ETV Bharat / state

Cauvery water issue: ಅನ್ಯ ವಿಚಾರಗಳನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಸಲಹೆ ನೀಡಿ: ತುರ್ತು ಸಭೆಯಲ್ಲಿ ಮನವಿ ಮಾಡಿದ ಡಿಸಿಎಂ

author img

By ETV Bharat Karnataka Team

Published : Sep 13, 2023, 1:56 PM IST

ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ತುರ್ತು ಸಭೆ ನಡೆಯುತ್ತಿದೆ. ಸಭೆಯಲ್ಲಿ ವಿವಿಧ ಪಕ್ಷದ ರಾಜಕೀಯ ಮುಖಂಡರು ಭಾಗಿಯಾಗಿದ್ದಾರೆ.

special emergency meeting  meeting was held under the leadership of CM  Cauvery water issue  ವಿಶೇಷ ತುರ್ತು ಸಭೆ  ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಸಲಹೆ ನೀಡುವಂತೆ ಮನವಿ  ಸಭೆಯಲ್ಲಿ ವಿವಿಧ ಪಕ್ಷದ ರಾಜಕೀಯ ಮುಖಂಡರು ಭಾಗಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ತುರ್ತು ಸಭೆ  ರಾಜ್ಯದ ಕಾವೇರಿ ಕಣಿವೆಯ ಜಲಾಶಯ  ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷಗಳ  ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್  ತುರ್ತು ಸಭೆಯಲ್ಲಿ ಮನವಿ ಮಾಡಿದ ಡಿಸಿಎಂ  ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಸಲಹೆ
ಅನ್ಯ ವಿಚಾರಗಳನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಸಲಹೆ ನೀಡಿ

ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷಗಳ ಮುಖಂಡರು, (ಕೇಂದ್ರ ಸರ್ಕಾರದ ಸಚಿವರು) ಹಾಗೂ ಸಂಸತ್ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ವಿಶೇಷ ತುರ್ತು ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿದೆ.

ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?: ನಿನ್ನೆ ಸಂಜೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMC) ಆದೇಶ ಬಂದ ಹಿನ್ನೆಲೆ ಇಂದಿನ ಈ ತುರ್ತುಸಭೆ ಕರೆಯಲಾಗಿದೆ. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಜಲವರ್ಷದಲ್ಲಿನ ಪರಿಸ್ಥಿತಿ ಬಗ್ಗೆ ಈ ಹಿಂದೆ 28.08.2023ರಂದು ಸರ್ವಪಕ್ಷಗಳ ಮುಖಂಡರುಗಳ ಸಭೆಯನ್ನು ಕರೆಯಲಾಗಿತ್ತು. 12.09.2023 ರಂದು ಅಂದರೆ ನಿನ್ನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWRC) 86ನೇ ಸಭೆಯು ಜರುಗಿದ್ದು, ಸದರಿ ಸಭೆಯಲ್ಲಿ 13.09.2023 ರಿಂದ ಮುಂದಿನ 15 ದಿನಗಳವರೆಗೆ ಕರ್ನಾಟಕ ರಾಜ್ಯವು ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 5,000 ಕ್ಯೂಸೆಕ್​ ನೀರಿನ ಪ್ರಮಾಣವನ್ನು ಖಚಿತ ಪಡಿಸುವಂತೆ ನಿರ್ಣಯಿಸಿದೆ. ಸದರಿ ವಿಷಯವು ರಾಜ್ಯದ ರೈತರ ಹಿತಾಸಕ್ತಿಯ ದೃಷ್ಟಿಯಿಂದ ಅತೀ ಗಂಭೀರವಾಗಿರುವ ಹಿನ್ನೆಲೆ ಅತೀ ತುರ್ತಾಗಿ ಈ ದಿನ short noticeನಲ್ಲಿ ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಕಾವೇರಿ ಕಣಿವೆಯ ಜಲಾಶಯಗಳಲ್ಲಿ ನೀರಿನ ಸಂಗ್ರಹಣೆಯು ಕಡಿಮೆಯಿದ್ದು, ಮೇ-2024ರ ವರೆಗೆ ನಮ್ಮ ನೀರಾವರಿ, ಕುಡಿಯುವ ನೀರು ಹಾಗೂ ಇತರೆ ಅಗತ್ಯತೆಗಳಿಗೆ ನೀರನ್ನು ಪೂರೈಸಬೇಕಾಗಿದೆ. ಈಗಾಗಲೇ South-West Monsoon ಮುಗಿಯುವ ಹಂತದಲ್ಲಿದ್ದು, ರಾಜ್ಯದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣವು ಕ್ಷೀಣಿಸುತ್ತಿದೆ. ಈಗಿನ ಸಂಗ್ರಹಣೆಯನ್ನು ನಮ್ಮ ಅಗತ್ಯತೆಗಳಿಗೆ ಕಾಯ್ದಿರಿಸಬೇಕಾಗಿದೆ. ರಾಜ್ಯದ ಕಾವೇರಿ ಕೊಳ್ಳದ ಪರಿಸ್ಥಿತಿ ಅಧ್ಯಯನ ಮಾಡಲು ದೆಹಲಿ ಅಧಿಕಾರಿಗಳನ್ನು ಇಲ್ಲಿಗೆ ಕಳುಹಿಸಿ ಪರಿಶೀಲನೆ ನಡೆಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ನಮ್ಮ ಮುಖ್ಯಮಂತ್ರಿಗಳು ಸಹ ಕೇಂದ್ರ ಸಚಿವರನ್ನು ಭೇಟಿ ಮಾಡಿದಾಗ ರಾಜ್ಯದ ಪರಿಸ್ಥಿತಿ ವಿವರಿಸಿದ್ದಾರೆ. ಸರ್ವಪಕ್ಷ ನಿಯೋಗ ಭೇಟಿಗೆ ಪ್ರಧಾನ ಮಂತ್ರಿಗಳ ಸಮಯ ಕೇಳಲಾಗಿದೆ. ಈ ಮಧ್ಯೆ, ತಮಿಳುನಾಡು ರಾಜ್ಯವು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿರುವ ದಾವೆ ಮತ್ತು ರಾಜ್ಯವು ಸಲ್ಲಿಸಿರುವ ಪ್ರತಿಕ್ರಿಯೆಗಳ ವಿಚಾರಣೆಯು ದಿನಾಂಕ 21.09.2023 ರಂದು ನಿಗದಿಯಾಗಿರುತ್ತದೆ ಎಂದು ಹೇಳಿದರು.

