ETV Bharat / state

CM Siddramaiah Meeting: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ: ಕುಡಿವ ನೀರಿನ ಸಮಸ್ಯೆ ಚರ್ಚೆ, ಜಲಜೀವನ್ ಮಿಷನ್ ಅನುಷ್ಠಾನದ ಪ್ರಗತಿ ಪರಿಶೀಲನೆ

author img

By

Published : Jun 11, 2023, 3:28 PM IST

ರಾಜ್ಯದ ವಿವಿಧೆಡೆ ಕುಡಿವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಮಾರ್ಗ ಸೂಚಿಸಲಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 12 ರಂದು ಬೆಳಗ್ಗೆ 11 ಗಂಟೆಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸೋಮವಾರ ಮಧ್ಯಾಹ್ನ 1 ಗಂಟೆಗೆ ಇಂದಿರಾ ಕ್ಯಾಂಟೀನ್ ಗೆ ಸಂಬಂಧಿಸಿದಂತೆ ತಮ್ಮ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಜಲಜೀವನ್ ಮಿಷನ್: ಜಲ ಜೀವನ್ ಮಿಷನ್ 2024 ರ ವೇಳೆಗೆ ಗ್ರಾಮೀಣ ಭಾರತದ ಎಲ್ಲಾ ಮನೆಗಳಿಗೆ ವೈಯಕ್ತಿಕ ಮನೆಯ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಕಲ್ಪಿಸಲಾಗಿದೆ. ಈ ಕಾರ್ಯಕ್ರಮವು ಬೂದಿ ನೀರಿನ ನಿರ್ವಹಣೆ, ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು ಮೂಲಕ ಪುನರ್​ಭರ್ತಿ ಮತ್ತು ಮರುಬಳಕೆಯಂತಹ ಕಡ್ಡಾಯ ಅಂಶಗಳಾಗಿ ಮೂಲ ಸಮರ್ಥನೀಯ ಕ್ರಮಗಳನ್ನು ಕಾರ್ಯಗತಗೊಳಿಸುತ್ತದೆ.

ಜಲ ಜೀವನ್ ಮಿಷನ್ ನೀರಿನ ಸಮುದಾಯದ ವಿಧಾನವನ್ನು ಆಧರಿಸಿದೆ ಮತ್ತು ಮಿಷನ್‌ನ ಪ್ರಮುಖ ಅಂಶವಾಗಿ ವ್ಯಾಪಕವಾದ ಮಾಹಿತಿ, ಶಿಕ್ಷಣ ಮತ್ತು ಸಂವಹನವನ್ನು ಒಳಗೊಂಡಿರುತ್ತದೆ. ಜಲ ಜೀವನ್ ಮಿಷನ್ ನೀರಿನ ಸಮುದಾಯದ ವಿಧಾನವನ್ನು ಆಧರಿಸಿದೆ ಮತ್ತು ಮಿಷನ್‌ನ ಪ್ರಮುಖ ಅಂಶವಾಗಿ ವ್ಯಾಪಕವಾದ ಮಾಹಿತಿ, ಶಿಕ್ಷಣ ಮತ್ತು ಸಂವಹನವನ್ನು ಒಳಗೊಂಡಿರುತ್ತದೆ.

ಜೆಜೆಎಂ ನೀರಿಗಾಗಿ ಜನ ಆಂದೋಲನವನ್ನು ರಚಿಸಲು ನೋಡುತ್ತಿದೆ, ಆ ಮೂಲಕ ಅದನ್ನು ಎಲ್ಲರ ಆದ್ಯತೆಯನ್ನಾಗಿ ಮಾಡುತ್ತದೆ.ಗ್ರಾಮೀಣ ಸಮುದಾಯಗಳ ಜೀವನಮಟ್ಟದಲ್ಲಿ ಸುಧಾರಣೆಗೆ ಕಾರಣವಾಗುವ ಕೈಗೆಟುಕುವ ಸೇವಾ ವಿತರಣಾ ಶುಲ್ಕಗಳಲ್ಲಿ ನಿಯಮಿತ ಮತ್ತು ದೀರ್ಘಾವಧಿಯ ಆಧಾರದ ಮೇಲೆ ಪ್ರತಿ ಗ್ರಾಮೀಣ ಕುಟುಂಬವು ಸಾಕಷ್ಟು ಪ್ರಮಾಣದಲ್ಲಿ ನಿಗದಿತ ಗುಣಮಟ್ಟದ ಕುಡಿಯುವ ನೀರಿನ ಪೂರೈಕೆಯನ್ನು ಹೊಂದಿದೆ. ಜಲಜೀವನ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ 40 ಲಕ್ಷ ಮನೆಗಳಿಗೆ ನೀರು ತಲುಪಿಸಲಾಗಿದೆ ಎಂಬ ಮಾಹಿತಿಯನ್ನು ಹಿಂದಿನ ಬಿಜೆಪಿ ಸರ್ಕಾರ ನೀಡಿತ್ತು.

ಕುಡಿಯುವ ನೀರಿನ ಸಮಸ್ಯೆ: ರಾಜ್ಯದ ವಿವಿಧೆಡೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಾರಿ ವಾಡಿಕೆಯಷ್ಟು ಮಳೆ ಆಗುವ ಸಾಧ್ಯತೆ ಇದ್ದು, ಭಾರಿ ಪ್ರಮಾಣದ ಮಳೆ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗೆ ಈಗಲೇ ಪರಿಹಾರ ಕಂಡುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ.

ಇದೇ ನಿಟ್ಟಿನಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎನ್ನುವ ಸೂಚನೆಯನ್ನೂ ನೀಡಿದ್ದಾರೆ.

ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಒಟ್ಟಾರೆ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ವಿಚಾರದಲ್ಲಿ ಸಿಎಂ ಸಭೆ ನಡೆಸಿ ಪರಿಹಾರ ಮಾರ್ಗ ಹುಡುಕುತ್ತಿದ್ದಾರೆ.

ಇದನ್ನೂಓದಿ:Free bus: ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ; ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರಿಗೆ ಫ್ರೀ ಬಸ್‌ ಸೇವೆ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.