ಪುಸ್ತಕ ಓದಿ ಅರ್ಥಶಾಸ್ತ್ರ ಹೇಳಬೇಡಿ, ವಾಸ್ತವ ನೋಡಿ ಅರ್ಥಶಾಸ್ತ್ರ ತಿಳಿದುಕೊಳ್ಳಿ: ಅಮಿತ್​ ಶಾ

author img

By

Published : Aug 4, 2022, 6:54 PM IST

'ಡಾಲರ್ ಮಾತ್ರವಲ್ಲ, ಯೂರೋಪ್, ಜಪಾನ್ ಕರೆನ್ಸಿ ಜೊತೆಗೂ ರೂಪಾಯಿ ಹೋಲಿಕೆ ಮಾಡಿ'

ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ದಿ ಸಮ್ಮೇಳನದ ಮೂರನೇ ಆವೃತ್ತಿಯನ್ನು ಕೇಂದ್ರ ಸಚಿವ ಅಮಿತ್​ ಶಾ ಉದ್ಘಾಟಿಸಿದರು.

ಬೆಂಗಳೂರು: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ ಎನ್ನುವುದು ನಿಜ. ಆದರೆ, ಇತರ ದೇಶಗಳ ರೂಪಾಯಿ ಜೊತೆಯಲ್ಲಿಯೂ ನಮ್ಮ ರೂಪಾಯಿ ಮೌಲ್ಯವನ್ನು ಹೋಲಿಕೆ ಮಾಡಿ ನೋಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಸಮ್ಮೇಳನದ ಮೂರನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ನಂತರ ಭಾರತದ ಜಿಡಿಪಿ 7.4 ಆಗಿದೆ. ವಿಶ್ವದ ಶ್ರೀಮಂತ ರಾಷ್ಟ್ರಗಳ ಜಿಡಿಪಿ ಬಿದ್ದು ಹೋಗಿದೆ. Ease of doing business ನಲ್ಲಿ 143 ನೇ ಸ್ಥಾನದಿಂದ 63 ಕ್ಕೆ ಬಂದಿದ್ದೇವೆ. ರೂಪಾಯಿ ಮೌಲ್ಯದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ, ಚೀನಾ, ಯುರೋಪ್, ಜಪಾನ್ ರೂಪಾಯಿಗಳ ಬಗ್ಗೆಯೂ ನಾವು ಹೋಲಿಕೆ ಮಾಡಿಕೊಳ್ಳಬೇಕು. ಪಿಎಂ ಗತಿಶಕ್ತಿಯಿಂದ ಉದ್ಯಮಗಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಪಾಲಿಸಿ ಮೂಲಕ ಅಭಿವೃದ್ಧಿ: ನಾವು ರಾಷ್ಟ್ರೀಯ ಶಿಕ್ಷಣ ನೀತಿ, ಆರೋಗ್ಯ ನೀತಿ, ಎಲೆಕ್ಟ್ರಾನಿಕ್ಸ್ ನೀತಿ, ಡಿಜಿಟಲ್ ಇಂಡಿಯಾ, ಉಡಾನ್, ಗ್ರೀನ್ ಇಂಡಿಯಾ, ಸ್ವಚ್ಛ ಭಾರತ ಭಾರತ ಅಭಿಯಾನ ಮಾಡಿದೆವು. ಅದರ ಪರಿಣಾಮ ಸ್ವಸ್ಥ ಭಾರತ ನಿರ್ಮಾಣ ಮಾಡಲು ಸಾಧ್ಯವಾಯಿತು. ಭಾರತವನ್ನು ಉತ್ಪಾದನಾ ಹಬ್ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ನೀತಿಗಳ ಮೂಲಕ ನಾವು ದೇಶದ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಪುಸ್ತಕ ನೋಡಿ ಅರ್ಥಶಾಸ್ತ್ರ ಹೇಳ್ಬೇಡಿ: ಪುಸ್ತಕ ಓದಿ ಅರ್ಥಶಾಸ್ತ್ರ ಹೇಳಬೇಡಿ, ವಾಸ್ತವ ನೋಡಿ ಅರ್ಥಶಾಸ್ತ್ರ ಹೇಳಬೇಕು. ಪ್ರತಿ ಮನೆಗೆ ನೀರು ಬಂದರೆ, ವಿದ್ಯುತ್ ಬಂದರೆ ಜಿಡಿಪಿ ಅಭಿವೃದ್ಧಿ ಆಗುವುದಿಲ್ಲವೇ, ಅದನ್ನು ಪುಸ್ತಕದಲ್ಲಿ ಬರೆದಿಲ್ಲ ಎಂದು ಚಿಂತಿಸಬೇಡಿ, ನಾವು ಜಿಡಿಪಿಯನ್ನು ಸುಸ್ಥಿತಿಯಲ್ಲಿ ಇಟ್ಟಿದ್ದೇವೆ. ಉದ್ಯಮಗಳು ಸ್ಕೇಲ್ ಬದಲಾಯಿಸಬೇಕಿದೆ. ಆರ್ ಆಂಡ್ ಡಿ ಕಡೆಗೆ ಹೆಚ್ಚಿನ ಗಮನ ಹರಿಸಬೆಕಿದೆ. ದೇಶದ ವ್ಯಾಪ್ತಿಯಲ್ಲಿ ಆರ್ ಅಂಡ್ ಡಿ ಮಾಡಬೇಕು. ಸ್ಟಾರ್ಟ್ ಅಪ್ ಗಳು ಮತ್ತು ಉದ್ಯಮಗಳ ನಡುವೆ ಜೋಡಣೆ ಮಾಡಿ ಅಭಿವೃದ್ಧಿಯಾಗಬೇಕು. ಉದ್ಯಮಗಳು ಕಚ್ಚಾ ವಸ್ತುವಿನಿಂದ ಹಿಡಿದು ಉತ್ಪಾದನೆಯಾದ ವಸ್ತುವನ್ನು ರಫ್ತು ಮಾಡುವವರೆಗೂ ಎಲ್ಲವೂ ಆತ್ಮನಿರ್ಭರವಾಗಬೇಕು. ಉದ್ಯಮ ಪ್ರತ್ಯೇಕವಾಗಿ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ದೇಶದ ಜನರ ಜೊತೆಗೆ ಅಭಿವೃದ್ಧಿ ಮಾಡುವುದು ನಮ್ಮ ಉದ್ದೇಶವಾಗಿದೆ. ದೇಶದ ಅಭಿವೃದ್ಧಿಯಲ್ಲಿ ನಿಮ್ಮ ಸಹಕಾರ ಇರಲಿ ಎಂದು ಅಮಿತ್​ ಶಾ ಮನವಿ ಮಾಡಿದರು.