special emergency meeting  meeting was held under the leadership of CM  Cauvery water issue  ವಿಶೇಷ ತುರ್ತು ಸಭೆ  ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಸಲಹೆ ನೀಡುವಂತೆ ಮನವಿ  ಸಭೆಯಲ್ಲಿ ವಿವಿಧ ಪಕ್ಷದ ರಾಜಕೀಯ ಮುಖಂಡರು ಭಾಗಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ತುರ್ತು ಸಭೆ  ರಾಜ್ಯದ ಕಾವೇರಿ ಕಣಿವೆಯ ಜಲಾಶಯ  ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಸರ್ವ ಪಕ್ಷಗಳ  ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್
ವಿಶೇಷ ತುರ್ತು ಸಭೆಯಲ್ಲಿ ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಸಲಹೆ ನೀಡುವಂತೆ ಮನವಿ ಮಾಡಿದ ಡಿಸಿಎಂ

ರಾಜ್ಯದ ಕಾವೇರಿ ಜಲಾನಯನದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಬೆಳೆಗಳಿಗೆ ನೀರಾವರಿಗಾಗಿ 70.20 TMC, ಸೆಪ್ಟೆಂಬರ್ 2023 ರಿಂದ ಜುಲೈ 2024 ರ ವರೆಗೆ ಕುಡಿಯುವ ನೀರಿಗೆ 33 TMC ಮತ್ತು ಕೈಗಾರಿಕಾ ಬಳಕೆಗಾಗಿ 3 TMC, ಹೀಗೆ ಒಟ್ಟು 106.20 TMC ನೀರಿನ ಪ್ರಮಾಣದ ಅವಶ್ಯಕವಿರುತ್ತದೆ. ಆದರೆ, ನಮ್ಮ ಕಾವೇರಿ ಕಣಿವೆಯ 4 ಜಲಾಶಯಗಳಲ್ಲಿನ ಇಂದಿನ ಒಟ್ಟಾರೆ ನೀರಿನ ಮಟ್ಟ 53.287 ಟಿಎಂಸಿ ಇದ್ದು, ಹಿಂದಿನ ವರ್ಷ ಇದೇ ದಿನದಂದು ನೀರಿನ ಮಟ್ಟ 103.348 ಟಿಎಂಸಿ ಆಗಿತ್ತು. ಕಳೆದ 30 ವರ್ಷಗಳ ಸರಾಸರಿಗೆ ಹೋಲಿಸಿದಲ್ಲಿ ನೀರಿನ ಒಳಹರಿವಿನಲ್ಲಿ ಒಟ್ಟಾರೆ ಕೊರತೆ 54% ಆಗಿರುತ್ತದೆ ಎಂದರು.

