಲ್ಲಿ ರಿಷಬ್​ ಶೆಟ್ಟಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ವಿಶ್ವದ ಹಲವು ದೇಶದ ಪ್ರತಿನಿಧಿಗಳ ಮುಂದೆ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕನ್ನಡದಲ್ಲೇ ನಮ್ಮ ಪರಿಸರ ಮತ್ತು ಅರಣ್ಯದಂಚಿನಲ್ಲಿರೋ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವ ಮೂಲಕ ಭಾಷಾ ಅಭಿಮಾನ ಮೆರೆದಿದ್ದಾರೆ. ಈ ಮೂಲಕ ಕನ್ನಡದಲ್ಲಿ ಭಾಷಣ ಮಾಡಿದ ಮೊದಲ ಕನ್ನಡಿಗ ಎಂಬ ಕೀರ್ತಿಗೂ ರಿಷಬ್ ಶೆಟ್ಟಿ ಪಾತ್ರರಾಗಿದ್ದಾರೆ. ವಿಶ್ವಸಂಸ್ಥೆಯಲ್ಲಿ ರಿಷಬ್​ ಶೆಟ್ಟಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಕೂಡಾ ಆಗುತ್ತಿದೆ. ಇಂದು ವಿಶ್ವಸಂಸ್ಥೆಯಲ್ಲಿ ಕನ್ನಡದ ದನಿ ಸದ್ದು ಮಾಡಿ ಗಮನ ಸೆಳೆದಿರುವುದು ವಿಶೇಷ.

ಕಾಂತಾರ ಸಿನಿಮಾದಿಂದ ಭಾರತೀಯ ಚಿತ್ರರಂಗ ಅಲ್ಲದೇ ವಿಶ್ವದ್ಯಾಂತ ಗಮನ ಸೆಳೆದ ನಟ ರಿಷಬ್ ಶೆಟ್ಟಿ. ದಕ್ಷಿಣ ಕನ್ನಡದಲ್ಲಿ ದೈವರಾಧನೆ, ಭೂತಕೋಲ ಹಾಗೂ ಮನುಷ್ಯ ಮತ್ತು ಪ್ರಕೃತಿ ಸಂಘರ್ಷಗಳ ಕಥೆ ಆಧರಿಸಿ ಬಂದ ಕಾಂತಾರ ಚಿತ್ರದಲ್ಲಿ ನಟಿಸಿ ನಂತರ ನಿರ್ದೇಶನ ಮಾಡಿದರು. ಈ ಸಿನಿಮಾದ ಬಗ್ಗೆ ಕನ್ನಡ ಚಿತ್ರರಂಗ ಸೇರಿ ಇಡೀ ವಿಶ್ವವೇ ಮಾತನಾಡುವ ಹಾಗೆ ಮಾಡಿತ್ತು. 15 ಕೋಟಿ ಬಜೆಟ್ ನಿರ್ಮಾಣದ ಮೂಲಕ ನಿರ್ಮಾಣವಾದ ಕಾಂತಾರ ಚಿತ್ರ ಬರೋಬ್ಬರಿ 400 ಕೋಟಿ ಅಧಿಕ ಬಾಕ್ಸ್ ಆಫೀಸ್​​ನಲ್ಲಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಡಿವೈನ್​ಸ್ಟಾರ್​​ನನ್ನಾಗಿ ಮಾಡಿತ್ತು.

ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಮಾತನಾಡಿರುವ ಪ್ರತಿ
ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ನಟ ರಿಷಬ್ ಶೆಟ್ಟಿ ಮಾತನಾಡಿರುವ ಪ್ರತಿ

ಇದನ್ನೂ ಓದಿ : ನಾಟು ನಾಟು ಸಾಧನೆಗೆ ಅಮೆರಿಕನ್ ಗಾಯಕ ಪ್ರಶಂಸೆ: ಭಾವುಕರಾದ ಕೀರವಾಣಿ, RRR ತಂಡ

ವಿಶ್ವಾದ್ಯಂತ ಬಹು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಕನ್ನಡ ಚಲನಚಿತ್ರ ಕಾಂತಾರ ವಿಶ್ವಸಂಸ್ಥೆಯ ಜಿನೀವಾದಲ್ಲಿ ಮಾರ್ಚ್ 17 ರಂದು ಹಾಲ್ ಸಂಖ್ಯೆ 13 ನಲ್ಲಿರುವ ಪಾಥೆ ಬಾಲೆಕ್ಸರ್ಟ್‌ನಲ್ಲಿ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಈಗಾಗಲೇ ಜಿನೀವಾ ತಲುಪಿದ್ದು, ಮೌಖಿಕ ಸಲ್ಲಿಕೆ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ : ಚಿತ್ರರಂಗಕ್ಕೆ ಅಜಯ್-ಕಾಜೋಲ್ ಪುತ್ರನ ಎಂಟ್ರಿ ಬಗ್ಗೆ ಕೇಳಿದ್ದಕ್ಕೆ ದೇವ್​ಗನ್​ ಉತ್ತರವೇನು ಗೊತ್ತಾ?

