ಬಾರ್​​ ಲೈಸೆನ್ಸ್​ಗೆ 15 ಲಕ್ಷ ಲಂಚ: ಎಸಿಬಿ ಬಲೆಗೆ ಬಿದ್ದ ಅಬಕಾರಿ ಇನ್ಸ್​ಪೆಕ್ಟರ್

author img

By

Published : May 20, 2022, 11:00 AM IST

excise-inspector-arrested-by-acb-in-bribe-case

ಬಾರ್ ಅಂಡ್ ರೆಸ್ಟೋರೆಂಟ್ ಲೈಸೆನ್ಸ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇನ್ಸ್​ಪೆಕ್ಟರ್ ಅ​ನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು: ಬಾರ್ ಅಂಡ್ ರೆಸ್ಟೋರೆಂಟ್ ಲೈಸೆನ್ಸ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇನ್ಸ್​ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೆಂಗೇರಿ ವಲಯದ ಅಬಕಾರಿ ಇನ್ಸ್​ಪೆಕ್ಟರ್ ಮಂಜುನಾಥ್ ಬಂಧಿತ ಅಧಿಕಾರಿಯಾಗಿದ್ದಾರೆ.

ಸಿ.ಎಲ್ 7 ಲೈಸೆನ್ಸ್​ಗೆ ಬಾರ್ ಮಾಲೀಕರೊಬ್ಬರು ಅರ್ಜಿ ಸಲ್ಲಿಸಿದ್ದರು. ಅಬಕಾರಿ ಆಯುಕ್ತರು ಪರಿಶೀಲಿಸಿ ಅಬಕಾರಿ ಇನ್ಸ್​ಪೆಕ್ಟರ್​ಗೆ ಅರ್ಜಿ ವರ್ಗಾಯಿಸಿದ್ದರು. ಇನ್ಸ್​ಪೆಕ್ಟರ್ ಮಂಜುನಾಥ್ ಅನುಮತಿ ನೀಡಲು 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಾರ್ ಮಾಲೀಕ ಅಪರಾಧ ಪತ್ತೆ ದಳದ ಅಧಿಕಾರಿಗಳಿಗೆ ದೂರು ನೀಡಿದ್ದರು.

11 ಲಕ್ಷ ರೂ. ಹಣ ಮುಂಗಡವಾಗಿ ಪಡೆದು ಬಾಕಿ 4 ಲಕ್ಷಕ್ಕೆ ಇನ್ಸ್​ಪೆಕ್ಟರ್ ದುಂಬಾಲು ಬಿದ್ದಿದ್ದರು. ಗುರುವಾರ 4 ಲಕ್ಷ ರೂ. ಲಂಚ ಸ್ವೀಕರಿಸುವಾಗ 1,02,100 ರೂ. ಹೆಚ್ಚುವರಿ ಹಣದ ಸಮೇತ ಮಂಜುನಾಥ್​ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.