ETV Bharat / state

ಅಚ್ಚರಿಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: ಟಿಕೆಟ್ ಘೋಷಿಸದ 35 ಕ್ಷೇತ್ರದ ಬಗ್ಗೆ ಹೆಚ್ಚಿದ ಕುತೂಹಲ

author img

By

Published : Apr 12, 2023, 7:43 AM IST

Updated : Apr 13, 2023, 9:11 AM IST

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ಘೋಷಿಸದ 35 ಕ್ಷೇತ್ರದ ಬಗ್ಗೆ ಕೂತುಹಲ ಹೆಚ್ಚಾಗಿದೆ.

constituencies not announced by the BJP  not announced by the BJP ticket  BJP ticket news  ಟಿಕೆಟ್ ಘೋಷಿಸದ 35 ಕ್ಷೇತ್ರದ ಬಗ್ಗೆ ಹೆಚ್ಚಿದ ಕುತೂಹಲ  ಅಚ್ಚರಿಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ  ಅಚ್ಚರಿಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ  ಟಿಕೆಟ್ ಘೋಷಿಸದ 35 ಕ್ಷೇತ್ರದ ಬಗ್ಗೆ ಹೆಚ್ಚಿದ ಕುತೂಹಲ  ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ  ಟಿಕೆಟ್ ಘೋಷಿಸದ 35 ಕ್ಷೇತ್ರದ ಬಗ್ಗೆ ಕೂತುಹಲ  ಬೆಂಗಳೂರು 3 ಕ್ಷೇತ್ರಗಳ ಹೆಸರು ಬಾಕಿ  ಗೋವಿಂದರಾಜನಗರ ಕ್ಷೇತ್ರದ ಸಸ್ಪೆನ್ಸ್  ಶಿವಮೊಗ್ಗ ಕ್ಷೇತ್ರ ಟಿಕೆಟ್ ಘೋಷಣೆ
ಅಚ್ಚರಿಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ

ಬೆಂಗಳೂರು: ಮುಂಬರುವ ಚುನಾವಣೆಗೆ ಹಲವು ಅಚ್ಚರಿಗಳೊಂದಿಗೆ ಬಿಜೆಪಿ ಹೈಕಮಾಂಡ್ ತನ್ನ ಹುರಿಯಾಳುಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಹೊಸ‌ ಮುಖಗಳೊಂದಿಗೆ ಒಟ್ಟು 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇನ್ನೂ 35 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಾಕಿ ಉಳಿಸಿಕೊಂಡಿದೆ.

ಗುಜರಾತ್ ಮಾದರಿಯನ್ನೇ ಕರ್ನಾಟಕದಲ್ಲೂ ಅನುಸರಿಸಿರುವ ಬಿಜೆಪಿ ಹೈ ಕಮಾಂಡ್ 52 ಹೊಸ ಮುಖಗಳಿಗೆ ಈ ಬಾರಿ ಮಣೆ ಹಾಕಿದೆ. ಜೊತೆಗೆ 8 ಮಹಿಳೆಯರಿಗೆ ಟಿಕೆಟ್ ನೀಡಿದೆ.‌ ಕೆಲ ಹಾಲಿ ಶಾಸಕರು, ಹಿರಿಯರನ್ನು ಕೈ ಬಿಟ್ಟಿರುವ ಬಿಜೆಪಿ ಹೈ ಕಮಾಂಡ್ ತನ್ನದೇ ಆದ ಚುನಾವಣಾ ಕಾರ್ಯತಂತ್ರ ರೂಪಿಸಿದೆ. ಬಿಜೆಪಿ ಇನ್ನೂ 35 ಕ್ಷೇತ್ರಗಳಿಗೆ ಬಿಜೆಪಿ ಹೈಕಮಾಂಡ್ ಇನ್ನೂ ಟಿಕೆಟ್​ ಘೋಷಣೆ ಮಾಡಿಲ್ಲ.‌ ಅದರಲ್ಲೂ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರನ್ನು ಘೋಷಿಸದೇ ಇರುವುದು ಹಲವು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು 3 ಕ್ಷೇತ್ರಗಳ ಹೆಸರು ಬಾಕಿ: ಅಚ್ಚರಿ ಎಂಬಂತೆ ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸದೇ ಬಾಕಿ ಉಳಿಸಿಕೊಂಡಿದೆ. ಮುಖ್ಯವಾಗಿ ಅರವಿಂದ ಲಿಂಬಾವಳಿ ಶಾಸಕರಾಗಿರುವ ಮಹದೇವಪುರ, ಹೆಬ್ಬಾಳ ಹಾಗೂ ವಿ.ಸೋಮಣ್ಣ ಶಾಸಕರಾಗಿರುವ ಗೋವಿಂದರಾಜನಗರ ಕ್ಷೇತ್ರದ ಹೆಸರನ್ನು ಘೋಷಿಸಿಲ್ಲ. ಮಹದೇವಪುರ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಿಸದೇ ಇರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಅರವಿಂದ ಲಿಂಬಾವಳಿ ಹಾಲಿ ಶಾಸಕರ ಕ್ಷೇತ್ರಕ್ಕೆ ಹೆಸರು ಘೋಷಿಸದ ಕಾರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ‌.

