ETV Bharat / state

ಇಂದು ಕಾಂಗ್ರೆಸ್​ ಬೃಹತ್​ ಪ್ರತಿಭಟನೆ: ಬೆಂಗಳೂರಿನಿಂದ ಕುಂದಾನಗರಿಯತ್ತ ಕೈ ನಾಯಕರು

author img

By

Published : Sep 24, 2019, 11:19 AM IST

ಕಾಂಗ್ರೆಸ್ ಕಚೇರಿ

ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಹಾಗೂ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಬೆಂಗಳೂರು: ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ನಡೆಯಲಿದ್ದು, ಪಕ್ಷದ ಹಿರಿಯ ನಾಯಕರುಗಳು ಬೆಂಗಳೂರಿನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ ಕಾಂಗ್ರೆಸ್ ನಾಯಕರು

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರು ಹಾಗೂ ಹಾಲಿ, ಮಾಜಿ ಶಾಸಕರು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಅಗಮಿಸಲಿದ್ದಾರೆ.

ರಾಜ್ಯ ಸರ್ಕಾರ ನೆರೆಯಿಂದ ನಿರಾಶ್ರಿತರಾದವರಿಗೆ ಸೂಕ್ತ ಪರಿಹಾರ ಕಾರ್ಯ ಕಲ್ಪಿಸಿಲ್ಲ. ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ತರುವಲ್ಲಿ ವಿಫಲವಾಗಿದೆ. ಬೆಳಗಾವಿ ಭಾಗದ ಜನರಿಗೆ ಉತ್ತರ ಕೊಡಲಾಗದೆ ಪ್ರಸಕ್ತ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸುತ್ತಿದೆ. ಈ ಭಾಗದ ಜನರ ಸಮಸ್ಯೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಮೊಳಗಲಿದೆ ಉಪಚುನಾವಣೆ ರಣಕಹಳೆ...
ಇದೇ ಸಂದರ್ಭ ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಾದ ಅಥಣಿ, ಕಾಗವಾಡ ಹಾಗೂ ಗೋಕಾಕ್ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯಲಿದೆ. ಪ್ರತಿಭಟನಾ ಮೆರವಣಿಗೆಯ ನಂತರ ಬೆಳಗಾವಿಯಲ್ಲಿ ಸಭೆ ಸೇರುವ ಕಾಂಗ್ರೆಸ್ ನಾಯಕರು ಈ ಮೂರು ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದ್ದಾರೆ.

ಕಳೆದ ವಾರವಷ್ಟೇ ಹೊಸಕೋಟೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿ ಗಮನಸೆಳೆದಿದ್ದ ಕಾಂಗ್ರೆಸ್, ಇದೀಗ ಬೆಳಗಾವಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಇದೇ ಮಾದರಿಯ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ. ಇಂದು ಕೂಡ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸುವ ಗುರಿಯನ್ನು ಕಾಂಗ್ರೆಸ್​ ಹೊಂದಿದೆ.

ಬೆಳಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದು, ಇತರೆ ನಾಯಕರು ಕೂಡ ಬೆಳಗಾವಿ ತಲುಪಲಿದ್ದಾರೆ.

Intro:newsBody:ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ಬೆಂಗಳೂರಿನಿಂದ ಹೊರಟ ರಾಜ್ಯ ನಾಯಕರು

ಬೆಂಗಳೂರು: ಇಂದು ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ನಡೆಯಲಿದ್ದು, ರಾಜ್ಯದ ಹಿರಿಯ ನಾಯಕರುಗಳು ಬೆಂಗಳೂರಿನಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಮಾಜಿ ಸಚಿವರು ಹಾಗೂ ಹಾಲಿ, ಮಾಜಿ ಶಾಸಕರು ರಾಜ್ಯದ ವಿವಿಧ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಬೆಳಗಾವಿಯಲ್ಲಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಮಾವೇಶ ನಡೆಯಲಿದ್ದು ರಾಜ್ಯ ಸರ್ಕಾರ ನೆರೆಯಿಂದ ನಿರಾಶ್ರಿತರಾದವರಿಗೆ ಸೂಕ್ತ ಪರಿಹಾರ ಕಾರ್ಯ ಕಲ್ಪಿಸಿಲ್ಲ, ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ತರುವಲ್ಲಿ ವಿಫಲವಾಗಿದೆ, ಬೆಳಗಾವಿ ಭಾಗದ ಜನರಿಗೆ ಉತ್ತರ ಕೊಡಲಾಗದೆ ಪ್ರಸಕ್ತ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ಬೆಂಗಳೂರಿನಲ್ಲಿ ನಡೆಸುತ್ತಿದೆ, ಈ ಭಾಗದ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರು ಪಾಲ್ಗೊಳ್ಳುವ ಈ ಸಮಾವೇಶದಲ್ಲಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀಡಿದ ಸೌಲಭ್ಯಗಳು ಹಾಗೂ ಪ್ರಸಕ್ತ ಬಿಜೆಪಿ ಸರ್ಕಾರ ಕಡೆಗಣಿಸಿರುವ ವಿವರವನ್ನ ನಾಯಕರು ತಮ್ಮ ಮಾತುಗಳ ಮೂಲಕ ಬಿಚ್ಚಿಡಲಿದ್ದಾರೆ.
ಉಪಚುನಾವಣೆ ರಣಕಹಳೆ
ಇದೇ ಸಂದರ್ಭ ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಾದ ಅಥಣಿ, ಕಾಗವಾಡ ಹಾಗೂ ಗೋಕಾಕ್ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯಲಿದೆ. ಪ್ರತಿಭಟನಾ ಮೆರವಣಿಗೆಯ ನಂತರ ಬೆಳಗಾವಿಯಲ್ಲಿ ಸಭೆ ಸೇರುವ ಕಾಂಗ್ರೆಸ್ ನಾಯಕರು ಈ ಮೂರು ಕ್ಷೇತ್ರಗಳು ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದ್ದಾರೆ.
ಕಳೆದವಾರವಷ್ಟೇ ಹೊಸಕೋಟೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿ ಗಮನಸೆಳೆದಿದ್ದ ಕಾಂಗ್ರೆಸ್ ಇದೀಗ ಬೆಳಗಾವಿಯಲ್ಲಿ ಪ್ರತಿಭಟನೆ ಗೆ ಕರೆ ನೀಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಇದೇ ಮಾದರಿಯ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ. ಇಂದು ಕೂಡ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಪ್ರತಿಭಟಿಸುವ ಗುರಿ ಹೊಂದಲಾಗಿದೆ.
ಇಂದು ಬೆಳಿಗ್ಗೆ 9ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದ್ದು ಇತರೆ ನಾಯಕರು ಕೂಡ ಹನ್ನೊಂದು ಗಂಟೆಯ ಹೊತ್ತಿಗೆ ಬೆಳಗಾವಿ ತಲುಪಲಿದ್ದಾರೆ.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.