ಹೈಕೋರ್ಟ್​ನ 10 ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

author img

By

Published : Sep 25, 2021, 2:24 PM IST

ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲರು

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ನೂತನ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ 10 ನ್ಯಾಯಮೂರ್ತಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ನೂತನ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ 10 ನ್ಯಾಯಮೂರ್ತಿಗಳಿಗೆ ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ನ್ಯಾ. ಮರಳೂರು ಇಂದ್ರಕುಮಾರ್ ಅರುಣ್, ನ್ಯಾ. ಇಂಗಲಗುಪ್ಪೆ ಸೀತರಾಮಯ್ಯ ಇಂದ್ರೇಶ್, ನ್ಯಾ. ರವಿ ವೆಂಕಟಪ್ಪ ಹೊಸಮನಿ, ನ್ಯಾ. ಸವಣೂರು ವಿಶ್ವಜಿತ್ ಶೆಟ್ಟಿ, ನ್ಯಾ.ಶಿವಶಂಕರ್ ಅಮರಣ್ಣವರ್, ನ್ಯಾ. ಮಕ್ಕಿಮನೆ ಗಣೇಶಯ್ಯ ಉಮಾ, ನ್ಯಾ. ವೇದವ್ಯಾಸಚಾರ್ ಶ್ರೀಶಾನಂದ, ನ್ಯಾ. ಹಂಚಾಟೆ ಸಂಜೀವ್ ಕುಮಾರ್, ನ್ಯಾ. ಪದ್ಮರಾಜ್ ನೇಮಚಂದ್ರ ದೇಸಾಯಿ, ನ್ಯಾ. ಪಂಜಿಗದ್ದೆ ಕೃಷ್ಣ ಭಟ್ ಅವರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಅಡ್ವೊಕೇಟ್ ಜನರಲ್, ಹಾಗೂ ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ವಕೀಲರು ಹಾಗೂ ನ್ಯಾಯಮೂರ್ತಿಗಳ ಕುಟುಂಬ ಸದಸ್ಯರು ಭಾಗವಹಿಸಿದ್ದರು. ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.