ETV Bharat / state

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್​ ​.. ಯುವತಿಗೆ ಗಂಭೀರ ಗಾಯ, ಆರೋಪಿ ಬಂಧನ

author img

By

Published : Feb 4, 2023, 11:45 AM IST

Updated : Feb 4, 2023, 1:53 PM IST

Bangalore Hit and run case  Young woman seriously injured  woman treated in ICU  ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್​ ಯುವತಿಗೆ ಗಂಭೀರ ಗಾಯ  ಐಸಿಯುವಿನಲ್ಲಿ ಚಿಕಿತ್ಸೆ  ಅಪಘಾತದಲ್ಲಿ ಯುವತಿ ಗಂಭೀರವಾಗಿ ಗಾಯ  ಗಾಯಗೊಂಡ ಯುವತಿಯ ಹೆಸರು ಸ್ವಾತಿ  ಕೆಂಗೇರಿ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಸಾವು  ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ
ಯುವತಿಗೆ ಗಂಭೀರ ಗಾಯ, ಐಸಿಯುವಿನಲ್ಲಿ ಚಿಕಿತ್ಸೆ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್​ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುವತಿಗೆ ಗಂಭೀರ ಗಾಯ, ಐಸಿಯುವಿನಲ್ಲಿ ಚಿಕಿತ್ಸೆ

0ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಮುಖ್ಯರಸ್ತೆಯ ಆರ್​ವಿ ಕಾಲೇಜ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ‌. ಅಪಘಾತ ಪರಿಣಾಮ ಬಿಐಎಂಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಸ್ವಾತಿ (21) ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ಮೂಲದ ಸ್ವಾತಿ ಪಟ್ಟಣಗೆರೆಯ ಪಿಜಿಯಲ್ಲಿ ವಾಸವಿದ್ದು, ಬಿಐಎಂಎಸ್ ಕಾಲೇಜಿನಲ್ಲಿ ಎಂಬಿಎ ಓದುತ್ತಿದ್ದಾರೆ. ಫೆಬ್ರವರಿ‌ 2 ರ ಮಧ್ಯಾಹ್ನ 1.30ರ ಸುಮಾರಿಗೆ ಆರ್​ವಿ ಕಾಲೇಜು ಕಡೆಯಿಂದ ಬಿಐಎಂಎಸ್ ಕಾಲೇಜು ಕಡೆಗೆ ರಸ್ತೆ ದಾಟುತ್ತಿದ್ದ ಸ್ವಾತಿಗೆ ಕೆಂಗೇರಿ ಕಡೆಯಿಂದ ವೇಗವಾಗಿ ಬರುತ್ತಿದ್ದ KA 51 MH 7575 ನಂಬರಿನ ಕಾರು ಡಿಕ್ಕಿಯಾಗಿದೆ. ಪರಿಣಾಮ ವಿದ್ಯಾರ್ಥಿನಿ ಸ್ವಾತಿಯ ತಲೆ, ಮೈ-ಕೈಗೆ ತೀವ್ರ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಸ್ವಾತಿಯ ರಕ್ಷಣೆಗೆ ಬಂದಿದ್ದು, ಗಾಯಾಳು ಸ್ವಾತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈಗ ಸ್ವಾತಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅಪಘಾತ ಕುರಿತು ಸ್ವಾತಿ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿತ್ತು. ಸುದ್ದಿ ತಿಳಿದ ಅವರು ಕೂಡಲೇ ಹುಬ್ಬಳ್ಳಿಯಿಂದ ಪ್ರಯಾಣ ಬೆಳೆಸಿ ಮಗಳನ್ನು ಸೇರಿಸಿದ್ದಾರೆ.

ಚಾಲಕ ಕೆಂಗೇರಿ ಠಾಣಾ ಪೊಲೀಸರ ವಶಕ್ಕೆ: ಹಿಟ್ ಅಂಡ್ ರನ್ ಮಾಡಿ ತಲೆ ಮರೆಸಿಕೊಂಡಿದ್ದ ಕಾರು ಚಾಲಕ ಕೃಷ್ಣಭಾರ್ಗವ್ (20) ನನ್ನ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​ಆರ್ ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಆರೋಪಿ ಕೃಷ್ಣ ಭಾರ್ಗವ್ ಅಪಘಾತವೆಸಗಿದ ಬಳಿಕ ತಲೆಮರೆಸಿಕೊಂಡಿದ್ದರು. ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಸಾವು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ‌ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ಬಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿಂಚನ (15) ಮೃತ ಬಾಲಕಿಯಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಹತ್ತನೇ ತರಗತಿವರೆಗೂ ವ್ಯಾಸಂಗ ಮಾಡಿದ್ದ ಸಿಂಚನ ನಂತರ ಚಿತ್ರರಂಗದಲ್ಲಿ ಸಹನಟಿಯಾಗಿ ನಟನೆ ಆರಂಭಿಸಿದ್ದರು. ತಡರಾತ್ರಿ 9-15ರ ಸುಮಾರಿಗೆ ವಾಂತಿ - ಬೇದಿ ಎಂಬ ಕಾರಣಕ್ಕೆ ಬಗಲಗುಂಟೆ ಶೆಟ್ಟಿಹಳ್ಳಿ ಬಳಿ ಇರುವ ಎಸ್.ಕೆ ಹೆಲ್ತ್ ಕೇರ್ ಎಂಬ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ಬಾಲಕಿ ಸಾವನ್ನಪ್ಪಿದ ಬಳಿಕ‌ ಆಸ್ಪತ್ರೆಗೆ ಕರೆ ತಂದಿದ್ದಿರಿ ಎಂದು ವೈದ್ಯರು ಹೇಳುತ್ತಿದ್ದಾರೆ ಅಂತಾ ಬಾಲಕಿಯ ಪೋಷಕರು ಆರೋಪಿಸುತ್ತಿದ್ದಾರೆ.

ಕುಟುಂಬಸ್ಥರ ಪ್ರಕಾರ ಮೃತ ಸಿಂಚನ ಅಸ್ವಸ್ಥಳಾಗಿದ್ದಳು, ಆಸ್ಪತ್ರೆಗೆ ಕರೆತಂದಾಗ ಆಕೆಯೇ ತನ್ನ ಹೆಸರು ದಾಖಲಾತಿಗಳನ್ನ ನೀಡಿದ್ದಾಳಂತೆ. ಆಸ್ಪತ್ರೆಯ ವೈದ್ಯರಿಂದಲೇ ಬಾಲಕಿ ಸಾವನ್ನಪ್ಪಿದಾಳೆಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಆಸ್ಪತ್ರೆಯ ವಿರುದ್ಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಓದಿ: ರಾಯಚೂರು; ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ, ಪ್ರಾಚಾರ್ಯರ ಮೇಲೆ ಅತ್ಯಾಚಾರ, ಕೊಲೆ ಆರೋಪ

Last Updated :Feb 4, 2023, 1:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.