ETV Bharat / state

ರಂಗನಾಥ ಸ್ವಾಮಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ BSY ಭೇಟಿ.. ವಿಶೇಷ ಪೂಜೆ

author img

By

Published : Dec 11, 2021, 3:31 PM IST

CM Bommai and ex cm yediyurappa visits ranganathaswamy temple
ರಂಗನಾಥ ಸ್ವಾಮಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಭೇಟಿ

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೂಡಿ ಇಂದು ಬೆಂಗಳೂರಿನ ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾರಿನಲ್ಲಿ ಒಟ್ಟಿಗೆ ಚಿಕ್ಕಪೇಟೆ ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

CM Bommai and ex cm yediyurappa visits ranganathaswamy temple
ರಂಗನಾಥ ಸ್ವಾಮಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ,ಯಡಿಯೂರಪ್ಪ ಭೇಟಿ

ರಂಗನಾಥ ಸ್ವಾಮಿ ದೇಗುಲವು ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದು, ಸುಮಾರು 1,200 ವರ್ಷಗಳ ಇತಿಹಾಸ ಹೊಂದಿದೆ. ಕೆಲ ದಿನಗಳ ಹಿಂದೆಯಷ್ಟೇ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ದೇವಾಲಯವನ್ನು ನವೀಕರಣಗೊಳಿಸಲಾಗಿದೆ. ಗರ್ಭಗುಡಿ ದ್ವಾರಕ್ಕೆ ಬೆಳ್ಳಿ ಬಾಗಿಲನ್ನು ಜೋಡಣೆ ಮಾಡಲಾಗಿದ್ದು, ಇದಕ್ಕೆ 1.25 ಕೋಟಿ ರೂ. ಹಾಗೂ ಗರುಡಗಂಬಕ್ಕೆ 45 ಲಕ್ಷ ರೂ. ಖರ್ಚು ಮಾಡಲಾಗಿದೆ ಎಂದು ತಿಳಿದು ಬಂದಿದೆ.

CM Bommai and ex cm yediyurappa visits ranganathaswamy temple
ರಂಗನಾಥ ಸ್ವಾಮಿ ದೇವಾಲಯಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಭೇಟಿ

ಇಂದು ದೇಗುಲಕ್ಕೆ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದರು.

ಇದನ್ನೂ ಓದಿ: ಮಂಗಳೂರಿನ ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣ..ಮತಾಂತರ ಆರೋಪದಡಿ ಮಹಿಳೆ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.