ETV Bharat / state

ಕಾರ್ಯಕ್ರಮ ಆಯೋಜನೆ ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

author img

By

Published : Mar 17, 2023, 10:25 PM IST

Updated : Mar 17, 2023, 10:53 PM IST

ಬೆಂಗಳೂರಿನ ಎಂಸಿ ಲೇಔಟ್‌ನ ಬಿಜಿಎಸ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

fight-between-two-groups-in-bengaluru
ಕಾರ್ಯಕ್ರಮ ಆಯೋಜನೆ ವಿಚಾರಕ್ಕೆ ಗಲಾಟೆ : ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಬೆಂಗಳೂರು: ಇಲ್ಲಿನ ವಿಜಯನಗರದ ಎಂಸಿ ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಮೈದಾನದಲ್ಲಿ ಮಾರ್ಚ್​​ 19 ರಂದು ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಅನುಮತಿ ಪಡೆದು ಉಗಾದಿ ಉತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ.

ಈ ಸಂಬಂಧ ಎರಡೂ ಕಡೆಯವರ ನಡುವೆ ಗಲಾಟೆ ನಡೆದು ಹೊಡೆದಾಡಿಕೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಗಲಾಟೆ ವೇಳೆ ಕೆಲ ಪೊಲೀಸರಿಗೂ ಗಾಯಗಳಾಗಿದೆ. ಗಾಯಗೊಂಡವರನ್ನು ವಿಜಯನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ಕುರಿತಂತೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಧ್ಯಮದವರೊಂದಿಗೆ ಮಾತನಾಡಿ, ''ವಿಜಯನಗರದ ಎಂ.ಸಿ. ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಮಾರ್ಚ್​​ 19 ರಂದು ಸ್ತ್ರೀ ಶಕ್ತಿ ಮಹಿಳಾ ಸಮಾವೇಶಕ್ಕೆ ಉಮಾಶಂಕರ್ ಎಂಬುವರು ಬಿಬಿಎಂಪಿ ಕಡೆಯಿಂದ ಅನುಮತಿ ಪಡೆದಿದ್ದರು. ಈ ಸಮಾವೇಶದ ಸಂಬಂಧ ಒಂದು ಗುಂಪಿನ ಕಾರ್ಯಕರ್ತರು ಬ್ಯಾನರ್ ಕಟ್ಟುತ್ತಿದ್ದಾಗ ಮತ್ತೊಂದು ಗುಂಪಿನ ಕಾರ್ಯಕರ್ತರು ಬಂದು ಗಲಾಟೆ ಮಾಡಿದ್ದರು. ಆ ವೇಳೆ, ಸ್ಥಳದಲ್ಲಿ ಕೆಲ ಮಹಿಳೆಯರೂ ಸಹ ಇದ್ದರು'' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಬಂದ್: ಬಸನಗೌಡ ಪಾಟೀಲ್ ಯತ್ನಾಳ್

''ಇದೇ ವಿಚಾರವಾಗಿ ಎರಡೂ ಗುಂಪಿನವರ ನಡುವೆ ಮಾತಿನ ಚಕಮಕಿ ನಡೆದು, ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಮೈದಾನದಿಂದ ಹೊರಗೆ ಕಳುಹಿಸಿದ್ದರು. ಆದರೆ, ಮೈದಾನದಿಂದ ಹೊರ ಬಂದರೂ ಎರಡೂ ಗುಂಪಿನ ಕಾರ್ಯಕರ್ತರು ಪರಸ್ಪರ ಜಗಳ ಮುಂದುವರೆಸಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಎರಡೂ ಗುಂಪಿನ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಈ ಗಲಾಟೆಯಲ್ಲಿ ಪೊಲೀಸರಿಗೂ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾನೂನು ಪ್ರಕಾರ ತನಿಖೆ ನಡೆಸಲಾಗುತ್ತಿದೆ'' ಎಂದು ಡಿಸಿಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೆಆರ್​​​​ಪಿಪಿ ಪಕ್ಷವು ಯಾವುದೇ ರಾಷ್ಟ್ರೀಯ ಪಕ್ಷದ ಬಿ ಟೀಮ್​ ಅಲ್ಲ ಜನಾರ್ದನ ರೆಡ್ಡಿ

Last Updated : Mar 17, 2023, 10:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.