ಸೆಂಟರ್ ಫಾರ್ ಗ್ಲೋಬಲ್ ಅಫೇರ್ಸ್ ಮತ್ತು ಪಬ್ಲಿಕ್ ಪೊಲೀಸ್​ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ರಿಷಬ್ ಶೆಟ್ಟಿ ಅವರು ಜೆನೆರಾದಲ್ಲಿ ಯುಎನ್‌ಎಚ್‌ಆರ್‌ಸಿ ಅಧಿವೇಶನದಲ್ಲಿ ಪರಿಸರ, ಹವಾಮಾನ ಮತ್ತು ಸಂರಕ್ಷಣೆಯ ಕುರಿತು ಮಾತನಾಡಲಿದ್ದಾರೆ ಅಂತಾ ಹೇಳಲಾಗಿತ್ತು. ಅದರಂತೆ ಗುರುವಾರವೇ ರಿಷಬ್​ ಶೆಟ್ಟಿ ಮಾತನಾಡಿದ್ದಾರೆ.

ನಟ ರಿಷಬ್ ಶೆಟ್ಟಿ
ನಟ ರಿಷಬ್ ಶೆಟ್ಟಿ

ಇದನ್ನೂ ಓದಿ : ಬಿಜಿಲಿ ಮಹಾದೇವರ ದರ್ಶನ ಪಡೆದ ಬಾಲಿವುಡ್​ ನಟಿ ಸಾರಾ ಅಲಿಖಾನ್​​

ಇನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ ಕಾಂತಾರ, ಮನುಷ್ಯ ಪ್ರಕೃತಿ ಸಂಘರ್ಷಗಳನ್ನು ಒಳಗೊಂಡಿದೆ ಮತ್ತು ಜಾನಪದ ಮೂಲ ಕಥೆಯಾಗಿದೆ. ಚಿತ್ರದಲ್ಲಿ ಕಿಶೋರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್ ಕೂಡ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿತ್ತು. ಒಟ್ಟಾರೆ ನಾಡಿನ ಸಂಸ್ಕೃತಿ, ಆಚರಣೆ, ಆಚಾರ ಹಾಗು ವಿಚಾರವನ್ನು ಸಿನಿಮಾ ಮೂಲಕ ತೋರಿಸುತ್ತಿರುವ ರಿಷಬ್‌ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿರೋದು ಕನ್ನಡಿಗರಷ್ಟೇ ಅಲ್ಲ ಇಡೀ ದೇಶವೇ ಹೆಮ್ಮೆ ಪಡುವಂತೆ ಆಗಿದೆ.

  • ಹೆಮ್ಮೆಯ ಕನ್ನಡಿಗನೊಬ್ಬ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ಕನ್ನಡದಲ್ಲಿ ಮಾತನಾಡಿದ್ದು ನಿಜಕ್ಕೂ ಅದ್ಭುತ. ಅಭಿನಂದನೆಗಳು @shetty_rishab, ನಿಮ್ಮ ಕನ್ನಡಪ್ರೇಮಕ್ಕೆ ನನ್ನ ಹೃದಯಾಂತರಾಳದಿಂದ ಗೌರವವನ್ನು ಅರ್ಪಿಸುತ್ತೇನೆ.
    1/2 https://t.co/PSIbFH0Ea2

    — Basavaraj S Bommai (@BSBommai) March 16, 2023 " class="align-text-top noRightClick twitterSection" data=" ">

ಇದನ್ನೂ ಓದಿ : ಹೊಸ ಫೋಟೋ ಶೇರ್ ಮಾಡಿದ ಅನುಷ್ಕಾ ಶರ್ಮಾ: ಅಭಿಮಾನಿಗಳು ಹೀಗಂದ್ರು ನೋಡಿ!

Last Updated :Mar 17, 2023, 7:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.