ETV Bharat / state

ರಾಜ್ಯ ಸರ್ಕಾರದಿಂದ ದರೋಡೆಕೋರರ ರಕ್ಷಣೆ: ಹೆಚ್.​ಡಿ.ಕುಮಾರಸ್ವಾಮಿ

author img

By ETV Bharat Karnataka Team

Published : Nov 24, 2023, 11:54 AM IST

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಕುರಿತ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ನಡೆಗೆ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

HD Kumaraswamy
ಹೆಚ್​ಡಿ ಕುಮಾರಸ್ವಾಮಿ

ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ದರೋಡೆಕೋರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್​ ಪಡೆದ ವಿಚಾರಕ್ಕೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಈ ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಬಹಳ ಇದೆ. ಚರ್ಚೆ ಮಾಡೋಣ, ಇದರ ಬಗ್ಗೆ ಆತುರ ಬೇಡ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತು ಬೇಡ ಎಂದರು.

ಮರ್ಯಾದೆ ಇರುವವರು ಹೆದರುತ್ತಾರೆ, ಮರ್ಯಾದೆ ಇಲ್ಲದವರಿಗೆ ಕೋರ್ಟ್​ನಲ್ಲಿದ್ದರೆ ಏನು, ಯಾವುದರಲ್ಲಿದ್ದರೆ ಏನು?. ಯಾವುದನ್ನು ಬೇಕಾದರೂ ಕೊಂಡುಕೊಳ್ಳುತ್ತೇವೆ ಎನ್ನುವ ದುರಂಹಕಾರದಲ್ಲಿರುವವರಿಗೆ ಏನು ಹೇಳುವುದು ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಆದೇಶ ವಾಪಸ್​ ಪಡೆದ ಸರ್ಕಾರ.

ಆದೇಶ ಹಿಂಪಡೆದ ಸರ್ಕಾರ: ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣವನ್ನು ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ಆದೇಶಿಸಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ಡಿಕೆಶಿ 2020ರಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ 2023ರ ಅಕ್ಟೋಬರ್​ನಲ್ಲಿ ವಜಾಗೊಳಿಸಿ, ದಾಖಲಾಗಿರುವ ಎಫ್​ಐಆರ್ ರದ್ದುಪಡಿಸಲು ನಿರಾಕರಿಸಿತ್ತು. ಬಳಿಕ ಸಿಬಿಐ ತನಿಖೆ ಮುಂದುವರೆಸಿ, ಬಹುತೇಕ ಮುಕ್ತಾಯದ ಹಂತಕ್ಕೆ ತಂದು ನಿಲ್ಲಿಸಿದೆ. ಇದೀಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್​ ಪಡೆದಿದೆ. ನವೆಂಬರ್​ 29ರಂದು ಹೈಕೋರ್ಟ್​ನಲ್ಲಿ ನಡೆಯಲಿರುವ ವಿಚಾರಣೆ ವೇಳೆ ಈ ಮಾಹಿತಿ ಸಲ್ಲಿಸುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.