ETV Bharat / state

ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು: ಸಿಎಂ ಬೊಮ್ಮಾಯಿ

author img

By

Published : Sep 17, 2022, 7:07 AM IST

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯ ರಾಜ್ಯವಾಗಬೇಕು. ಸರ್ಕಾರಿ ಐಟಿಐಗಳನ್ನು ಟಾಟಾ ಸಂಸ್ಥೆಯ ಸಹಯೋಗದಲ್ಲಿ 4,800 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಸವರಾಜ ಬೊಮ್ಮಾಯಿ
Bommai

ಬೆಂಗಳೂರು: ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು. ಕೇವಲ ಮೂಲ ಸೌಕರ್ಯಗಳು ಮಾತ್ರವಲ್ಲ, ಸಂಸ್ಕೃತಿಯಲ್ಲಿ ಬದಲಾವಣೆ ತರಬೇಕು. ಬಡವರಿಗೆ ಅಗತ್ಯವಿರುವ ಸೌಲಭ್ಯಗಳು ದೊರಕಿದಾಗ ಸಂಸ್ಕೃತಿಯೂ ಬದಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಶುಕ್ರವಾರ ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಂಪನಿ ಹಾಗೂ ಸಂಸ್ಥೆಗಳು ದತ್ತು ಪಡೆಯುವ ಕಾಲೇಜುಗಳಲ್ಲಿ ಕೇವಲ ಹಣ ಮಾತ್ರವಲ್ಲದೆ ಸಮಯವನ್ನೂ ನೀಡಬೇಕು. ಕಾಲೇಜುಗಳು ನಮ್ಮದೇ ಎಂಬ ಭಾವನೆ ಇರಬೇಕು. ಆಗ ವ್ಯತ್ಯಾಸ ಕಾಣಲು ಸಾಧ್ಯ. ವಿದ್ಯಾರ್ಥಿಗಳ ಬದುಕಿನಲ್ಲಿ ಬದಲಾವಣೆ ತಂದರೆ, ನಿಮ್ಮ ಬದುಕಿನಲ್ಲಿಯೂ ಬದಲಾವಣೆ ತರಲು ಸಾಧ್ಯ ಎಂದರು.

ಇದನ್ನೂ ಓದಿ: 'ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಹಕಾರ'

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯ ರಾಜ್ಯವಾಗಬೇಕು: ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯ ರಾಜ್ಯವಾಗಬೇಕು. ಸರ್ಕಾರಿ ಐಟಿಐಗಳನ್ನು ಟಾಟಾ ಸಂಸ್ಥೆಯ ಸಹಯೋಗದಲ್ಲಿ 4,800 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. 30 - 40 ಕೋಟಿ ರೂ.ಗಳನ್ನು ಐಟಿಐಗಳನ್ನು ಆಧುನೀಕರಣಗೊಳಿಸಲು ವೆಚ್ಚ ಮಾಡಲಾಗಿದೆ. ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ‌ ಎಂದರು.

ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ

ಮುಂದಿನ 2-3 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಯುವಿಸಿಇ ಅಭಿವೃದ್ಧಿಯಾಗಲಿದೆ. ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್​ನೊಂದಿಗೆ ಸಹಯೋಗ ಹೊಂದಲು ಸಂಪರ್ಕಿಸಲಾಗುತ್ತಿದೆ. ನಿಮ್ಮ ಅನುಭವ, ಸಂಪರ್ಕಗಳನ್ನು ಹಂಚಿಕೊಳ್ಳಬೇಕು. ಅತ್ಯುತ್ತಮ ಜ್ಞಾನ ಕರ್ನಾಟಕದಲ್ಲಿ ಲಭ್ಯವಾಗಬೇಕು ಎನ್ನುವುದು ನಮ್ಮ ಆಶಯ ಎಂದರು.

ಇದನ್ನೂ ಓದಿ: ಬಿಇಎಂಎಲ್‍ನ 971 ಎಕರೆ ಜಮೀನು ಅಭಿವೃದ್ಧಿಪಡಿಸಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ: ಸಿಎಂ

ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು: ಸಮಾಜ ನಡೆಯುತ್ತಿರುವುದು ದಾನ ನೀಡುವುದರಿಂದ, ಅಂತಿಮವಾಗಿ ಗಳಿಸಿದ್ದನ್ನು ಇಲ್ಲಿಯೇ ಹಿಂದಿರುಗಿಸಬೇಕು. ದಾನ ನೀಡುವುದು ಬದುಕಿನ ಪ್ರಮುಖ ಭಾಗ. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯಡಿ ಅಥವಾ ಇನ್ಯಾವುದೇ ರೀತಿಯಲ್ಲಿ ನೀಡಿದರೂ ಅದನ್ನು ಹೂಡಿಕೆ ಎಂದು ಪರಿಗಣಿಸಲಾಗುತ್ತದೆಯೋ ಅಥವಾ ಖರ್ಚು ಎಂದು ಭಾವಿಸಬೇಕೇ ಎಂಬ ಪ್ರಶ್ನೆ ಸರ್ಕಾರದ ಮಟ್ಟದಲ್ಲಿಯೂ ಕೇಳಿಬರುತ್ತದೆ ಎಂದು ವಿವರಿಸಿದರು.

ಉನ್ನತ ಶಿಕ್ಷಣ ಇಲಾಖೆ ಅತ್ಯುತ್ತಮ ಕೆಲಸ ಮಾಡುತ್ತಿದ್ದು, ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರಂತಹ ಕ್ರಿಯಾಶೀಲ ಸಚಿವರು ನೈಜ ಬದಲಾವಣೆ ತರಲು ಶ್ರಮಿಸುತ್ತಿದ್ದಾರೆ. ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದು ಅನುಷ್ಠಾನಕ್ಕೂ ಮುಂದಾಗಿದ್ದಾರೆ. ನೂತನ ಶಿಕ್ಷಣ ನೀತಿಯ ಮೂಲಕ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಯನ್ನು ಶಿಕ್ಷಣ. ಕ್ಷೇತ್ರದಲ್ಲಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: ಗಂಗಾವತಿ ಸರ್ಕಾರಿ ಆಸ್ಪತ್ರೆ ಯಾವುದೇ ಕಾರ್ಪೊರೇಟ್ ಸಂಸ್ಥೆಗೆ ಕಡಿಮೆ ಇಲ್ಲ : ಬಿ ಸಿ ಪಾಟೀಲ್

ಸಮಾವೇಶದಲ್ಲಿ ಡಾ. ದೇವಿ ಶೆಟ್ಟಿ, ಕ್ರಿಸ್ ಗೋಪಾಲಕೃಷ್ಣ, ಅನಿಲ್ ಕುಂಬ್ಳೆ ಸೇರಿದಂತೆ ವಿವಿಧ ಕಂಪನಿಗಳ ಮುಖ್ಯಸ್ಥರು ಭಾಗಿಯಾಗಿದ್ದರು. ರಾಜ್ಯದ ಪ್ರತಿಷ್ಠಿತ ಕಂಪನಿಗಳ ಸಿಇಒಗಳು, ಮುಖ್ಯಸ್ಥರು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.