ಬೆಂಗಳೂರು : ಮುಂಜಾನೆ ಸೈಕ್ಲೊಥಾನ್ನಲ್ಲಿ ಭಾಗಿಯಾಗಿದ್ದ ಮಹಿಳೆಯರಿಗೆ ಕಾಮುಕನೊಬ್ಬ ಕಾಟ ನೀಡಿರುವ ಘಟನೆ ನಗರದ ಪ್ಯಾಲೇಸ್ ರಸ್ತೆಯ ಕಾವೇರಿ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕಾಮುಕನೊಬ್ಬ ಸೈಕ್ಲೊಥಾನ್ನಲ್ಲಿ ಸಾಗುತ್ತಿದ್ದ ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಅನುಚಿತ ವರ್ತನೆ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ.
ಅದೂ ಸಹ ಒಬ್ಬಿಬ್ಬರೊಂದಿಗಲ್ಲದೇ ದಾರಿಯೂದ್ದಕ್ಕೂ ಮಹಿಳಾ ಸೈಕ್ಲಿಸ್ಟ್ಗಳೊಂದಿಗೆ ಆರೋಪಿ ಅನುಚಿತವಾಗಿ ವರ್ತಿಸಿದ್ದು ಆ ಪೈಕಿ ಇಬ್ಬರು ಮಹಿಳೆಯರು ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸದಾಶಿವನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಆರ್.ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಬಾಲಕನ ಅಪಹರಣ ಪ್ರಕರಣ: ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳ ಬಂಧನ