ETV Bharat / state

ಬೆಂಗಳೂರು: ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ‌ ಬಿಎಂಟಿಸಿ ಬಸ್ ಹತ್ತಿದ್ದ ಐಪಿಎಸ್ ಅಧಿಕಾರಿಗಳು

author img

By ETV Bharat Karnataka Team

Published : Nov 10, 2023, 8:41 PM IST

ವಿಶ್ವ ಸಾರಿಗೆ ದಿನಾಚರಣೆ ಹಿನ್ನೆಲೆ ಇಂದು ಹಿರಿಯ ಪೊಲೀಸ್ ಆಧಿಕಾರಿಗಳು ಬಿಎಂಟಿಸಿ ಹಾಗೂ ಮೆಟ್ರೋಗಳಲ್ಲಿ ಸಂಚಾರಿಸಿ ಸಾರ್ವ ಜನಿಕರಿಗೆ ಅರಿವು ಮೂಡಿಸಿದರು.

ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದ ಐಪಿಎಸ್​ ಅಧಿಕಾರಿಗಳು
ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದ ಐಪಿಎಸ್​ ಅಧಿಕಾರಿಗಳು

ಬೆಂಗಳೂರು: ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸಲು ಹಾಗೂ ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಆಚರಿಸಲಾಗುವ ವಿಶ್ವ ಸಾರಿಗೆ ದಿನಾಚರಣೆ ಹಿನ್ನೆಲೆ ನಗರ ಹಿರಿಯ ಪೊಲೀಸ್ ಆಧಿಕಾರಿಗಳು ಬಿಎಂಟಿಸಿ ಹಾಗೂ ಮೆಟ್ರೋಗಳಲ್ಲಿ ಸಂಚರಿಸಿ ಅರಿವು ಮೂಡಿಸಿದರು. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮೆಟ್ರೊ ಹಾಗೂ ಬಸ್​ಗಳಲ್ಲಿ ಸಂಚರಿಸುವ ಮೂಲಕ ಕಿರಿಯ ಅಧಿಕಾರಿಗಳಿಗೆ ಮಾದರಿಯಾದರು‌‌.‌

ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಐಪಿಎಸ್ ಅಧಿಕಾರಿಗಳು
ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಐಪಿಎಸ್ ಅಧಿಕಾರಿಗಳು

ನಗರದ ಎಲ್ಲ ವಿಭಾಗದ ಡಿಸಿಪಿಗಳು ಹಾಗೂ ಟ್ರಾಫಿಕ್ ಜಂಟಿ ಆಯುಕ್ತರು ಸೇರಿ ಕಮೀಷನರೇಟ್ ವ್ಯಾಪ್ತಿಗೆ ಬರುವ ಐಪಿಎಸ್ ಅಧಿಕಾರಿಗಳು ಸಾರ್ವಜನಿಕ ಸಾರಿಗೆ ಬಳಸಿದರು. ನಗರದಿಂದ ಎಲೆಕ್ಟ್ರಾನಿಕ್ ಸಿಟಿವರೆಗೂ ಬಸ್​ನಲ್ಲಿ ಆಯುಕ್ತರು ತೆರಳಿದರು. ಇದೇ ವೇಳೆ, ಬಿಎಂಟಿಸಿ ಬಸ್ ಸಂಚಾರ ಬಳಿಕ ಸಂಚಾರ ವ್ಯವಸ್ಥೆ‌ ಪರಿಶೀಲಿಸಿದರು. ಸಿಗ್ನಲ್​ಗಳಲ್ಲಿನ ಪೊಲೀಸ್ ಚೌಕಿಯಲ್ಲಿ ಕುಳಿತು ಪೊಲೀಸರ ಕಾರ್ಯವೈಖರಿ ಗಮನಿಸಿದರು.

ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಐಪಿಎಸ್ ಅಧಿಕಾರಿಗಳು
ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಐಪಿಎಸ್ ಅಧಿಕಾರಿಗಳು

ಸಂಚಾರ ದಟ್ಟಣೆ ಹೇಗೆ ನಿಭಾಯಿಸ್ತಾರೆ ಅನ್ನೋದ್ರ ಬಗ್ಗೆ ಪರಿಶೀಲನೆ ವೇಳೆ‌ ಸಂಚಾರ ಸಿಬ್ಬಂದಿ ನಿರ್ಲಕ್ಷ್ಯ ಕಂಡು ಬಂದ ಹಿನ್ನೆಲೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ವಾರ್ನ್ ಮಾಡಿದರು. ನಗರ‌ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್, ಡಿಸಿಪಿಗಳಾದ ದೇವರಾಜ್, ರಾಹುಲ್‌ ಕುಮಾರ್ ಶಹಾಪುರ್, ಸಿ.ಕೆ.ಬಾಬಾ, ಕುಲದೀಪ್ ಕುಮಾರ್ ಜೈನ್ ಸೇರಿದಂತೆ‌ ಇನ್ನಿತರ ಐಪಿಎಸ್ ಅಧಿಕಾರಿಗಳು ಸಾರ್ವಜನಿಕ ಸಾರಿಗೆ ಬಳಸಿದರು.

ಇದನ್ನೂ ಓದಿ: ಪುತ್ತೂರಿನಲ್ಲಿ ಮತ್ತೆ ಝಳಪಿಸಿದ ತಲವಾರು: ಪುತ್ತಿಲ ಪರಿವಾರದವನ ಮೇಲೆ ಹಲ್ಲೆಗೆ ಯತ್ನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.