ETV Bharat / state

ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಬ್ರಾಂಡ್ : ಸಚಿವ ಅಶ್ವತ್ಥನಾರಾಯಣ ತಿರುಗೇಟು

author img

By

Published : Nov 3, 2022, 8:40 PM IST

ಡಿಕೆಶಿ ಹಗರಣದ ಕನ್ನಡಿ ಇದ್ದಂತೆ. ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಭದ್ರ ಭುನಾದಿ ಹಾಕಿದ್ದು, ಡಿ ಕೆ ಶಿವಕುಮಾರ್​​ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಡಿಕೆ ಶಿವಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದರು.

dk-shivakumar-is-brand-for-corruption
ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಬ್ರಾಂಡ್ : ಸಚಿವ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ಸಂಸ್ಕೃತಿಗೆ ಕೊಡುಗೆ ನೀಡಿದ್ದು, ಮತ್ತು ಭದ್ರಭುನಾದಿ ಹಾಕಿದ್ದು ಡಿ.ಕೆ.ಶಿವಕುಮಾರ್, ಅವರು ಭ್ರಷ್ಟಾಚಾರದ ಬ್ರಾಂಡ್ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಡಿಕೆ ಶಿವಕುಮಾರ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆಶಿ ಅವರೇ ಹಗರಣದ ಕನ್ನಡಿ ಇದ್ದಂತೆ. ಅವರಿಗೆ ಅವರದೇ ಆದ ಒಂದು ಬ್ರಾಂಡ್ ಇದೆ. ಡಿ.ಕೆ. ಎಂದರೆ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ.‌ ಭ್ರಷ್ಟಾಚಾರಕ್ಕೆ ಬುನಾದಿ ಹಾಕಿದ ಮಹಾಪುರಷನೇ ಈ ಡಿಕೆ ಶಿವಕುಮಾರ್ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಯಾರು ಬೇಕಾದರೂ ಬರಬಹುದು ಎಂಬ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಭವಿಷ್ಯ ಇಲ್ಲದ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ. ಭವಿಷ್ಯ ಇಲ್ಲದ ಪಕ್ಷಕ್ಕೆ ಯಾರಾದರೂ ಹೋಗುತ್ತಾರಾ ?. ಆ ಪಕ್ಷಕ್ಕೆ ಯಾರು ಹೋಗುವುದಿಲ್ಲ ಎಂದು ಹೇಳಿದರು.

ಇನ್ನು ಬೆಂಗಳೂರಿನಲ್ಲಿ ಎಷ್ಟು ರಸ್ತೆ ಗುಂಡಿಗಳನ್ನು ನಾವು ಮುಚ್ಚಿದೇವೆ ಎನ್ನುವ ಬಗ್ಗೆ ಮಾಹಿತಿ ಕೊಡುತ್ತೇವೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿದೆ. ಆದರೆ, ಮಳೆ ಬರುವುದರಿಂದ ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಅಡೆತಡೆ ಉಂಟಾಗುತ್ತಿದೆ. ಬೆಂಗಳೂರಿನ ರಸ್ತೆಗಳು ನ್ಯಾಷನಲ್ ಹೈವೇಗಳಲ್ಲ.‌ ನವೆಂಬರ್ ನಲ್ಲಿ ಕೂಡ ಮಳೆ ಬರುತ್ತಿದೆ. ಹೀಗಾಗಿ ರಸ್ತೆ ಗುಂಡಿಗಳು ಮುಚ್ಚುವುದಕ್ಕೆ ಕಷ್ಟ ಆಗುತ್ತಿದೆ ಎಂದರು. ಎಲ್ಲೂ ಕಳಪೆ ಕಾಮಗಾರಿ ನಡೆದಿಲ್ಲ ಎಂದು ಹೇಳಿದರು. ಮಲ್ಲೇಶ್ವರಂನಲ್ಲಿ ದಂಪತಿಗಳು ರಸ್ತೆಗುಂಡಿ ಮುಚ್ಚಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ಹಾರಿಕೆಯ ಉತ್ತರ ನೀಡಿದರು.

ಇದನ್ನೂ ಓದಿ : ಬೆಂಗಳೂರಲ್ಲಿ ಧರ್ಮ - ಲಿಂಗ ಬೇಧವಿಲ್ಲದೇ ಮಸೀದಿ ದರ್ಶನಕ್ಕೆ ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.