ETV Bharat / state

ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ

author img

By

Published : Jul 27, 2021, 8:00 PM IST

ಲಿಂಗಾಯತ ಸಮುದಾಯ ಹಾಗೂ ಬಿಎಸ್​ವೈ ಬಣಕ್ಕೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್​ ರಾಜ್ಯದ ನೂತನ ಸಿಎಂ ಆಗಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದೆ.

Basavaraj Bommai Next cm of Karnataka
Basavaraj Bommai Next cm of Karnataka

ಬೆಂಗಳೂರು: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ಬ್ರೇಕ್​ ಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಹಾಗೂ ರಾಜ್ಯ ಗೃಹ ಖಾತೆ ಸಚಿವ ಬಸವರಾಜ್​ ಬೊಮ್ಮಾಯಿಗೆ ಹೈಕಮಾಂಡ್ ಅಂತಿಮವಾಗಿ ಮಣೆ ಹಾಕಿದೆ. ಈ ಮೂಲಕ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.

ಮುಖ್ಯಮಂತ್ರಿ ಆಯ್ಕೆಗೆ ಅನೇಕ ಹೆಸರು ಕೇಳಿ ಬಂದಿದ್ದವು. ಪ್ರಮುಖವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​, ಪ್ರಲ್ಹಾದ್ ಜೋಶಿ, ಸಿ.ಟಿ ರವಿ, ಜಗದೀಶ್ ಶೆಟ್ಟರ್​, ಮುರುಗೇಶ್ ನಿರಾಣಿ ಹಾಗೂ ಅರವಿಂದ್ ಬೆಲ್ಲದ್​ ಹೆಸರು ಮುಂಚೂಣಿಯಲ್ಲಿದ್ದವು. ಆದರೆ ಲಿಂಗಾಯತ ಸಮುದಾಯಕ್ಕೆ ಸೇರಿದ್ದ ಬೊಮ್ಮಾಯಿ ಹಾಗೂ ಬೆಲ್ಲದ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ ಬಿಎಸ್​ವೈಗೆ ಹೆಚ್ಚು ಆಪ್ತರಾಗಿರುವ ಬಸವರಾಜ ಬೊಮ್ಮಾಯಿಗೆ ಇದೀಗ ಹೈಕಮಾಂಡ್ ಮಣೆ ಹಾಕಿದೆ. ಈ ಮೂಲಕ ರಾಜ್ಯದಲ್ಲಿ ಬೊಮ್ಮಾಯಿ ಪರ್ವ ಶುರುವಾಗಲಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​​ ಸಿಂಗ್​ ಹಾಗೂ ವೀಕ್ಷಕರಾಗಿ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್​, ಕಿಶನ್​ ರೆಡ್ಡಿ ವೀಕ್ಷಕರಾಗಿ ಶಾಸಕಾಂಗ ಸಭೆಯಲ್ಲಿ ಭಾಗಿಯಾಗಿದ್ದರು. ಇದಕ್ಕೂ ಮೊದಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದರು.

ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬೊಮ್ಮಾಯಿ ಹೆಸರು ಅಂತಿಮ ಮಾಡಲಾಗಿದ್ದು, ನಾಳೆ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಎಸ್​.ಆರ್​ ಬೊಮ್ಮಾಯಿ ಅವರ ಪುತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.