ಆರೋಗ್ಯ ಸಿಬ್ಬಂದಿಗೆ ಬೂಸ್ಟರ್ ಡೋಸ್: ಮನ್ಸೂಕ್ ಮಾಂಡವಿಯಾ ಜೊತೆ ಸಿಎಂ ಮಹತ್ವದ ಮಾತುಕತೆ

author img

By

Published : Dec 2, 2021, 3:30 PM IST

CM Basavaraja Bommai talk with Mansukh Mandaviya
ಕೇಂದ್ರ ಆರೋಗ್ಯ ಸಚಿವ ಮನ್ಸೂರ್ ಮಾಂಡವಿಯಾ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ()

ಇಂದು ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಂಗಳೂರಿಗೆ ಬರುವ ಅವಕಾಶ ಮುಕ್ತವಾಗಿರಿಸಿಕೊಂಡಿದ್ದಾರೆ. ಅವಕಾಶ ಸಿಕ್ಕರೆ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು: ಒಮಿಕ್ರೋನ್ ಭೀತಿ ಹಿನ್ನಲೆ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಬೂಸ್ಟರ್​​ ಡೋಸ್ ನೀಡುವ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸೂಕ್​​ ಮಾಂಡವಿಯಾ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಂಸತ್ ಭವನದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್​​ ಮಾಂಡವಿಯಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

CM Basavaraja Bommai talk with Mansukh Mandaviya
ಕೇಂದ್ರ ಆರೋಗ್ಯ ಸಚಿವ ಮನ್ಸೂಕ್​​ ಮಾಂಡವಿಯಾ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ

ರಾಜ್ಯದಲ್ಲಿ ಫ್ರೆಂಟ್ ಲೈನ್ ವಾರಿಯರ್ಸ್​ಗೆ 3ನೇ ಡೋಸ್ ಅಥವಾ ಬೂಸ್ಟರ್ ಡೋಸ್ ನೀಡಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಂಬಂಧ ಕೇಂದ್ರ ಸಚಿವರ ಗಮನ ಸೆಳೆದರು. ಈಗಾಗಲೇ, ಕೋವಿಶೀಲ್ಡ್ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಪರಿಗಣಿಸಬೇಕು ಎಂದು ಸೀರಂ ಇನ್ಸಿಟಿಟ್ಯೂಟ್ ಐಸಿಎಂಆರ್​ಗೆ ಮನವಿ ಮಾಡಿರುವ ಬೆನ್ನಲ್ಲೇ ಸಿಎಂ ಕೇಂದ್ರ ಆರೋಗ್ಯ ಸಚಿವರ ಮುಂದೆ ಬೂಸ್ಟರ್ ಡೋಸ್ ಬಗ್ಗೆ ಪ್ರಸ್ತಾಪ ಮಾಡಿದ್ದು, ಬಹುತೇಕ ಕೋವಿಶೀಲ್ಡ್ ಲಸಿಕೆಯನ್ನೇ ಬೂಸ್ಟರ್ ಡೋಸ್ ಆಗಿ ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಧ್ಯಾಹ್ನ ಸಂಸತ್ ಭವನದಲ್ಲಿ ಭೇಟಿಗೆ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಕಾಲಾವಕಾಶ ನೀಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ವಿಶೇಷವಾಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಜೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕೃಷ್ಣಮಾರ್ಗ್ ರಸ್ತೆಯಲ್ಲಿರುವ ನಿವಾಸದಲ್ಲಿ ಭೇಟಿಯಾಗಲು ಸಿಎಂಗೆ ಅನುಮತಿ ಕೊಟ್ಟಿದ್ದಾರೆ. ಹಾಗಾಗಿ, ಸಂಜೆ ಕಾನೂನು ವಿಚಾರಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದ್ದು, ಸಂಸತ್ ನಲ್ಲಿ ಮಂಡಿಸಿ ಕಾಯ್ದೆಯನ್ನು ವಾಪಸ್ ಪಡೆದುಕೊಂಡಿದೆ.

ಈಗ ರಾಜ್ಯವೂ ಕೂಡ ಮೂರು ಕೃಷಿ ಕಾಯ್ದೆಗಳನ್ನು ಅಂಗೀಕರಿಸಿದ್ದು, ಅವುಗಳನ್ನೂ ರಾಜ್ಯದಲ್ಲಿ ವಾಪಸ್ ಪಡೆಯುವ ಕುರಿತು ಕಾನೂನು ವ್ಯಾಪ್ತಿಯ ಚೌಕಟ್ಟಿನಲ್ಲಿ ಇರಿಸಬಹುದಾದ ಹೆಜ್ಜೆಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

ಇಂದು ರಾತ್ರಿ ದೆಹಲಿಯ ಕರ್ನಾಟಕ ಭವನದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಸ್ತವ್ಯ ಹೂಡಲಿದ್ದು, ನಾಳೆ ಬೆಂಗಳೂರಿಗೆ ಬರುವ ಅವಕಾಶವನ್ನು ಮುಕ್ತವಾಗಿಸಿಕೊಂಡಿದ್ದಾರೆ. ಅವಕಾಶ ಸಿಕ್ಕರೆ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಓದಿ: ಹೆಚ್.ಡಿ.ದೇವೇಗೌಡರ ಜೀವನ ಚರಿತ್ರೆ ಡಿ.13 ರಂದು ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.