ಬೆಂಗಳೂರು: ಜುಲೈ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕೊಡಲು ಕ್ರಮ ಕೈಗೊಳ್ಳಲಾಗುವುದು. ಬೋಧಕರು, ಬೋಧಕೇತರರು ಹಾಗು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿದ ಬಳಿಕ ಕಾಲಕ್ರಮೇಣ ತರಗತಿಗಳು ಆರಂಭವಾಗುತ್ತವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಡಿಸಿಎಂ, ಕೋವಿಡ್ ಹೆಚ್ಚು ಹರಡುವ ಮೂಲಕ ರೂಪಾಂತರ ಆಗಲಿದೆ. ಇದಕ್ಕೆ ಲಸಿಕೆಯೇ ರಾಮಬಾಣ. ಡೆಲ್ಟಾ, ಡೆಲ್ಟಾ ಪ್ಲಸ್ ವೈರಸ್ಗಳಿಗೆ ಲಸಿಕೆಯೇ ಸಂಜೀವಿನಿ. ನಿನ್ನೆ ಡಾ.ದೇವಿಶೆಟ್ಟಿ ನೇತೃತ್ವದ ಸಮಿತಿ ವರದಿ ಕೊಟ್ಟಿದೆ. ಆದ್ಯತೆಯ ಆಧಾರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕೊಡುವ ಗುರಿ ಇದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.