ಇತ್ತ ವಿ.ಸೋಮಣ್ಣ ಶಾಸಕರಾಗಿರುವ ಗೋವಿಂದರಾಜನಗರ ಕ್ಷೇತ್ರದ ಸಸ್ಪೆನ್ಸ್ ಉಳಿದುಕೊಂಡಿದೆ. ವಿ ಸೋಮಣ್ಣಗೆ ವರುಣ ಹಾಗೂ ಚಾಮರಾಜನಗರ ಕ್ಷೇತ್ರಗಳಿಗೆ ಟಿಕೆಟ್ ನೀಡಿದ್ದು, ಗೋವಿಂದರಾಜನಗರ ಯಾರಿಗೆ ಎಂಬ ಕುತೂಹಲ ಮೂಡಿದೆ. ವಿ. ಸೋಮಣ್ಣ ಮಗನಿಗೆ ಕ್ಷೇತ್ರದ ಟಿಕೆಟ್ ಕೊಡ್ತಾರ ಅಥವಾ ವಿ. ಸೋಮಣ್ಣ ಶಿಷ್ಯ ಉಮೇಶ್ ಶೆಟ್ಟಿಗೆ ಟಿಕೆಟ್ ಕೊಡ್ತಾರಾ ಎಂಬ ಪ್ರಶ್ನೆ ಮೂಡಿದೆ.

