ETV Bharat / state

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸ ವೇಳಾಪಟ್ಟಿ ಹೀಗಿದೆ..

author img

By

Published : Aug 29, 2021, 3:41 PM IST

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್‍ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಸೆ. 02ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಸಭೆ ಹಾಗೂ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

Arun Singh
ಅರುಣ್ ಸಿಂಗ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್‍ ರಾಜ್ಯ ಪ್ರವಾಸ ಕೈಗೊಂಡಿದ್ದು, ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ನಾಳೆ ಸಂಜೆ 5:40ಕ್ಕೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೈಸೂರಿಗೆ ತೆರಳಲಿದ್ದು, ಅಲ್ಲಿರುವ ಸರ್ಕಾರಿ ಗೆಸ್ಟ್​​​ಹೌಸ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಆ.31 ರಂದು ಬೆಳಿಗ್ಗೆ 8 ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಬಳಿಕ ಮೈಸೂರು, ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ, ಜಿಲ್ಲಾ ಕೋರ್ ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ.

ಸೆ.01 ರಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆ ಚನ್ನರಾಯಪಟ್ಟಣದಲ್ಲಿ ನಡೆಯಲಿದ್ದು, ಜಿಲ್ಲಾ ಕೋರ್ ಕಮಿಟಿ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆ.02 ರಂದು ಬೆಂಗಳೂರಿನ ಮಲ್ಲೇಶ್ವರದ ಹವ್ಯಕರ ಭವನದಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಮಧ್ಯಾಹ್ನ 2:45ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬಂದು ಸೆ.3 ರಂದು ಬೆಳಿಗ್ಗೆ 7:15ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ‌.

ಇದನ್ನೂ ಓದಿ: ಮೈಸೂರು ಗ್ಯಾಂಗ್​ರೇಪ್​ ಪ್ರಕರಣ: ಆರೋಪಿ ಮಗನ ಬಂಧನ, ತಾಯಿಯ ಕಣ್ಣೀರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.