ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು 73ನೇ ವರ್ಷದ ಹುಟ್ಟುಹಬ್ಬದ ಶುಭ ಕೋರಿದ್ದಾರೆ.
ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಭಗವಂತ ತಮ್ಮ ಆಯುರಾರೋಗ್ಯವನ್ನು ಚೆನ್ನಾಗಿಡಲಿ, ಸಾರ್ವಜನಿಕ ಜೀವನದಲ್ಲಿ ತಾವು ಸುದೀರ್ಘವಾಗಿ ಕಾರ್ಯ ನಿರ್ವಹಿಸುವಂತಾಗಲಿ ಪ್ರಾರ್ಥಿಸುವುದಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಡಿಸಿಎಂ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಟ್ವೀಟ್ ಮಾಡಿದ್ದಾರೆ.