ETV Bharat / state

ಸಂಚಾರಿ ನಿಯಮ ಪಾಲಿಸದ ಚಾಲಕರಿಂದ ಅಪಘಾತ ಹೆಚ್ಚಳ: ಹೈಕೋರ್ಟ್ ಕಳವಳ

author img

By ETV Bharat Karnataka Team

Published : Nov 16, 2023, 10:30 PM IST

ಅತಿ ವೇಗದ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಅಪರಾಧಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್​ ಎತ್ತಿಹಿಡಿದಿದೆ.

High court
ಹೈಕೋರ್ಟ್​

ಬೆಂಗಳೂರು:ಚಾಲಕರ ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಹಾಗೂ ಅಧಿಕೃತ ಚಾಲನಾ ದಾಖಲೆಗಳಿಲ್ಲದೇ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತ ಪಡಿಸಿರುವ ಹೈಕೋರ್ಟ್​, ಅತಿ ವೇಗದ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಅಪರಾಧಿಯೊಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಎತ್ತಿ ಹಿಡಿದಿದೆ.

ಉದ್ದೇಶಪೂರ್ವಕವಲ್ಲದ ಕೊಲೆ ಆರೋಪದಲ್ಲಿ ಆರು ತಿಂಗಳ ಕಾಲ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹನುಮಂತರಾಯಪ್ಪ ಎಂಬುವರು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವೆಂಕಟೇಶ್​ ನಾಯ್ಕ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೇ, ಪಂಜಾಬ್ ರಾಜ್ಯ ಸರ್ಕಾರದ ವಿರುದ್ಧದ ಸೌರಭ್ ಬಕ್ಷಿ ಪ್ರಕರಣ ಹಾಗೂ ಗುರು ಬಸವರಾಜ ಬೆಣ್ಣೆ ಸಟ್ಟಪ್ಪ ವಿರುದ್ಧದ ಕರ್ನಾಟಕ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಸಾಕ್ಷ್ಯಾಧಾರಗಳು ಹಾಗೂ ವಿಚಾರಣಾ ನ್ಯಾಯಾಲಯದ ಆದೇಶಗಳ್ನು ಪರಿಶೀಲಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಶಿಕ್ಷೆ ವಿಧಿಸಿರುವುದು ಸರಿಯಾಗಿದೆ. ಈ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.

ಪ್ರಕರಣದ ಹಿನ್ನೆಲೆ ಏನು ?: 2012ರ ಜುಲೈ 23 ರಂದು ಮಧ್ಯಾಹ್ನ 3.45ರ ಸುಮಾರಿಗೆ ಅರ್ಜಿದಾರ(ಅಪರಾಧ) ಹನುಮಂತರಾಯಪ್ಪ ಕೊರಟಗೆರೆಯ ಉರಿಡಿಗೆರೆ ರಸ್ತೆಯ ಇರಕಸಂದ್ರ ಕಾಲೋನಿ ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಮೋಟಾರ್‌ ಸೈಕಲ್ ಚಲಾಯಿಸುತ್ತಿದ್ದರು. ಈ ವೇಳೆ ಪಾದಚಾರಿ ಪರಮೇಶಯ್ಯಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಪೊಲೀಸರು ಹನುಮಂತರಾಯಪ್ಪ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ಆರು ತಿಂಗಳು ಸಾಧಾರಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಹನುಮಂತಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಘಟನೆ ಸಂಬಂಧ ಅರ್ಜಿದಾರರಿಗೆ ಯಾವುದೇ ಉದ್ದೇಶವಿರಲಿಲ್ಲ. ಅಲ್ಲದೆ, ಅರ್ಜಿದಾರರ ದುಡಿಮೆಯೇ ಮನೆಗೆ ಆಧಾರವಾಗಿದೆ. ಆದ ಕಾರಣ ಅರ್ಜಿದಾರರ ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ :ವಕೀಲ ಅಮಿತ್​ ಕೇಶವಮೂರ್ತಿ ಕೊಲೆ ಪ್ರಕರಣ; ದೋಷಿ ರಾಜೇಶ್​ ಗೌಡಗೆ ಜೀವಾವಧಿ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.