ETV Bharat / state

ಬಿಜೆಪಿ ಮುಖಂಡನಿಂದ 5 ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

author img

By

Published : Aug 28, 2022, 9:02 PM IST

eco friendly Ganesha idols
5 ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ಸಮಾಜ ಸೇವಕರಾದ ದುಶ್ಯಂತ್ ರಾಜ್ ಅವರು ಐದು ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು, ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಿದರು. ಮೂರ್ತಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಚಿವ ಬೈರತಿ ಬಸವರಾಜ್ ಚಾಲನೆ ನೀಡಿದರು.

ಬೆಂಗಳೂರು: ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಎಲ್ಲಾರು ಹಬ್ಬದ ತಯಾರಿಯಲ್ಲಿ ತೊಡಗಿದ್ದಾರೆ. ಕೆಲವರು ಪ್ಲಾಸ್ಟಿಕ್​ ಮತ್ತು ವೈಟ್​ ಸಿಮೆಂಟ್​ ಗಣೇಶನ ಮೂರ್ತಿಗಳನ್ನು ಮನೆಗೆ ತರಬಹುದು. ಇದು ಪರಿಸರಕ್ಕೆ ಮಾರಕವಾಗಿ ಪರಿಣಮಿಸಲಿದೆ. ಈ ಎಲ್ಲಾ ದೃಷ್ಟಿಯಿಂದ ಸಮಾಜ ಸೇವಕರೊಬ್ಬರು ಸಾರ್ವಜನಿಕರಿಗೆ ಉಚಿತವಾಗಿ 5 ಸಾವಿರ ಮಣ್ಣಿನಿಂದ ಮಾಡಲ್ಪಟ್ಟ ಗಣೇಶ ಮೂರ್ತಿಗಳನ್ನು ವಿತರಿಸಿದ್ದಾರೆ.

ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಚಿವ ಬೈರತಿ ಬಸವರಾಜ್ ಚಾಲನೆ ನೀಡಿದರು. ಬೆಂಗಳೂರಿನ ಕೆಆರ್ ಪುರಂ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ಮಾರ್ಗದರ್ಶನದಲ್ಲಿ, ರಾಮಮೂರ್ತಿನಗರ ವಾರ್ಡ್​ನ ಬಿಜೆಪಿ ಮುಖಂಡ ದುಶ್ಯಂತ ರಾಜ್ ಮೂರ್ತಿಗಳನ್ನು ವಿತರಿಸಿದರು. ಅಷ್ಟೇ ಅಲ್ಲದೇ ಪರಿಸರ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಸಹ ಮೂಡಿಸಿದ್ದಾರೆ.

5 ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ಈ ವೇಳೆ ಮಾಧ್ಯಮಗಳ ಜೊತೆ ಸಮಾಜ ಸೇವಕರಾದ ದುಶ್ಯಂತ್ ರಾಜ್ ಅವರು ಮಾತನಾಡಿ, ಕಳೆದ ಹನ್ನೆರಡು ವರ್ಷಗಳಿಂದ ಗಣೇಶ ಚತುರ್ಥಿಗೆ ಕೈಲಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದೇವೆ. ಕಳೆದ ವರ್ಷವೇ 5 ಸಾವಿರ ಗಣೇಶ ಮೂರ್ತಿಗಳನ್ನು ವಿತರಿಸಬೇಕಾಗಿತ್ತು. ಆದ್ರೆ ಕೊರೊನಾ ಎಲ್ಲದಕ್ಕೂ ಅಡ್ಡಿ ಉಂಟು ಮಾಡಿತ್ತು. ಹಾಗಾಗಿ ಈ ಬಾರಿ ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನಿಂದ ಮಾಡಲ್ಪಟ್ಟ ಗಣೇಶನ ಮೂರ್ತಿಗಳನ್ನು ವಿತರಿಸಲಾಗ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ವೀರ ಸಾವರ್ಕರ್ ವೇದಿಕೆಯಲ್ಲಿ ಈ ಬಾರಿ ಕಾಶಿ ವಿಶ್ವನಾಥ ರಕ್ಷಕ ಗಣಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.