ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ರಾಜ್ಯಾದ್ಯಂತ ವಿಧಿಸಲಾಗಿದ್ದ ನೈಟ್ ಕರ್ಫ್ಯೂವನ್ನು ಸರ್ಕಾರ ಹಿಂಪಡೆದಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಜುಲೈ ತಿಂಗಳಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹೇರಲಾಗಿತ್ತು. ಇದೀಗ ಕೊರೊನಾ ಪ್ರಕರಣ ಇಳಿಕೆಯಾಗುತ್ತಿದ್ದು ನೈಟ್ ಕರ್ಫ್ಯೂ ಹಿಂದಕ್ಕೆ ಪಡೆಯಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಹೇರಲಾಗಿತ್ತು.
![ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ](https://etvbharatimages.akamaized.net/etvbharat/prod-images/13552085_govrt.jpg)
ಕೊರೊನಾ ನಿಯಮ ಪಾಲನೆಯೊಂದಿಗೆ ಕುದುರೆ ಓಟದ ಪಂದ್ಯಗಳನ್ನು ನಡೆಸಲು ಸರ್ಕಾರ ಅನುಮತಿಸಿದೆ. ಪೂರ್ಣವಾಗಿ ಕೊರೊನಾ ಲಸಿಕೆ ಪಡೆದಂತಹ ವ್ಯಕ್ತಿಗಳಿಗೆ ಮಾತ್ರ ಇಂತಹ ಅವಕಾಶ ಕಲ್ಪಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.