ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ FIR: ಬರೋಬ್ಬರಿ 2.84 ಕೋಟಿ ರೂ. ವಂಚನೆ ಆರೋಪ

author img

By

Published : Oct 12, 2021, 4:37 PM IST

FIR against Former Minister Katta Subramanya Naidu

2004 ರಲ್ಲಿ ಕಟ್ಟಾ ಸುಬ್ರಮಣ್ಯ ಎಂಎಲ್‌ಎ ಅಗಿದ್ದಾಗ ಹಣ ಪಡೆದುಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರು : ಸೈಟ್ ಮತ್ತು ಫ್ಲಾಟ್ ಕೊಡಿಸ್ತೀನಿ ಅಂತ ಮೋಸ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್​ಐಆರ್​ ದಾಖಲಾಗಿದೆ. 1-04-2008 ರಲ್ಲಿ 2ಕೋಟಿ 84 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಆರೋಪ ಕೇಳಿ ಬಂದಿದೆ.

ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ, ಮಾಜಿ ಶಾಸಕನ ವಿರುದ್ಧ 2 ಕೋಟಿ 84 ಲಕ್ಷ ರೂ ವಂಚನೆ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಇಂಡ್ ಸಿಂಗ್ ಡೆವಲಪರ್ಸ್ ಪ್ರೈ.ಲಿ ನ ನಿರ್ದೇಶಕ ಕೃಷ್ಣ ಎಂಬುವವರು ಈ ದೂರು ನೀಡಿದ್ದಾರೆ.

2004 ರಲ್ಲಿ ಕಟ್ಟಾ ಸುಬ್ರಮಣ್ಯ ಎಂಎಲ್‌ಎ ಅಗಿದ್ದಾಗ ಹಣ ಪಡೆದುಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಂತ ಹಂತವಾಗಿ ಒಟ್ಟು 2 ಕೋಟಿ 84 ಲಕ್ಷ ರೂಪಾಯಿಗಳನ್ನ ಇಂಡ್ ಸಿಂಡ್ ಕಂಪನಿಯಿಂದ ನಗದು ಮತ್ತು ಚೆಕ್ ಮೂಲಕ ಪಡೆದು ವಂಚನೆ ಮಾಡಲಾಗಿದೆ ಎನ್ನಲಾಗಿದೆ.

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಈ ಹಣಕ್ಕೆ ದುಪ್ಪಟ್ಟು ಹಣ ನೀಡೋದಾಗಿ ನಂಬಿಸಿ ವಂಚಿಸಿದ್ದಾರಂತೆ. ಇನ್ನು 4ನೇ ಎಸಿಎಂಎಂ ನ್ಯಾಯಲಯದ ಆದೇಶದಂತೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2018ರಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು 2 ಲಕ್ಷ ರೂ ಹಿಂದಿರುಗಿಸಿದ್ದರು. ಈ ವಿಚಾರ ವೆಂಕಯ್ಯ ನಾಯ್ಡು, ಬಿಎಸ್​ವೈ ಮತ್ತು ವಿಜಯೇಂದ್ರ ವರೆಗೂ ಹೋಗಿ ಸಂಧಾನದ ಮಾತುಕತೆ ಆಗಿತ್ತು. ಆದರೆ , ಟಾಪ್ ಲೆವಲ್‌ನ ಸಂಧಾನದಿಂದ ಯಾವುದೇ ಪ್ರಯೋಜನವಾಗಿಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.