ETV Bharat / state

ಹೆಚ್ಚಿನ ಪಿಂಚಣಿ ಪಾವತಿಸಿದ ನಂತರ ವೃದ್ಧೆಯ ಖಾತೆ ಸ್ಥಗಿತ: ಬ್ಯಾಂಕ್ ನಡೆಗೆ ಹೈಕೋರ್ಟ್ ಅಸಮಾಧಾನ

author img

By

Published : Nov 23, 2022, 1:00 PM IST

ವೃದ್ಧೆಯೊಬ್ಬರ ಬ್ಯಾಂಕ್​ ಖಾತೆಗೆ ಹೆಚ್ಚಿನ ಪಿಂಚಣಿ ಪಾವತಿಸಿದ ನಂತರ ಅವರ ಅಕೌಂಟ್​ ಸ್ಥಗಿತಗೊಳಿಸಲಾಗಿತ್ತು. ಬ್ಯಾಂಕ್​ನ ಕ್ರಮವನ್ನು ಪ್ರಶ್ನಿಸಿ ವೃದ್ಧೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

High Court
ಹೈಕೋರ್ಟ್

ಬೆಂಗಳೂರು: ವೃದ್ಧೆಯೊಬ್ಬರ ಬ್ಯಾಂಕ್​ ಖಾತೆಗೆ ಹೆಚ್ಚಿನ ಪಿಂಚಣಿ ಪಾವತಿಸಿದ ನಂತರ ಖಾತೆಯನ್ನು ಸ್ಥಗಿತಗೊಳಿಸಿದ ಬ್ಯಾಕ್‌ ಕ್ರಮಕ್ಕೆ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿತು. ಹಿರಿಯ ನಾಗರಿಕರ ಬಗ್ಗೆ ಕಾಳಜಿ ಹಾಗೂ ಸಹಾನುಭೂತಿ ತೋರಬೇಕಿದೆ ಎಂದು ಕೋರ್ಟ್​ ಕಿವಿಮಾತು ಹೇಳಿದೆ.

ಖಾತೆಯನ್ನು ಸ್ಥಗಿತಗೊಳಿಸಿದ ಬ್ಯಾಂಕ್ ಕ್ರಮ ಪ್ರಶ್ನಿಸಿ ಬೆಂಗಳೂರಿನ ವಿಜಯನಗರದ ನಿವಾಸಿ ವೃದ್ಧೆ ನಳಿನಿ ದೇವಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಸೂಚನೆ ನೀಡಿದರು. ಜತೆಗೆ ಹೆಚ್ಚುವರಿಯಾಗಿ ಪಾವತಿಸಿದ ಪಿಂಚಣಿ ಮೊತ್ತವನ್ನು ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಪಿಂಚಣಿದಾರ ಮಹಿಳೆಯಿಂದ ಹಣ ವಸೂಲು ಮಾಡಬಾರದು ಎಂದು ನಿರ್ದೇಶಿಸಿದೆ.

2016 ರಲ್ಲಿ ಖಾತೆ ಸ್ಥಗಿತಗೊಳಿಸಲಾಗಿದೆ. ಅಂದಿನಿಂದ ಬ್ಯಾಂಕ್ ಕಚೇರಿಗೆ ಪದೇ ಪದೇ ಅಲೆದರೂ ಸಮಸ್ಯೆ ಬಗೆಹರಿದಿಲ್ಲ. ಪಿಂಚಣಿದಾರರ ಧ್ವನಿಗೆ ಸರ್ಕಾರ ಹಾಗೂ ಬ್ಯಾಂಕ್‌ಗಳು ಕಿವುಡಾಗಬಾರದು. ಹಿರಿಯ ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಅಭಿಪ್ರಾಯಪಟ್ಟಿತು.

ಪ್ರಕರಣದ ಹಿನ್ನೆಲೆ ಏನು?: ಅರ್ಜಿದಾರರ ಪತಿ ಸರ್ಕಾರಿ ನೌಕರರಾಗಿದ್ದು, 22 ವರ್ಷ ಸೇವೆ ಸಲ್ಲಿಸಿದ್ದರು. 2014ರಲ್ಲಿ ಅವರು ಮೃತಪಟ್ಟಿದ್ದರು. ನಂತರ ಅರ್ಜಿದಾರಿಗೆ ಸರ್ಕಾರ ಕುಟುಂಬ ಪಿಂಚಣಿ ಹಣವನ್ನು ಬ್ಯಾಂಕಿನ ಮೂಲಕ ಪಾವತಿಸಲಾಗುತ್ತಿತ್ತು. ಪಿಂಚಣಿದಾರೆಯಾಗಿರುವ ಅರ್ಜಿದಾರರ ಖಾತೆಗೆ 2016ರಲ್ಲಿ ಹೆಚ್ಚುವರಿಯಾಗಿ 50 ಸಾವಿರ ಹಣವನ್ನು ರಾಷ್ಟ್ರೀಕೃತ ಬ್ಯಾಂಕೊಂದರ ಅಧಿಕಾರಿಗಳು ಪಾವತಿ ಮಾಡಿದ್ದರು. ನಂತರ ಅಧಿಕಾರಿಗಳು ಅರ್ಜಿದಾರರ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಆರೋಪ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದಲ್ಲಿ ಆರೋಪಿ ದೋಷ ಮುಕ್ತ ಎಂದು ಹೇಳಲಾಗದು: ಹೈಕೋರ್ಟ್​

ಬ್ಯಾಂಕಿಗೆ ಭೇಟಿ ಮಾಡಿದ್ದ ಅರ್ಜಿದಾರರು, ಹೆಚ್ಚುವರಿ ಪಾವತಿಯಾದ ಪಿಂಚಣಿಯನ್ನು ಹಿಂಪಡೆಯುವಂತೆ ಕೋರಿದರೂ ಸಿಬ್ಬಂದಿ ಸ್ಪಂದಿಸಿರಲಿಲ್ಲ. ಬಳಿಕ ವರ್ಷಗಳು ಉರುಳಿ ಒಟ್ಟು 2,34,158 ರೂ. ಹೆಚ್ಚುವರಿಯಾಗಿ ಪಾವತಿಯಾಗಿದೆ. ಆದರೆ, ಬ್ಯಾಂಕ್ ಖಾತೆ ಮೇಲೆ ಹೇರಿದ ನಿರ್ಬಂಧವನ್ನು ಮಾತ್ರ ತೆರವುಗೊಳಿಸಿರಲಿಲ್ಲ. ಇದರಿಂದ ನಳಿನಿ ದೇವಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.