ETV Bharat / state

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಗೆಲ್ಲಿಸಲು ಹೊರಟಿದೆ: ಇಬ್ರಾಹಿಂ ವಾಗ್ದಾಳಿ

author img

By

Published : Jun 3, 2022, 8:57 PM IST

2023ರ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಜೆಡಿಎಸ್​ಗೆ ಬರುವ ವಿಶ್ವಾಸ ಇದೆ. ಒಂದು ವೇಳೆ ಹೆಚ್ಚು ಸ್ಥಾನ ಬರದಿದ್ದರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುವುದಾಗಿ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದರು.

Congress supporting BJP in Rajya Sabha elections: Ibrahim
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿ ಗೆಲ್ಲಿಸಲು ಹೊರಟಿದೆ: ಇಬ್ರಾಹಿಂ ವಾಗ್ದಾಳಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನವರು ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸಲು ಹೊರಟಿದ್ದಾರೆ. ಕಾಂಗ್ರೆಸ್​​ನವರು ಯಾಕೆ ಇಷ್ಟು ಸುಳ್ಳು ಹೇಳುತ್ತಾರೋ?. ದಿನಗಳು ಕಳೆದಂತೆ ಚರಿತ್ರೆ ಹೊರ ಬರುತ್ತಿವೆ. ಲೇಹರ್ ಸಿಂಗ್ ಯಡಿಯೂರಪ್ಪರ ಅಭ್ಯರ್ಥಿ, ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಅಲ್ಲ ಎಂದು ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಟೀಕಿಸಿದ್ದಾರೆ.

ಮಾಧ್ಯಮದವರಿಗೆ ಇಬ್ರಾಹಿಂ ಪ್ರತಿಕ್ರಿಯೆ

ವಿಧಾನಸೌಧದಲ್ಲಿರುವ ಜೆಡಿಎಸ್‍ ಕಚೇರಿಯಲ್ಲಿ ಇಂದು ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಆತ್ಮಸಾಕ್ಷಿಗೆ ಅನುಸಾರ ಮತ ಹಾಕಿದರೆ ಜೆಡಿಎಸ್​​ನ ಅನೇಕರು ಕಾಂಗ್ರೆಸ್​​ಗೆ ವೋಟ್​​ ಹಾಕುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದು, ಯಾವ ಆತ್ಮ ಸಾಕ್ಷಿ? ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಯಾರು ಎಂಬುದನ್ನು ಡಿ.ಕೆ. ಶಿವಕುಮಾರ್ ಕೇಳಲಿ ಎಂದ ಇಬ್ರಾಹಿಂ, ನನಗೆ ಬೆಂಬಲ ಕೊಡುತ್ತೇನೆ ಎಂದರಲ್ಲ, ಕಾಂಗ್ರೆಸ್​ನವರು ಪರಿಷತ್​ನಲ್ಲೇ ನನಗೆ ಬೆಂಬಲಿಸಲಿಲ್ಲ. ಇಲ್ಲಿ ಮಾಡ್ತೀನಿ ಎನ್ನುತ್ತಾರಲ್ಲ, ಜೀವವೇ ಶಾಶ್ವತ ಅಲ್ಲ, ರಾಜಕೀಯ ಮಾಡುತ್ತೀರಲ್ಲ. ಹಾಗಾದರೆ, ಈ ಬಗ್ಗೆ ಪ್ರಮಾಣ ಮಾಡಲಿ. ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸಲು ಎರಡನೇ ಅಭ್ಯರ್ಥಿ ಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಕೀಯ ಸನ್ಯಾಸ: 2023ರ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಜೆಡಿಎಸ್​ಗೆ ಬರುವ ವಿಶ್ವಾಸ ಇದೆ. ಒಂದು ವೇಳೆ ಹೆಚ್ಚು ಸ್ಥಾನ ಬರದಿದ್ದರೆ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುವುದಾಗಿ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದರು.

ನಾನು ನನ್ನ ಮಾತಿಗೆ ಬದ್ಧನಾಗಿರುತ್ತೇನೆ. ಕಾಂಗ್ರೆಸ್​ನವರು ಇಂತಹ ಚಾಲೆಂಜ್ ತೆಗೆದುಕೊಳ್ತಾರಾ? ಎಂದು ಪ್ರಶ್ನಿಸಿದ ಅವರು, ಜೆಡಿಎಸ್​​ನವರು ನಮಗೆ ಪಕ್ಷದ ಕೀಲಿ‌ಕೈ ಕೊಟ್ಟಿದ್ದಾರೆ. ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಲಿದೆ ಎಂದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಅತೃಪ್ತ ಜೆಡಿಎಸ್ ಶಾಸಕರ ಮತಗಳ ಮೇಲೆ ಕಾಂಗ್ರೆಸ್, ಬಿಜೆಪಿ ಕಣ್ಣು !

ETV Bharat Logo

Copyright © 2024 Ushodaya Enterprises Pvt. Ltd., All Rights Reserved.