ETV Bharat / state

ರಂಗೇರಿದ ಚುನಾವಣಾ ಕಣ: ಮೋದಿ, ಯೋಗಿಯಿಂದ ನಡೆಯಲಿದೆ ರಾಜ್ಯದಲ್ಲಿ ಚುನಾವಣಾ ಪ್ರಚಾರ

author img

By

Published : Apr 25, 2023, 8:36 AM IST

ಪ್ರಧಾನಿ ಮೋದಿ ಅವರು ಏ.29ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದು ಕೋಲಾರ, ಚನ್ನಪಟ್ಟಣ, ಮೈಸೂರಿನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಮೋದಿ ಯೋಗಿಯಿಂದ ಚುನಾವಣಾ ಪ್ರಚಾರ
ಮೋದಿ ಯೋಗಿಯಿಂದ ಚುನಾವಣಾ ಪ್ರಚಾರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಆಗಮಿಸುತ್ತಿದ್ದು, ರೋಡ್ ಶೋ, ಸಾರ್ವಜನಿಕ ಸಭೆ, ಮನೆ ಮನೆ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಏಪ್ರಿಲ್ 29 ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಿಗದಿಯಾಗಿದೆ. ನಗರದ
ಮಾಗಡಿ ರಸ್ತೆ ನೈಸ್ ಜಂಕ್ಷನ್ ನಿಂದ ಸುಂಕದಕಟ್ಟೆ ತನಕ ರೋಡ್ ಶೋ ನಡೆಸಲಿರುವ ಪ್ರಧಾನಿ, ಅಂದು ರಾತ್ರಿ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ರಾಜಭವನದಲ್ಲಿ ವಾಸ್ತವ್ಯ ಹೂಡಲಿರುವ ಮೋದಿ ಮರುದಿನ ಅಂದರೆ ಏ.30ಕ್ಕೆ ಮೂರು ಕಡೆ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಮೊದಲು ಕೋಲಾರ ನಂತರ ಚನ್ನಪಟ್ಟಣ ಕಡೆಯದಾಗಿ ಮೈಸೂರಿನಲ್ಲಿ ನಮೋ ಭಾಷಣ ಮಾಡಲಿದ್ದಾರೆ.

ಏಪ್ರಿಲ್ 26 ಕ್ಕೆ ಮೂವರು ನಾಯಕರ ರಾಜ್ಯ ಪ್ರವಾಸ: ಏಪ್ರಿಲ್ 26ರ ಬೆಳಗ್ಗೆ ಲಕ್ನೋದಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮೈಸೂರಿನಿಂದ ಮಂಡ್ಯಕ್ಕೆ ತೆರಳಿ ಮಂಡ್ಯದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ, ಮಂಡ್ಯ ಕಾರ್ಯಕ್ರಮ ಮುಗಿಸಿ ಮೈಸೂರಿಗೆ ವಾಪಸಾಗಲಿರುವ ಯೋಗಿ ಆದಿತ್ಯನಾಥ್ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಲಿದ್ದಾರೆ. ಅಲ್ಲಿಂದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಗೆ ತೆರಳಲ್ಲಿರುವ ಅವರು ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ವಿಜಯಪುರದಲ್ಲಿ ಸಾರ್ವಜನಿಕ ಸಭೆಯನ್ನುದೇಶಿಸಿ ಮಾತನಾಡಲಿದ್ದಾರೆ. ಬಸವನಬಾಗೇವಾಡಿಯಲ್ಲಿ ಕಾರ್ಯಕ್ರಮ ನಡಸಿ ಅಲ್ಲಿಂದ ಇಂಡಿಗೆ ತೆರಳಲಿರುವ ಯೋಗಿ ಆದಿತ್ಯನಾಥ್ ಇಂಡಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಬಳಿಕ ಸಂಜೆ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಿದ್ದಾರೆ.

26 ರಂದು ಬೆಳಗ್ಗೆ ಬೆಳಗಾವಿ ಜಿಲ್ಲೆಯ ಕಾಗವಾಡಕ್ಕೆ ಆಗಮಿಸಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಗವಾಡದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವಿದ್ದಾರೆ, ನಂತರ ಜಮಖಂಡಿಗೆ ತೆರಳಿ ಅಲ್ಲಿಯೂ ಆಯೋಜನೆಯಾಗಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡಲಿದ್ದಾರೆ.

ಇದನ್ನೂ ಓದಿ: ಶೆಟ್ಟರ್ ಕಟ್ಟಿ ಹಾಕಲು ಬಿಜೆಪಿ ರಣತಂತ್ರ: ರಾತ್ರೋರಾತ್ರಿ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ

ಏಪ್ರಿಲ್ 26 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಕಲಬುರ್ಗಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ ಕಲ್ಬುರ್ಗಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಪಕ್ಷದ ಅಭ್ಯರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ ಅಲ್ಲಿಂದ ಆಳಂದಕ್ಕೆ ತೆರಳಲಿರುವ ಅವರು ಆಳಂದದಲ್ಲಿ ನಡೆಯಲಿರುವ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಕಲಬುರ್ಗಿ ಸಿಟಿಯಲ್ಲಿ ಆಯೋಜನೆಗೊಂಡಿರುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂದು ಸಂಜೆ ಮಹಾಸಂಪರ್ಕ ಅಭಿಯಾನದ ಅಂಗವಾಗಿ ಮನೆಮನೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಚಾಣಕ್ಯನ ಮಿಂಚಿನ ಸಂಚಾರ: ಕೈಪಡೆ ವಿರುದ್ಧ ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.