ಹುಬ್ಬಳಿ ಧಾರವಾಡ ಕೇಂದ್ರ ಸಸ್ಪೆನ್ಸ್: ಹಿರಿಯ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರದ ಟಿಕೆಟ್ ಘೋಷಿಸದೇ ಹಾಗೇ ಬಾಕಿ ಉಳಿಸಿಕೊಳ್ಳಲಾಗಿದೆ. ಜಗದೀಶ್ ಶೆಟ್ಟರ್ ತಮಗೆ ಈ ಬಾರಿ ಟಿಕೆಟ್ ನೀಡದಿರುವ ಬಗ್ಗೆ ಹೈ‌ಕಮಾಂಡ್ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ. ತಮಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಾರಿ ಚುನಾವಣೆಗೆ ನಿಲ್ಲುವುದಾಗಿ ತಿಳಿಸಿರುವ ಅವರು, ಹೈಕಮಾಂಡ್ ಬುಲಾವ್​ ಮೇರೆಗೆ​ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ ತಮ್ಮ ಕ್ಷೇತ್ರ ಹಾಗೂ ಟಿಕೆಟ್​ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಶಿವಮೊಗ್ಗ ಕ್ಷೇತ್ರ ಟಿಕೆಟ್ ಘೋಷಣೆ ಇಲ್ಲ: ಇತ್ತ ಕೆ ಎಸ್ ಈಶ್ವರಪ್ಪ ಪ್ರತಿನಿಧಿಸುವ ಕ್ಷೇತ್ರ ಶಿವಮೊಗ್ಗ ಟಿಕೆಟ್ ಘೋಷಣೆ ಮಾಡದೇ ಬಾಕಿ ಉಳಿಸಿಕೊಳ್ಳಲಾಗಿದೆ. ತಾವು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಕೆ ಎಸ್ ಈಶ್ವರಪ್ಪ ಕ್ಷೇತ್ರದ ಟಿಕೆಟ್​ನ್ನು ತಮ್ಮ ಮಗನಿಗೆ ನೀಡುವ ಆಶಾಭಾವನೆಯಲ್ಲಿದ್ದಾರೆ. ಇತ್ತ ಬಿಜೆಪಿಯಿಂದ ಆಯನೂರು ಮಂಜುನಾಥ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕ್ಷೇತ್ರ ಬಾಕಿ ಉಳಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗಂಗಾವತಿ ಸಸ್ಪೆನ್ಸ್: ಇತ್ತ ಮಾಜಿ ಸಚಿವ ಕೆಆರ್​ಪಿಪಿ ಜನಾರ್ದನ್​ ರೆಡ್ಡಿ ಸ್ಪರ್ಧಿಸುತ್ತಿರುವ ಗಂಗಾವತಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡದೇ ಇರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಗಂಗಾವತಿಯಲ್ಲಿ ಬಿಜೆಪಿ ಹೈಕಮಾಂಡ್ ಯಾವ ತಂತ್ರಗಾರಿಕೆ ರೂಪಿಸುತ್ತಿದೆ ಎಂಬ ಸಸ್ಪೆನ್ಸ್ ದಟ್ಟವಾಗಿದೆ. ಜನಾರ್ದನ ರೆಡ್ಡಿ ಪ್ರತಿನಿಧಿಸುವ ಕ್ಷೇತ್ರದಲ್ಲಿರುವ ಬಿಜೆಪಿ ಯಾವ ಹುರಿಯಾಳನ್ನು ಕಣಕ್ಕಿಳಿಸುತ್ತೆ ಅಥವಾ ಬೇರೆಯದೇ ತಂತ್ರಗಾರಿಕೆ ಹೂಡಿದೆಯಾ ಎಂಬ ಕುತೂಹಲ ಮೂಡಿದೆ.

ಚನ್ನಗಿರಿ ಕ್ಷೇತ್ರ ಟಿಕೆಟ್ ಘೋಷಣೆ ಇಲ್ಲ: ಇತ್ತ ಲಂಚ ಸ್ವೀಕಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಶಾಸಕರಾಗಿರುವ ಚನ್ನಗಿರಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ. ಈಗಾಗಲೇ ಅವರ ಪುತ್ರ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಸ್ಥಳೀಯ ಕಾರ್ಯಕರ್ತರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಚನ್ನಗಿರಿಗೆ ಬಿಜೆಪಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಸಸ್ಪೆನ್ಸ್ ಮುಂದುವರಿದಿದೆ.

ಮೂಡಿಗೆರೆ ಟಿಕೆಟ್ ಸಸ್ಪೆನ್ಸ್: ಇತ್ತ ಎಂ ಪಿ ಕುಮಾರಸ್ವಾಮಿ ಪ್ರತಿನಿಧಿಸುವ ಮೂಡಿಗೆರೆ ಕ್ಷೇತ್ರದ ಟಿಕೆಟ್ ಘೋಷಣೆ ಆಗಿಲ್ಲ. ಕುಮಾರಸ್ವಾಮಿಗೆ ಟಿಕೆಟ್ ನೀಡುವ ಬಗ್ಗೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಹೈ ಕಮಾಂಡ್ ಆ ಕ್ಷೇತ್ರವನ್ನು ಪೆಂಡಿಂಗ್ ಉಳಿಸಿದೆ.

