ETV Bharat / state

'ಕಾಟಾಚಾರಕ್ಕೆ ಅಭ್ಯರ್ಥಿ ಆಗುವುದು ಬೇಡ..': ಹೆಚ್​ಡಿಕೆ ಖಡಕ್‌ ಕ್ಲಾಸ್‌

author img

By

Published : Dec 15, 2022, 4:04 PM IST

ಕಾಟಾಚಾರಕ್ಕೆ ಅಭ್ಯರ್ಥಿ ಆಗುವುದು ಬೇಡ. ಪಕ್ಷ ಗೆಲ್ಲುವ ಎಲ್ಲಾ ಅವಕಾಶಗಳಿವೆ. ಪ್ರತಿ ಅಭ್ಯರ್ಥಿಯೂ ಗೆಲ್ಲಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಭಾವ್ಯ ಅಭ್ಯರ್ಥಿಗಳಿಗೆ ಖಡಕ್ ಸೂಚನೆ ಕೊಟ್ಟರು.

hdk took class for party candidates
ಪಕ್ಷದ ಅಭ್ಯರ್ಥಿಗಳಿಗೆ ಕ್ಲಾಸ್​ ತೆಗುದುಕೊಂಡ ಹೆಚ್​ಡಿಕೆ

ಬೆಂಗಳೂರು: ಜೆಡಿಎಸ್​ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಶಾಸಕರು ಹಾಗೂ ಮುಂದಿನ ವಿಧಾನಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ​ಡಿ ಕುಮಾರಸ್ವಾಮಿ, ಕುಗ್ರಾಮದ ಕಾರ್ಯಕರ್ತನನ್ನೂ ಕೂಡ ನಿರ್ಲಕ್ಷ್ಯ ಮಾಡುವ ಹಾಗಿಲ್ಲ ಎಂದು ಎಚ್ಚರಿಸಿದರು. ಇದೇ ವೇಳೆ, ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಅವರು ಮಾಹಿತಿ ನೀಡಿದರು.

ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಹೆಚ್‌ಡಿಕೆ, ನಿಧಾನಗತಿಯ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡರು. ಗೆಲ್ಲುವ ವಿಶ್ವಾಸ ಇಲ್ಲದಿದ್ದರೆ ಕಷ್ಟ. ಮುಖಂಡರು, ಕಾರ್ಯಕರ್ತರನ್ನು ನಿರ್ಲಕ್ಷಿಸಬಾರದು ಎಂದು ತಾಕೀತು ಮಾಡಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣಾ ಸಿದ್ಧತೆಯ ಬಗ್ಗೆ ಮಾತನಾಡಿ, ರಾಷ್ಟೀಯ ಪಕ್ಷಗಳ ತಂತ್ರಗಾರಿಕೆಯನ್ನು ಎಳೆಎಳೆಯಾಗಿ ಅಭ್ಯರ್ಥಿಗಳ ಮುಂದೆ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಹಾಗೂ ಹಾಲಿ ಶಾಸಕರು ಇದ್ದರು.

ಇದನ್ನೂ ಓದಿ: ಬಿಜೆಪಿ ಸೇರಲು ಹಣದ ಆಮಿಷ.. ಬಾಂಬೆ ಡೈರಿಯ ಮೊದಲ ಅಧ್ಯಾಯ ಬಿಚ್ಚಿಟ್ಟ ಹೆಚ್ ​ವಿಶ್ವನಾಥ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.