ETV Bharat / state

ಕೋಡಿಹಳ್ಳಿ ನೇತೃತ್ವದಲ್ಲಿ ರಾಜ್ಯ ರಸ್ತೆ ಸಾರಿಗೆ ನೌಕರರ ಪ್ರತಿಭಟನೆ

author img

By

Published : Mar 2, 2021, 11:03 AM IST

bengaluru
ಖಾಸಗಿ ಆಸ್ಪತ್ರೆಗೆ ಕರೆದುಕೊಂಡು‌ ಹೋಗಿ ಚಿಕಿತ್ಸೆ ನೀಡಲಾಗುತ್ತದೆ

ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: 76 ದಿನ ಕಳೆದರೂ ಈಡೇರದ ಸಾರಿಗೆ ನೌಕರರ ಬೇಡಿಕೆಗಳನ್ನು ಮುಂದಿಟ್ಟು ಮತ್ತೆ ಸರ್ಕಾರದ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್​ ನೇತೃತ್ವದಲ್ಲಿ ಸಾರಿಗೆ ನೌಕರರು ಸಿಡಿದೆದ್ದಿದ್ದಾರೆ.

ಮೌರ್ಯ ಸರ್ಕಲ್ ಬಳಿ ಪ್ರತಿಭಟನೆಯ ಸಮಾಲೋಚನ ಸಭೆ ನಡೆಯಲಿದೆ. ಸಂಗೊಳ್ಳಿ ರಾಯಣ್ಣ ವೃತದಿಂದ ಮೌರ್ಯ ಸರ್ಕಲ್ ವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದ್ದು, ನಾಲ್ಕು ನಿಗಮದ ನೌಕರರಿಂದ ಮೌರ್ಯ ಸರ್ಕಲ್ ಚಲೋ ನಡೆಸಲು ಮುಂದಾಗಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನೌಕರರ ಪ್ರತಿಭಟನೆ

9 ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದು, ಮೌರ್ಯ ಸರ್ಕಲ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.