ETV Bharat / state

ಮಕ್ಕಳ ಕಳ್ಳತನ ವದಂತಿಗೆ ಕಿವಿಗೊಡಬೇಡಿ: ಪೊಲೀಸ್ ಆಯುಕ್ತರ ಟ್ವೀಟ್​

author img

By

Published : Jul 28, 2019, 2:40 AM IST

Updated : Jul 28, 2019, 4:59 AM IST

ವದಂತಿಗಳನ್ನ ನಂಬುವ ಮತ್ತು ಹರಡುವ ಮುನ್ನ ದಯವಿಟ್ಟು ಪರಿಶೀಲಿಸಿಕೊಳ್ಳಿ. ಸುಳ್ಳು ಸುದ್ದಿ ಹರಡುವವರಿಗೆ ಕಾನೂನಿನಡಿಯಲ್ಲಿ‌ ಶಿಕ್ಷೆ ವಿಧಿಸಲಾಗುತ್ತದೆ. ದಯವಿಟ್ಟು ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಪೊಲೀಸ್ ಕಮಿಷನರ್ ಅಲೋಕ್ ಕುಮಾರ್

ಬೆಂಗಳೂರು: ನಗರದಲ್ಲಿ ಮತ್ತೆ ಮಕ್ಕಳ ಕಳ್ಳರು ಕಾಣಿಸಿಕೊಂಡಿದ್ದಾರೆ ಎಂಬ ವದಂತಿ‌ ಹರಡುತ್ತಿದ್ದು, ಇದಕ್ಕೆ ಕಿವಿಗೊಡಬಾರದು ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.


child-kidnapper-news-is-false
ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಟ್ವೀಟ್

ಮಕ್ಕಳ ಕಳ್ಳತನವಾಗುತ್ತಿರುವ ಬಗ್ಗೆ ಕೆಲವರು ವದಂತಿ ಹರಡುತ್ತಿದ್ದಾರೆ. ಇಂತಹ ವದಂತಿ ಹರಡುವ ಮುನ್ನ ದಯವಿಟ್ಟು ಪರಿಶೀಲಿಸಿ. ಸುಳ್ಳು ಸುದ್ದಿ ಹರಡುವವರಿಗೆ ಕಾನೂನಿನಡಿ ಶಿಕ್ಷೆ ವಿಧಿಸಲಾಗುತ್ತದೆ. ಸಾರ್ವಜನಿಕರು ದಯವಿಟ್ಟು ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಈ ಹಿಂದೆ‌ ಮಕ್ಕಳ ಕಳ್ಳರು ಎಂದು ಅನುಮಾನಿಸಿ ಅಮಾಯಕರ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದರು. ಇಂತಹ ಘಟನೆಗಳು ಮರುಕಳಿಸಬಾರದೆಂದು ಟ್ವೀಟ್ ಮೂಲಕ ನಾಗರಿಕರನ್ನು ಎಚ್ಚರಿಸಿದ್ದಾರೆ.

Intro:Body:ಮತ್ತೆ ಮಕ್ಕಳ ಕಳ್ಳರ ಬಂದಿರುವ ವದಂತಿ: ಟ್ವೀಟ್ ಮಾಡಿ ಗಾಳಿ ಸುದ್ದಿ‌ ನಂಬಬೇಡಿ ಎಂದ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಮಕ್ಕಳ ಕಳ್ಳರು ಬಂದಿರುವ ಬಗ್ಗೆ ವದಂತಿ‌ ಕೇಳಿ ಬಂದಿದ್ದು, ಕೆಲವರು ಅಂತಹ ಗಾಳಿ ಸುದ್ದಿ ಹರಡುತ್ತಿದ್ದಾರೆ ಈ ಬಗ್ಗೆ ಯಾರೂ ನಂಬದಿರಿ ಎಂದು ಸಾರ್ವಜನಿಕರಲ್ಲಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ವದಂತಿಗಳನ್ನ ನಂಬುವ ಮತ್ತು ಹರಡುವ ಮುನ್ನ ದಯವಿಟ್ಟು ಪರಿಶೀಲಿಸಿಕೊಳ್ಳಿ. ಸುಳ್ಳು ಸುದ್ದಿ ಹರಡುವವರಿಗೆ ಕಾನೂನಿನಡಿಯಲ್ಲಿ‌ ಶಿಕ್ಷೆ ವಿಧಿಸಲಾಗುತ್ತದೆ. ದಯವಿಟ್ಟು ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಟ್ವೀಟ್ ಮೂಲಕ ಸಾರ್ವಜನಿಕರಿಗೆ ಕರೆ ನೀಡಿದ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಈ ಹಿಂದೆ‌ ಮಕ್ಕಳ ಕಳ್ಳರ ಗ್ಯಾಂಗ್ ಬಂದಿದೆ ಎಂದು ಅನುಮಾನಿಸಿ ಅಮಾಯಕರ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದರು. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಟ್ವೀಟ್ ಮೂಲಕ ನಾಗರಿಕರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.Conclusion:
Last Updated :Jul 28, 2019, 4:59 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.