ETV Bharat / state

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಳ್ಳತನ ಮಾಡಿದ ನಾಲ್ವರು ಆರೋಪಿಗಳು ಅರೆಸ್ಟ್​

author img

By

Published : Nov 22, 2020, 10:39 AM IST

Updated : Nov 22, 2020, 12:56 PM IST

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ
ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಕರ ಗಮನ ಬೇರಡೆ ಸೆಳೆದು ಆಭರಣ, ನಗದು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಖೆಡ್ಡಾಕ್ಕೆ ಬೀಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಕರ ಗಮನ ಬೇರಡೆ ಸೆಳೆದು, ಚಿನ್ನದ ಸರ ಮತ್ತು 50 ಸಾವಿರ ರೂಪಾಯಿ ಎಗರಿಸಿದ್ದ ನಾಲ್ವರು ಆರೋಪಿಗಳನ್ನು ಉಪ್ಪಾರ ಪೇಟೆ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಳ್ಳತನ
ಕಳ್ಳತನ ಮಾಡಿದ ಆಭರಣಗಳು

ಹಾಸನದಿಂದ ಬೆಂಗಳೂರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್​ನಲ್ಲಿದ್ದ ಚಿನ್ನಾಭರಣ ಎಗರಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನ.19 ರಂದು ಹಾಸನದಿಂದ ಬೆಂಗಳೂರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಬೇರೆಡೆ ಗಮನ ಬೇರೆಡೆ ಸೆಳೆದು 50 ಗ್ರಾಂ ತೂಕದ ಚಿನ್ನದ ಸರ, 50 ಸಾವಿರ ರೂಪಾಯಿ ನಗದನ್ನು ಆರೋಪಿಗಳು ಕದ್ದಿದ್ದಾರೆ. ಮೆಜೆಸ್ಟಿಕ್​ಗೆ ಬಸ್​ ಬಂದಾಗ ಬ್ಯಾಗ್ ನಾಪತ್ತೆಯಾಗಿರುವ ವಿಚಾರ ಬಯಲಾಗಿತ್ತು.

ಈ ಕುರಿತು ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ ಪೊಲೀಸರು ಅಫ್ರೋಜ್, ಲೋಹಿತ್, ರವಿ, ಅಕ್ಷಯ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ಉಪ್ಪಾರಪೇಟೆ, ಕಾಟನ್ ಪೇಟೆ, ಕೆಂಗೇರಿ ,ಬ್ಯಾಟರಾಯನಪುರ ಮತ್ತು ವಿಜಯನಗರ ಕಡೆಗಳಲ್ಲಿ ಕಳವು ಮಾಡಿರುವ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗ್ತಿದೆ.

Last Updated :Nov 22, 2020, 12:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.