ETV Bharat / state

ಮೈತ್ರಿ ನಾಯಕರ ಸಂಪರ್ಕದಲ್ಲಿ ಇಲ್ಲ, ಬಿಜೆಪಿ ಬಿಡಲ್ಲ: ಎಂ.ಪಿ.ಕುಮಾರಸ್ವಾಮಿ

author img

By

Published : Jul 7, 2019, 11:25 PM IST

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪಕ್ಷ ಬೀಡುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಅದೆಲ್ಲ ಸುಳ್ಳು ಎಂದು ಖುದ್ದು ಎಂ.ಪಿ.ಕುಮಾರಸ್ವಾಮಿಯವರೇ ಸ್ಪಷ್ಟೀಕರಣ ನೀಡಿದ್ದಾರೆ.

M.P Kumaraswamy

ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ. ಮೈತ್ರಿ ಪಕ್ಷಗಳ ಯಾರೊಂದಿಗೂ ನಾನು ಸಂಪರ್ಕದಲ್ಲಿಯೂ ಇಲ್ಲ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಮೈತ್ರಿ ಪಕ್ಷದ ಸಂಪರ್ಕದಲ್ಲಿ ಇಲ್ಲ, ಬಿಜೆಪಿ ಬಿಡಲ್ಲ: ಎಂ.ಪಿ.ಕುಮಾರಸ್ವಾಮಿ

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿಯೂ‌ ಹೋಗಿಲ್ಲ. ಊರಲ್ಲಿಯೇ ಇದ್ದೇನೆ. ನಾನು ಪಕ್ಷಕ್ಕೆ ಬದ್ಧನಾಗಿದ್ದೇನೆ. ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿದ್ದು, ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡೋದಿಲ್ಲ ಎಂದಿದ್ದಾರೆ.

ಮಾಧ್ಯಮಗಳಲ್ಲಿ ಎಂ.ಪಿ.ಕುಮಾರಸ್ವಾಮಿ ಪಕ್ಷ ಬೀಡುತ್ತಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಆದರೆ, ಅದೆಲ್ಲ ಸುಳ್ಳು ಎಂದು ಎಂ.ಪಿ.ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದರು.

Intro:


ಬೆಂಗಳೂರು:ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ, ಮೈತ್ರಿ ಪಕ್ಷದ ಯಾರೊಂದಿಗೂ ನಾನು ಸಂಪರ್ಕದಲ್ಲಿಯೂ ಇಲ್ಲ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿಯೂ‌ ಹೋಗಿಲ್ಲ ಇಲ್ಲಿಯೇ ಇದ್ದೇನೆ,ನನಗೆ ಹುಚ್ಚನಾಯಿ ಕಡಿದಿಲ್ಲ.ನಾನು ಪಕ್ಷ ಬಿಡಲ್ಲ.ನಾನು ಪಕ್ಷಕ್ಕೆ ಬದ್ದನಾಗಿದ್ದೇನೆ.ಕ್ಷೇತ್ರದ ಜನರು ಆಯ್ಕೆ ಮಾಡಿದ್ದಾರೆ.
ಕ್ಷೇತ್ರದ ಜನರಿಗೆ ನಾನು ಬದ್ದನಾಗಿದ್ದೇನೆ.ಮಾಧ್ಯಮಗಳಲ್ಲಿ ಎಂ.ಪಿ.ಕುಮಾರಸ್ವಾಮಿ ಪಕ್ಷ ಬೀಡುತ್ತಾರೆ ಅಂತ ಸುದ್ದಿ ಬರುತ್ತಿದೆ ಆದರೆ ಅದೆಲ್ಲ ಸುಳ್ಳು ಎಂದು ಎಂ.ಪಿ.ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದರು.Body:.Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.