ಪ್ರಸಕ್ತ ಜಲವರ್ಷದಲ್ಲಿ ತಮಿಳುನಾಡಿಗೆ 01.06.2023ರಿಂದ 11.09.2023ರ ವರೆಗೆ ಒಟ್ಟು 37.718 ಟಿಎಂಸಿ ನೀರು ಹರಿದಿರುತ್ತದೆ. ಸಾಮಾನ್ಯ ವರ್ಷದಲ್ಲಿ (normal year) CWDT ಆದೇಶದನ್ವಯ ಇದೇ ಅವಧಿಯಲ್ಲಿ 99.860 ಟಿಎಂಸಿ ನೀರನ್ನು ಬಿಡಬೇಕಾಗಿತ್ತು. ಸಾಮಾನ್ಯ ವರ್ಷಗಳಲ್ಲಿ ರಾಜ್ಯದ ಜಲಾಶಯಗಳಿಗೆ ಒಳಹರಿವಿನ ಕೊರತೆಯುಂಟಾಗದೆ. ತಮಿಳುನಾಡಿಗೆ ಈ ಹಿಂದೆ ಹಲವಾರು ವರ್ಷಗಳಲ್ಲಿ ನ್ಯಾಯಾಧಿಕರಣದ ಆದೇಶದ ಅನ್ವಯ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಬಿಡಲಾಗಿದೆ. ಕಳೆದ ವರ್ಷ ನಿಗದಿತ 177.75 TMC ಪ್ರಮಾಣಕ್ಕೆ ಎದುರಾಗಿ 650 TMCಗಿಂತ ಅಧಿಕವಾಗಿ ನೀರನ್ನು ಬಿಡಲಾಗಿದೆ ಎಂದರು.

ಪ್ರಸಕ್ತ ಜಲವರ್ಷದಲ್ಲಿನ ನೀರಿನ ಕೊರತೆಯ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ತಮಿಳುನಾಡು ರಾಜ್ಯವು ಸಲ್ಲಿಸಿರುವ ದಾವೆಯು ದಿನಾಂಕ:21.09.2023ರಂದು ವಿಚಾರಣೆಗೆ ಬರಲಿದೆ. ಇದಲ್ಲದೆ, ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ರಚಿತವಾಗಿರುವ CWRC & CWMA ಇವುಗಳು ಕಾವೇರಿ ಕಣಿವೆಯ ನೀರಿನ ಪರಿಸ್ಥಿತಿಯನ್ನು ವಿಮರ್ಷಣೆ ಮಾಡಿ ಆದೇಶಗಳನ್ನು ನೀಡುತ್ತಿವೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ, ರಾಜ್ಯದ ಕಾವೇರಿ ಕಣಿವೆಯ ರೈತರುಗಳ ಹಿತಾಸಕ್ತಿಯನ್ನು ಕಾಪಾಡುವುದು ಮತ್ತು ಕುಡಿಯುವ ನೀರಿಗಾಗಿ ಅಗತ್ಯವಿರುವ ನೀರಿನ ಪ್ರಮಾಣವನ್ನು ಕಾಯ್ದಿರಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ರಾಜ್ಯದ ನೆಲ, ಜಲ ಮತ್ತು ಭಾಷೆಗಳ ವಿಷಯಗಳಲ್ಲಿ ಯಾವತ್ತೂ ರಾಜ್ಯದ ಹಿತದೃಷ್ಟಿಯಿಂದ ಸರ್ವಪಕ್ಷಗಳ ಮುಖಂಡರುಗಳ ಅಭಿಪ್ರಾಯಗಳನ್ನು ಪಡೆದು ಮುಂದಿನ ಕ್ರಮಗಳನ್ನು ಎಲ್ಲಾ ಸರ್ಕಾರಗಳು ಕೈಗೊಳ್ಳುತ್ತಿದ್ದು, ಅದರಂತೆ, ಈ ಸಭೆಯನ್ನು ಕರೆಯಲಾಗಿದ್ದು, ತಮ್ಮೆಲ್ಲರ ಅಭಿಪ್ರಾಯವನ್ನು ಕೋರುತ್ತೇನೆ. ಅನ್ಯ ವಿಚಾರಗಳನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಸಲಹೆ ನೀಡುವಂತೆ ಮನವಿ ಮಾಡುತ್ತೇನೆ ಎಂದರು.

ಸಭೆಗೆ ಹಾಜರಾಗಿದ್ದವರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಸಹಕಾರ ಸಚಿವ ರಾಜಣ್ಣ, ಪಶುಪಾಲನೆ ಸಚಿವ ವೆಂಕಟೇಶ್, ಕೃಷಿ ಸಚಿವರ ಚೆಲುವರಾಯಸ್ವಾಮಿ, ಮಾಹಿತಿ ತಂತ್ರಜ್ಞಾನ ಸಚಿವ ಬೋಸರಾಜು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಂಸದರುಗಳು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

ಸಭೆಗೆ ಗೈರಾದವರು: ಆದ್ರೆ ಮಾಜಿ ಸಿಎಂಗಳಾದ ಹೆಚ್ ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿಎಸ್ ಯಡಿಯೂರಪ್ಪ, ಎಸ್ ​ಎಂ ಕೃಷ್ಣ, ಡಿವಿ ಸದಾನಂದಗೌಡ, ಮಾಜಿ ಪಿಎಂ ಹೆಚ್ ಡಿ ದೇವೇಗೌಡ ಅವರು ಈ ಸಭೆಗೆ ಗೈರಾಗಿದ್ದಾರೆ.

ಓದಿ: ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ನಾವು ಬದ್ದ: ಬಿ.ಎಸ್‌.ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.