ಸರ್ವವ್ಯಾಪಿ ಸರ್ವಸ್ಪರ್ಶಿ: ಗ್ರಾಮೀಣ ಭಾರತದಲ್ಲಿ ಸೂರು ಇಲ್ಲದವರಿಗೆ ಸೂರು ಕಲ್ಪಿಸಿ, ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಿ, ಉರುವಲು ಸೌದೆಯನ್ನು ಬಳಸಿ ಅಡುಗೆ ಮಾಡುತ್ತಿದ್ದ ಮಹಿಳೆಯರ ಆರೋಗ್ಯ ಕಾಪಾಡಲು ಅಡುಗೆ ಅನಿಲದ ಸಿಲಿಂಡರ್​ಗಳನ್ನು ಉಚಿತವಾಗಿ ಒದಗಿಸಿ ಹಾಗೂ ಬೆಳಕು ಇಲ್ಲದೇ ಕತ್ತಲಲ್ಲೇ ಜೀವಿಸುತ್ತಿದ್ದ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ, ಎಲ್ಲೆಡೆ ಸಂಪತ್ತು ಸೃಜಿಸಿ, ಕೇಂದ್ರ ಸರ್ಕಾರ ಸರ್ವವ್ಯಾಪಿ ಹಾಗೂ ಸರ್ವಸ್ಪರ್ಶಿ ಸರ್ಕಾರ ಎನಿಸಿದೆ ಎಂದು ಬಣ್ಣಿಸಿದರು.

ಸ್ವಸ್ಥ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಸ್ವಚ್ಛ ಭಾರತ ಯೋಜನೆಯನ್ನು ಏಕಕಾಲಕ್ಕೆ ದೇಶವಿಡೀ ಅನುಷ್ಠಾನಕ್ಕೆ ತಂದದ್ದು ಮಾತ್ರವಲ್ಲ, ಇಡೀ ಪರಿಸರವನ್ನು ಸುಧಾರಿಸಿದ ಕೀರ್ತಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ್ದಾಗಿದೆ ಎಂದರು.

ಬ್ಯಾಕ್ ಅಪ್ ಫಾರ್ ಸ್ಟಾರ್ಟ್ ಅಪ್ !: ಕೇಂದ್ರ ಸರ್ಕಾರವು ನವೋದ್ಯಮಗಳಿಗೆ ಬೆನ್ನೆಲುಬಾಗಿ ಹಾಗೂ ಬೆಂಬಲವಾಗಿ ನಿಲ್ಲುವ ಹಲವು ಯೋಜನೆಗಳನ್ನು ರೂಪಿಸಲಿದೆ. ಹೊಸ ಅವಿಷ್ಕಾರಗಳಿಗೆ ಪೇಟೆಂಟ್​​ಗಳನ್ನು ಪಡೆಯಲು, ಭೌದ್ದಿಕ ಹಕ್ಕು (ಇಂಟೆಲೆಕ್ಚುವಲ್ ಪ್ರಾಪರ್ಟಿ ರೈಟ್ಸ್) ಕಾಯ್ದುಕೊಳ್ಳುವ ವಿಧಾನಗಳನ್ನು ಸರಳೀಕರಿಸಲು ಕ್ರಮ ವಹಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ, ಆಮದು ಮತ್ತು ರಫ್ತು ಕ್ಷೇತ್ರಗಳಲ್ಲಿ ಸುಧಾರಣೆ ಹಾಗೂ ಸುಲಭ ವ್ಯವಹಾರಿಕ ಚಟುವಟಿಕೆ (Ease of doing business)​ ಫ್ ಡೂಯಿಂಗ್ ಬ್ಯುಸಿನೆಸ್), ಎಲ್ಲದರ ಫಲವಾಗಿ ಭಾರತವು ವಿಶ್ವದಲ್ಲಿಯೇ ಅತೀ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಕ್ಕೆ ಒತ್ತು ನೀಡಿ ಎಂದು ಭಾರತೀಯ ಕೈಗಾರಿಕಾ ಒಕ್ಕೂಟಕ್ಕೆ ಸಲಹೆ ನೀಡಿದ ಅಮಿತ್ ಶಾ ಅವರು ಕೈಗಾರಿಕಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಒಕ್ಕೂಟವು ವೇದಿಕೆಯಾಗಲಿ ಎಂದು ಆಶಿಸಿದರು.

