ಬೆಂಗಳೂರು: ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆ ಪಾಸ್ ಆದ ಆರ್ಟಿಕಲ್ 370 ರದ್ದತಿಯನ್ನು ಕಾಂಗ್ರೆಸ್ ಶಾಸಕಿ ಸ್ವಾಗತಿಸುವ ಮೂಲಕ ಹುಬ್ಬೇರುವಂತೆ ಮಾಡಿದ್ದಾರೆ.
ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಬೆಳಗಾವಿ ಜಿಲ್ಲೆಯ ಕಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ತಮ್ಮ ಟ್ವೀಟ್ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಟ್ವೀಟ್ನಲ್ಲಿ ಅವರು, ದೇಶ ಎಲ್ಲದಕ್ಕಿಂತಲೂ ಮೊದಲು. ನಾವು ನವ ಭಾರತೀಯರು ಸದಾ ನಿಮ್ಮೊಂದಿಗೆ ಇರುತ್ತೇವೆ ಎಂದು ಹೇಳಿದ್ದಾರೆ.