ETV Bharat / state

ಹೈಕೋರ್ಟ್​ನಲ್ಲೂ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅರ್ಜಿ ವಜಾ: ಧಾರವಾಡ ಪ್ರವೇಶಕ್ಕಿಲ್ಲ ಅನುಮತಿ

author img

By

Published : Apr 21, 2023, 2:36 PM IST

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ಮುಖಂಡ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

High court dismissed Vinay Kulkarni's application seeking permission to enter Dharwad
ಹೈಕೋರ್ಟ್​ನಲ್ಲೂ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅರ್ಜಿ ವಜಾ

ಬೆಂಗಳೂರು: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು 30 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿಗಳನ್ನು ವಜಾಗೊಳಿಸಿ, ಅದಕ್ಕೆ ಕಾರಣಗಳನ್ನು ಆದೇಶ ಪ್ರತಿಯಲ್ಲಿ ವಿವರಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಇದೀಗ ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಕೋರಿದರು.

ಇದನ್ನೂ ಓದಿ: ಕ್ಷೇತ್ರ ಉಳಿಸಿಕೊಂಡ ವಿನಯ್​: ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕುಲಕರ್ಣಿ ಫೈನಲ್

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್‌ಗೆ ಅರ್ಜಿದಾರರಿಗೆ ಧಾರವಾಡ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಅಂಶ ಗೊತ್ತಿಲ್ಲವೇ?. ಹೇಗೆ ಟಿಕೆಟ್ ನೀಡಿದರು ಎಂದು ಪ್ರಶ್ನಿಸಿತು. ಅಲ್ಲದೇ, ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ವಿಚಾರಣಾ ನ್ಯಾಯಾಲಯ ಆದೇಶಿಸಿದೆ. ಹೀಗಿರುವಾಗ ನೀವು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದು. ಇಲ್ಲಿ ಏಕೆ ಪ್ರಶ್ನೆ ಮಾಡಿದ್ದೀರಿ ಎಂದು ನ್ಯಾಯಪೀಠ ಪ್ರಶ್ನಿಸಿತು.

ಪ್ರಕರಣದ ಹಿನ್ನೆಲೆ ಏನು ?: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿನಯ್ ಕುಲಕರ್ಣಿ ಸೇರಿ ಎಂಟು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಮೊದಲ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯದ ಅನುಮತಿ ಪಡಯದೇ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ ನಾಲ್ಕು ಷರತ್ತುಗಳನ್ನು ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡುವಾಗ ಸುಪ್ರೀಂ ಕೋರ್ಟ್ ವಿಧಿಸಿತ್ತು.

ಇದನ್ನೂ ಓದಿ: ಧಾರವಾಡ ಪ್ರವೇಶಿಸದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ಆದೇಶ

ಇದೀಗ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಯಾಗಿರುವುದರಿಂದ ಧಾರವಾಡ ಪ್ರವೇಶಿಸಲು ನ್ಯಾಯಾಲಯದ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಹೈಕೋರ್ಟ್​ನಲ್ಲಿ ಸಲ್ಲಿಸಿದ್ದರು. ಈ ಮೊದಲು ಧಾರವಾಡದಲ್ಲಿರಲು 50 ದಿನಗಳ ಕಾಲ ಅನುಮತಿ ನೀಡುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ, ಹೈಕೋರ್ಟ್ ಮೊರೆ ಹೋಗಿದ್ದರು. ಗುರುವಾರ ವಿನಯ್ ಕುಲಕರ್ಣಿ ಪರವಾಗಿ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು.

ಇದನ್ನೂ ಓದಿ: ಮಾಜಿ ಸಚಿವ ವಿನಯ‌ ಕುಲಕರ್ಣಿ ಪರ ಪತ್ನಿ ಶಿವಲೀಲಾ ನಾಮಪತ್ರ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.