ವ್ಯವಹಾರ ಮಾಡುವುದು ಸರ್ಕಾರದ ವ್ಯವಹಾರವಲ್ಲ: ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿ. ಕಿಶನ್ ರೆಡ್ಡಿ ಅವರು ಮಾತನಾಡಿ, ಶಿಕ್ಷಣದ ಪ್ರಮಾಣ ಕಡಿಮೆ ಇರುವ ಭಾರತದಲ್ಲಿ ಡಿಜಿಟಲ್ ವ್ಯವಹಾರ ಸಾಧ್ಯವೇ? ಎಂದು ಅಣಕವಾಡುತ್ತಿದ್ದವರಿಗೆ ವಿಶ್ವದಲ್ಲಿಯೇ ಅತೀ ಹೆಚ್ಚು ಡಿಜಿಟಲ್ ವ್ಯವಹಾರ ಭಾರತದಲ್ಲಿ ನಡೆಯುತ್ತಿದೆ ಎಂಬುದನ್ನು ತಿಳಿಹೇಳುವ ಸಮಯ ಇದೀಗ ಕೂಡಿಬಂದಿದೆ ಎಂದರು.

ಭಾರತದಲ್ಲಿ ರಸ್ತೆ, ರೈಲು, ವಿಮಾನ ಹಾಗೂ ವೈ-ಫೈ ಸಂಪರ್ಕ ಎಲ್ಲೆಡೆ ವ್ಯಾಪಿಸುತ್ತಿದೆ. ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಭಾರತದಲ್ಲಿ 64 ವಿಮಾನ ನಿಲ್ದಾಣಗಳು ಇತ್ತು, ಇದೀಗ ಕಳೆದ ಎಂಟು ವರ್ಷಗಳಲ್ಲಿ 54 ವಿಮಾನ ನಿಲ್ದಾಣಗಳು ಹೊಸದಾಗಿ ಸೇರ್ಪಡೆಗೊಂಡಿವೆ. ಇದರಿಂದ 21 ಹಸಿರು ಕ್ಷೇತ್ರ ವಿಮಾನ ನಿಲ್ದಾಣಗಳೂ ಒಳಗೊಂಡಂತೆ ದೇಶದಲ್ಲಿ 118 ವಿಮಾನ ನಿಲ್ದಾಣಗಳು ಇವೆ. ಮುಂಬರುವ ವರ್ಷಗಳಲ್ಲಿ 100 ವಿಮಾನ ನಿಲ್ದಾಣಗಳು ಹಾಗೂ 100 ಹೆಲಿಪೋರ್ಟ್​ಗಳನ್ನು ನಿರ್ಮಿಸುವ ಯೋಜನೆ ಇದೆ. ಸದಾ ಸಂಘರ್ಷದ ವಾತಾವರಣದಲ್ಲೇ ಜೀವನ ಸಾಗಿಸಬೇಕಿದ್ದ ಈಶಾನ್ಯ ರಾಜ್ಯಗಳಲ್ಲಿಯೂ ಶಾಂತಿ ಸ್ಥಾಪನೆಯಾಗಿದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮಾತ್ರ ಸರ್ಕಾರದ ಕೆಲಸ. ಆದರೆ, ವ್ಯವಹಾರ ಮಾಡುವುದು ಸರ್ಕಾರದ ವ್ಯವಹಾರವಲ್ಲ (Government has no business to do) ಎಂಬ ಮೋದಿ ಸರ್ಕಾರದ ಮಾತುಗಳನ್ನು ವಾಣಿಜ್ಯ ಮತ್ತು ವ್ಯವಹಾರ ಕ್ಷೇತ್ರಗಳು ಸಹೃದಯತೆಯಿಂದ ಸ್ವೀಕರಿಸಿವೆ ಎಂದು ಅಮಿತ್​ ಶಾ ಹೇಳಿದರು.

ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್​​ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿರುವ ಜೆಡಿಎಸ್‍!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.