ಬೆಂಗಳೂರು: ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಮತ್ತು ಮಲೆನಾಡು ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಸದ್ಯ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಕರಾವಳಿ ಹಾಗು ಒಳನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು,16 ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 18ರಿಂದ ಇಲ್ಲಿಯವರೆಗೆ ಮಳೆಹಾನಿಯಿಂದಾಗಿ ಒಟ್ಟು13 ಜನ ಮೃತಪಟ್ಟಿದ್ದು, 150 ಪ್ರಾಣಿಗಳು ಅಸುನೀಗಿವೆ. 206 ಮನೆಗಳು ಸಂಪೂರ್ಣವಾಗಿ ಕುಸಿದಿದ್ದು, 9,832 ಮನೆಗಳು ಭಾಗಶಃ ಹಾನಿಗೊಳಗಾಗಿವೆ. 28 ಪುನರ್ವಸತಿ ಕೇಂದ್ರಗಳನ್ನು ತೆರೆದು ರಕ್ಷಣೆ ನೀಡಲಾಗಿದೆ.
ಎಲ್ಲೆಲ್ಲಿ ಎಷ್ಟು ಹಾನಿ: ಬಾಗಲಕೋಟೆಯಲ್ಲಿ ಒಬ್ಬ ಮೃತಪಟ್ಟಿದ್ದು, 17 ಪ್ರಾಣಿಗಳು ಸಾವನ್ನಪ್ಪಿವೆ. 888 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, 7 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ.
ಬೆಳಗಾವಿಯಲ್ಲಿ ಇಬ್ಬರು ಮೃತಪಟ್ಟಿದ್ದು, 8 ಪ್ರಾಣಿಗಳು ಸಾವಿಗೀಡಾಗಿವೆ. 4 ಮನೆಗಳು ಸಂಪೂರ್ಣ ಕುಸಿದಿದ್ದು, 532 ಮನೆಗಳು ಭಾಗಶಃ ಹಾನಿಗೊಳಗಾಗಿವೆ. 3 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ.
ಧಾರವಾಡದಲ್ಲಿ ಒಬ್ಬ ಮೃತಪಟ್ಟಿದ್ದು, 16 ಪ್ರಾಣಿಗಳು ಸಾವನ್ನಪ್ಪಿವೆ,15 ಮನೆಗಳು ಸಂಪೂರ್ಣ ಕುಸಿದಿದ್ದು, 3,105 ಮನೆಗಳು ಭಾಗಶಃ ಹಾನಿಗೊಳಗಾಗಿವೆ. 5 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ.
ರಾಯಚೂರಿನಲ್ಲಿ ಒಬ್ಬರು ಮೃತಪಟ್ಟಿದ್ದು, ಇತರ ಯಾವುದೇ ಹಾನಿಯಾಗಿಲ್ಲ. ವಿಜಯಪುರದಲ್ಲಿ111 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, 3 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ.
ಹಾವೇರಿಯಲ್ಲಿ ಇಬ್ಬರು ಮೃತಪಟ್ಟಿದ್ದು, 2 ಪ್ರಾಣಿಗಳು ಮೃತಪಟ್ಟಿವೆ,160 ಮನೆಗಳು ಸಂಪೂರ್ಣ ಕುಸಿದಿದ್ದು, 1,347 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು,1 ಪುನರ್ವಸತಿ ಕೇಂದ್ರ ತೆರೆಯಲಾಗಿದೆ.
ಚಿತ್ರದುರ್ಗದಲ್ಲಿ ಓರ್ವ ಮೃತಪಟ್ಟಿದ್ದು,1 ಪ್ರಾಣಿ ಮೃತಪಟ್ಟಿವೆ, 2 ಮನೆಗಳು ಸಂಪೂರ್ಣ ಕುಸಿದಿದ್ದು, 759 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು,1 ಪುನರ್ವಸತಿ ಕೇಂದ್ರ ತೆರೆಯಲಾಗಿದೆ.
ಚಿಕ್ಕಮಗಳೂರಿನಲ್ಲಿ 4 ಪ್ರಾಣಿಗಳು ಮೃತಪಟ್ಟಿವೆ, 11 ಮನೆಗಳಿಗೆ ಸಂಪೂರ್ಣ ಕುಸಿದಿದ್ದು, 259 ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ಗದಗ್ನಲ್ಲಿ 55 ಪ್ರಾಣಿಗಳು ಮೃತಪಟ್ಟಿವೆ,1638 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, 9 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ.
ದಾವಣಗೆರೆಯಲ್ಲಿ ಓರ್ವ ಮೃತಪಟ್ಟಿದ್ದು,14 ಪ್ರಾಣಿಗಳು ಮೃತಪಟ್ಟಿವೆ, 3 ಮನೆಗಳು ಸಂಪೂರ್ಣ ಕುಸಿದಿವೆ, 681ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ಉತ್ತರ ಕನ್ನಡದಲ್ಲಿ 2 ಮನೆಗಳು ಸಂಪೂರ್ಣ ಕುಸಿದಿದ್ದು, 56 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಯಾದಗಿರಿಯಲ್ಲಿ 25 ಪ್ರಾಣಿಗಳು ಮೃತಪಟ್ಟಿವೆ.
ದಕ್ಷಿಣ ಕನ್ನಡದಲ್ಲಿ 9 ಮನೆಗಳು ಸಂಪೂರ್ಣ ಕುಸಿದಿದ್ದು, 33 ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ಶಿವಮೊಗ್ಗದಲ್ಲಿ ಎರಡು ಪ್ರಾಣಿಗಳು ಮೃತಪಟ್ಟಿದ್ದು, 231 ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ಕೊಡಗಿನಲ್ಲಿ ಯಾವುದೇ ಜೀವಹಾನಿಯಾಗಿರದೇ ಇದ್ದರೂ ಮುಂಜಾಗೃತಾ ಕ್ರಮವಾಗಿ ಎರಡು ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ಕೊಪ್ಪಳದಲ್ಲಿ 4 ಮೃತಪಟ್ಟಿದ್ದು, 6 ಪ್ರಾಣಿಗಳು ಸಾವನ್ನಪ್ಪಿವೆ,192 ಮನೆಗಳು ಭಾಗಶಃ ಹಾನಿಗೊಳಲಾಗಿವೆ.
ಎನ್.ಡಿ.ಆರ್.ಎಫ್ ತಂಡ ನಿಯೋಜನೆ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ 2, ಗದಗದಲ್ಲಿ 1, ಧಾರವಾಡದಲ್ಲಿ1, ಹಾವೇರಿಯಲ್ಲಿ1, ಬಾಗಲಕೋಟೆಯಲ್ಲಿ1ಎನ್.ಡಿ.ಆರ್.ಎಫ್ ತಂಡಗಳನ್ನು ತುರ್ತು ಪರಿಹಾರ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.