ಕೃಷ್ಟರಾಜ ಸಸ್ಪೆನ್ಸ್: ಎ. ರಾಮದಾಸ್​ ಪ್ರತಿನಿಧಿಸುವ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಸಹ ಘೋಷಣೆ ಆಗಿಲ್ಲ. ಆ ಕ್ಷೇತ್ರಕ್ಕೆ ಟಿಕೆಟ್ ಘೋಷಿಸದೇ ಗುಪ್ತವಾಗಿ ಉಳಿಸಿಕೊಂಡಿದೆ ಹೈಕಮಾಂಡ್​.

ಗುಬ್ಬಿ ಕ್ಷೇತ್ರದ ಕತೂಹಲ: ಗುಬ್ಬಿ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡದೇ ಹೈ ಕಮಾಂಡ್ ಕುತೂಹಲ ಕೆರಳಿಸಿದೆ. ವಿ. ಸೋಮಣ್ಣ ಪುತ್ರ ಅರುಣ್ ಸೋಮಣ್ಣಗೆ ಟಿಕೆಟ್ ನೀಡಲು ಮನವಿ ಮಾಡಿದ್ದಾರೆ. ಅರುಣ್ ಹೆಸರು ಚಾಮರಾಜನಗರ ಹನೂರು ಹಾಗೂ ಗುಬ್ಬಿ ಕ್ಷೇತ್ರದಲ್ಲಿ ಕೇಳಿ ಬರುತ್ತಿತ್ತು. ಹನೂರು ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಗುಬ್ಬಿ ಕ್ಷೇತ್ರದ ಟಿಕೆಟ್ ಘೋಷಣೆ ಬಾಕಿ ಉಳಿಸಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಅರುಣ್ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಅರುಣ್ ಸೋಮಣ್ಣಗೆ ಟಿಕೆಟ್ ನೀಡುತ್ತಾ ಅಥವಾ ಬಿಜೆಪಿ ಹೈ ಕಮಾಂಡ್ ತಲೆಯಲ್ಲಿ ಬೇರೆ ತಂತ್ರಗಾರಿಕೆ ಇದೆಯಾ ಎಂಬ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಟಿಕೆಟ್ ಘೋಷಣೆಯಾಗದ ಕ್ಷೇತ್ರಗಳಿವು: ದೇವರ್ ಹಿಪ್ಪರಗಿ, ಬಸವನ ಬಾಗೇವಾಡಿ, ನಾಗಠಾಣ, ಇಂಡಿ, ಗುರುಮಿಟ್ಕಲ್, ಸೇಡಂ, ಬೀದರ್, ಭಾಲ್ಕಿ, ಮಾನ್ವಿ, ಕೊಪ್ಪಳ, ರೋಣ, ಕಲಘಟಗಿ, ಹಾನಗಲ್, ಹಾವೇರಿ, ಹಗರಿಬೊಮ್ಮನಹಳ್ಳಿ, ಹರಪ್ಪನಹಳ್ಳಿ, ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಮಾಯಕೊಂಡ, ಬೈಂದೂರು, ಶಿಡ್ಲಘಟ್ಟ, ಕೋಲಾರ ಗೋಲ್ಡ್ ಫೀಲ್ಡ್, ಶ್ರವಣಬೆಳಗೊಳ, ಅರಸೀಕೆರೆ, ಹೆಗ್ಗಡದೇವನಕೋಟೆ.

ಓದಿ: ವಲಸಿಗರ ಕೈ ಬಿಡದ ಬಿಜೆಪಿ: ಟಿಕೆಟ್‌ ಗಿಟ್ಟಿಸಿಕೊಂಡವರ ವಿವರ..

Last Updated : Apr 13, 2023, 9:11 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.