ETV Bharat / state

ಸಿಂಗಾಪುರದಲ್ಲಿ ಕುಳಿತು ಸರ್ಕಾರ ಬೀಳಿಸುವ ಪಿತೂರಿ ಬಗ್ಗೆ ನಮಗೂ ಮಾಹಿತಿ ಇದೆ: ಡಿ ಕೆ ಶಿವಕುಮಾರ್

author img

By

Published : Jul 24, 2023, 2:08 PM IST

Updated : Jul 24, 2023, 2:48 PM IST

ಡಿ ಕೆ ಶಿವಕುಮಾರ್​ ತಮ್ಮ ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಆ ಕುರಿತು ಮಾಹಿತಿ ಇದೆ ಎಂಬ ಹೇಳಿಕೆ ನೀಡಿದ್ದಾರೆ.

ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಸಿಂಗಾಪರದಲ್ಲಿ ಕುಳಿತು ಸರ್ಕಾರ ಬೀಳಿಸುವ ಪಿತೂರಿ ಬಗ್ಗೆ ನಮಗೂ ಮಾಹಿತಿ ಇದೆ: ಡಿ ಕೆ ಶಿವಕುಮಾರ್

ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸರ್ಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಸದಾಶಿವನಗರ ನಿವಾಸದಲ್ಲಿ ಇಂದು ಉತ್ತರಿಸಿ, ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಈ ಕೆಲಸ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ ಎಂದರು.

ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜೊತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದು ಡಿ ಕೆ ಶಿವಕುಮಾರ್ ಇದೇ ವೇಳೆ ತಿಳಿಸಿದರು.

ಇನ್ನು, ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತ ಈಗ ಸಿಂಗಾಪುರದಲ್ಲಿ ಕುಳಿತು ಆಪರೇಷನ್ ಮಾಡ್ತಿದ್ದಾರೆ ಎಂದು ಡಿಕೆಶಿ ಹೇಳಿದರು.

ಶಾಸಕರೊಬ್ಬರು ಹನಿಟ್ರ್ಯಾಪ್ ಮಾಡ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್, ನಿನ್ನೆ ವೇಲು ನಾಯ್ಕರ್ ಏನೇನು‌ ಮಾತನಾಡಿದ್ದಾರೋ‌ ಗೊತ್ತಿಲ್ಲ. ಅವರಿಗೆ ಯಾವ ಮಾಹಿತಿ ಇದೆಯೋ. ನಾನು ಸಭೆಗೆ ತಡವಾಗಿ‌ ಹೋಗಿದ್ದೆ ಎಂದು ವಿವರಿಸಿದರು.

ಮಣಿಪುರ ಕಾಂಗ್ರೆಸ್​ ಮುಖಂಡರ ಭೇಟಿ.. ಮಣಿಪುರ ಕಾಂಗ್ರೆಸ್ ಮತ್ತು ಕುಕಿ ಸಮುದಾಯದ ಯುವ ಮುಖಂಡರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಮಣಿಪುರದ ಹಿಂಸಾಚಾರ, ತಮ್ಮ ಸಮುದಾಯದ ಮೇಲಾಗುತ್ತಿರುವ ದೌರ್ಜನ್ಯ, ಅಲ್ಲಿನ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಇದನ್ನೂ ಓದಿ:ಶಕ್ತಿ ಯೋಜನೆಯಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ : ಸಚಿವ ಹೆಚ್​​ ಕೆ ಪಾಟೀಲ್

Last Updated : Jul 24, 2023, 2:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.