ETV Bharat / state

ಶ್ರೀಮಂತರಿಗೆ ಕೊರೊನಾ ತೆರಿಗೆ ಹಾಕಿ.... ಬಡವರಿಗೆ ಹೆಚ್ಚಿನ ನೆರವು ನೀಡಿ: ಸರ್ಕಾರಕ್ಕೆ ಹೆಚ್​ಡಿಕೆ ಸಲಹೆ

author img

By

Published : Apr 27, 2020, 2:41 PM IST

Updated : Apr 27, 2020, 11:28 PM IST

govt-need-to-find-a-way-to-save-money-h-dk
ಹೆಚ್.ಡಿ. ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರ್ಕಾರಗಳ ಆದ್ಯತೆ ಆಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು : ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ನೀಡಿರುವಾಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

  • ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ.

    — H D Kumaraswamy (@hd_kumaraswamy) April 27, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರ್ಕಾರಗಳ ಆದ್ಯತೆ ಆಗಲಿದೆ ಎಂದು ಹೇಳಿದ್ದಾರೆ.

ಲಾಕ್​ಡೌನ್​​​​ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು ಎಂದಿದ್ದಾರೆ.

  • ಲಾಕ್ ಡೌನ್ ತಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು.

    — H D Kumaraswamy (@hd_kumaraswamy) April 27, 2020 " class="align-text-top noRightClick twitterSection" data=" ">

ಈ ಹಠಾತ್ ಶಾಕ್​​ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಶಾಲೆ/ ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

  • ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ.

    — H D Kumaraswamy (@hd_kumaraswamy) April 27, 2020 " class="align-text-top noRightClick twitterSection" data=" ">

ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರ್ಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆಯನ್ನು ಸಂಗ್ರಹಿಸಲಿ ಎಂದು ಹೇಳಿದ್ದಾರೆ.

  • ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ.

    — H D Kumaraswamy (@hd_kumaraswamy) April 27, 2020 " class="align-text-top noRightClick twitterSection" data=" ">

ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರ್ಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ.

  • ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ.

    — H D Kumaraswamy (@hd_kumaraswamy) April 27, 2020 " class="align-text-top noRightClick twitterSection" data=" ">
Last Updated :Apr 27, 2020, 11:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.