ETV Bharat / state

ಜೆಡಿಎಸ್ ಅಧಿಕಾರಕ್ಕೆ ಬಂದರೆ ಚಾಚೂ ತಪ್ಪದೆ ಪಂಚರತ್ನ ಯೋಜನೆ ಜಾರಿ : ಹೆಚ್.ಡಿ. ಕುಮಾರಸ್ವಾಮಿ

author img

By

Published : May 8, 2023, 4:28 PM IST

ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್​. ಡಿ ಕುಮಾರಸ್ವಾಮಿ ತಮ್ಮ ಅಭ್ಯರ್ಥಿ ಪರ ರೋಡ್ ಶೋ ನಡೆಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ನಗರದ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಪ್ರಚಾರ ನಡೆಸಿದರು. ಪ್ರಚಾರದ ಕೊನೆ ದಿನವಾದ ಇಂದು ಎನ್​.ಆರ್ ಕಾಲೋನಿ, ತ್ಯಾಗರಾಜನಗರ, ಬಸವನಗುಡಿ ಮತ್ತಿತರ ಕಡೆ ರೋಡ್ ಶೋ ನಡೆಸಿದ ಕುಮಾರಸ್ವಾಮಿ ಅವರು ತಮ್ಮ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

ಇದನ್ನೂ ಓದಿ : ಜೆಡಿಎಸ್​​ನದ್ದು ಕುಟುಂಬಸ್ಥರ ನವರತ್ನ ಕಾರ್ಯಕ್ರಮ.. ಸಿದ್ದರಾಮಯ್ಯ ಮಜಾರಾಮಯ್ಯ: ಸಂಸದ ಶ್ರೀನಿವಾಸ್ ಪ್ರಸಾದ್

ಈ ವೇಳೆ ಮಾತನಾಡಿದ ಹೆಚ್​ಡಿಕೆ, ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಚಿಂತನೆ ಇಲ್ಲ. ನಮ್ಮ ಪಕ್ಷದಿಂದ ಪಂಚರತ್ನ ಐದು ಯೋಜನೆಗಳನ್ನು ಜಾರಿಗೆ ತಂದು ಪ್ರತಿ ಕುಟುಂಬದ ಬದುಕಿಗೆ ಒಳ್ಳೆಯ ಕಾರ್ಯಕ್ರಮ ಕೊಡುತ್ತೇನೆ. ಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ನಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಪರಿಶೀಲಿಸಿ ಎಲ್ಲಾ ಸದಸ್ಯರಿಗೆ ಅನುಕೂಲವಾಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ರು.

ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದು ಆಕಸ್ಮಿಕವಾಗಿ. ರಾಜ್ಯದ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾದವನಲ್ಲ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಬಹುಮತ ಸಿಕ್ಕರೆ ಎಲ್ಲ ವರ್ಗದ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕುಮಾರಸ್ವಾಮಿ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬೆಂಗಳೂರಿಗೆ ಆನೇಕ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರಿನ ಜನರು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ವಿಷಯ ಎಂದರೇ ಕಾವೇರಿ ನೀರನ್ನು ಬೆಂಗಳೂರಿಗೆ ತರುವಲ್ಲಿ ದೇವೇಗೌಡರ ಪಾತ್ರ ದೊಡ್ಡದಿದೆ. ಇದನ್ನೂ ಎಂದಿಗೂ ಮರೆಯಬಾರದು. ಸಿರ್ಸಿ ಫ್ಲೈಓವರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮಾಡಿದ್ದಾರೆ ಎಂದರು.

ಇದನ್ನೂ ಓದಿ : ಕಾಂಗ್ರೆಸ್​ ಗ್ಯಾರಂಟಿ ಆರು ತಿಂಗಳಲ್ಲಿ ಜಾರಿಯಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಯು ಟಿ ಖಾದರ್

ನಾನು 2006 ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಬೆಂಗಳೂರಿನ 19 ಕಿ.ಮೀ. ಮೆಟ್ರೋ ರೈಲು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದೆ. ಇದೇ ರೀತಿ ಹಲವು ಕಾರ್ಯಕ್ರಮಗಳನ್ನು ಬೆಂಗಳೂರಿಗೆ ನೀಡಿದ್ದೇನೆ. ಇಂದು ಹಲವಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೀರಾ. ನಮ್ಮ ಸರ್ಕಾರ ರಚನೆ ಆದರೇ ನಮ್ಮ ಪ್ರಣಾಳಿಕೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಸತಿ ಕಲ್ಪಿಸುವ ಯೋಜನೆ ಹಾಕಿಕೊಂಡಿದ್ದೇನೆ. ನಮಗೆ ಈ ಬಾರಿ ಆಶೀರ್ವಾದ ಮಾಡಿ ಎಂದು ಹೆಚ್​ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಇನ್ನು ಪ್ರಚಾರದ ಈ ಸಂದರ್ಭದಲ್ಲಿ ಬಸವನಗುಡಿ ಕ್ಷೇತ್ರದ ಅಭ್ಯರ್ಥಿ ಅರಮನೆ ಶಂಕರ್, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಜೆಡಿಎಸ್ ಮುಖಂಡ ಬಾಗೇಗೌಡ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.

ಇದನ್ನೂ ಓದಿ : 28 ಕ್ಷೇತ್ರಗಳ 92 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಬಾಕಿ: ಅಫಿಡವಿಟ್​ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.