ETV Bharat / state

ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಲು ಹೋಗಿ ಲಾರಿಗೆ ಡಿಕ್ಕಿ.. ಬೈಕ್​ ಸವಾರನಿಗೆ ಗಂಭೀರ ಗಾಯ

author img

By

Published : Nov 29, 2020, 3:11 PM IST

Updated : Nov 30, 2020, 6:21 AM IST

dsd
ಬೈಕ್​ ಸವಾರ ಗಂಭೀರ

ತಲೆಗೆ ತೀವ್ರ ಪೆಟ್ಟಾಗಿದ್ದು, ಎರಡು ಕಣ್ಣುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಗಾಯಾಳುವಿ​ಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಿಯಮ ಉಲ್ಲಂಘಿಸಿ ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಲು ಹೋಗಿ ಬೈಕ್ ಸವಾರ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೈಕ್​ ಸವಾರನ ಸ್ಥಿತಿ ಗಂಭೀರ

ಕೆಂಗೇರಿಯ ವಿಷ್ಣುವರ್ಧನ್ ಸಮಾಧಿ ರಸ್ತೆ ಬಳಿ ಉಬ್ರಾನ್ ಎಂಬಾತ ಟ್ರಾಫಿಕ್ ನಿಯಮ ಉಲ್ಲಂಘಿಸಿ ಬರ್ತಿದ್ದ. ಈ ವೇಳೆ ಕೆಂಗೇರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುತ್ತಿದ್ದರು.

ಆಗ ಪೊಲೀಸರ ಕಣ್ಣಿನಿಂದ ತಪ್ಪಿಸಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಸದ್ಯ ಅಪಘಾತದಿಂದ ಉಬ್ರಾನ್ ತಲೆಗೆ ತೀವ್ರ ಪೆಟ್ಟಾಗಿದ್ದು, ಎರಡು ಕಣ್ಣುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಉಬ್ರಾನ್​ಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated :Nov 30, 2020, 6:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.