ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸುವಂತೆ ಸಿಎಂಗೆ ಶಾಸಕ ಜಮೀರ್ ಪತ್ರ

author img

By

Published : Jan 24, 2023, 8:09 AM IST

Updated : Jan 24, 2023, 11:26 AM IST

Former Minister Zameer Ahmed Khan

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸುವಂತೆ ಕಾಂಗ್ರೆಸ್‌ ಶಾಸಕ ಜಮೀರ್​ ಅಹ್ಮದ್ ಖಾನ್‌ ಅವರು ಸಿಎಂಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ಬೆಂಗಳೂರು : ಗಣರಾಜ್ಯೋತ್ಸವವನ್ನು ಬೆಂಗಳೂರಿನ ಮೈಸೂರು ವೃತ್ತದ ಸಮೀಪವಿರುವ ಈದ್ಗಾ ಮೈದಾನದಲ್ಲಿ ಆಚರಿಸುವಂತೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಿಗೆ ಪತ್ರ ಬರೆದಿರುವ ಅವರು, ಗಣರಾಜ್ಯೋತ್ಸವವನ್ನು ಈ ವರ್ಷ ಇದೇ ಮೈದಾನದಲ್ಲಿ ಅದ್ಧೂರಿಯಾಗಿ ಆಚರಿಸಬೇಕು. ಕೂಡಲೇ ಸರ್ಕಾರ ಇದಕ್ಕೆ ನಿರ್ದೇಶನ ನೀಡಿ ಸರ್ಕಾರದ ವತಿಯಿಂದಲೇ ಕಾರ್ಯಕ್ರಮ ನಡೆಸಬೇಕು ಎಂದು ಕೋರಿದ್ದಾರೆ.

ಮಾಲೀಕತ್ವದ ವಿವಾದ: ಈದ್ಗಾ ಮೈದಾನ ವಿವಾದ ಕೋರ್ಟ್‌ನಲ್ಲಿದೆ. ಮಾಲೀಕತ್ವದ ವಿಚಾರಣೆ ನಡೆಯುತ್ತಿದ್ದು, ಸ್ಥಳ ಸರ್ಕಾರದ್ದು ಎಂದು ಕೋರ್ಟ್‌ ಹೇಳಿದೆ. ಇದರ ಆಧಾರದಲ್ಲಿ ಕಳೆದ ವರ್ಷ ಹಿಂದೂಪರ ಸಂಘಟನೆಗಳು ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದವು. ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಕಾರ್ಯಕ್ರಮ ತಡೆದು ಶಾಂತಿ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.

ಗಣರಾಜ್ಯೋತ್ಸವ ಧ್ವಜಾರೋಹಣ: ವಿವಾದಿತ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲು ಸರ್ಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಕಳೆದ ಬಾರಿ ಧ್ವಜಾರೋಹಣ ಮಾಡಿದ್ದ ಬೆಂಗಳೂರು ಉತ್ತರ ಎ.ಸಿ.ಶಿವಣ್ಣ ಅವರೇ ಈ ಬಾರಿಯೂ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಂಸದ ಪಿ.ಸಿ.ಮೋಹನ್ ಮಾಹಿತಿ ನೀಡಿದ ನಂತರ ಜಮೀರ್ ಕೂಡಾ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Jameer Khan has written a letter to CM to celebrate Republic Day at Idga Maidan
ಶಾಸಕ ಜಮೀರ್‌ ಮನವಿ

ಕೋರ್ಟ್‌ ವಿಚಾರಣೆ: ಬಿಬಿಎಂಪಿಯು ಈದ್ಗಾ ಮೈದಾನ ಕಂದಾಯ ಇಲಾಖೆಯ ಆಸ್ತಿ ಎಂದು ಘೋಷಣೆ ಮಾಡಿದ ತರುವಾಯ ಉಂಟಾದ ವಿವಾದಗಳ ನಡುವೆಯೇ ರಾಜ್ಯ ಸರ್ಕಾರದ ಪರ ವಿವಾದಿತ ಸ್ಥಳದಲ್ಲಿ ಉಪ ವಿಭಾಗಾಧಿಕಾರಿಗಳು ಕಳೆದ ಆಗಸ್ಟ್ 15 ರಂದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆ ವೇಳೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದರು. ​ಈ ಎಲ್ಲಾ ಬೆಳವಣಿಗೆಗಳಾದ ನಂತರ ಹಿಂದೂ ಜಾಗರಣ ವೇದಿಕೆಗಳು ಗಣಪತಿ ಹಬ್ಬದ ಆಚರಣೆಗೆ ಅವಕಾಶ ಮಾಡಿಕೊಡುವಂತೆ ಕೇಳಿದ್ದವು. ಈ ವಿಚಾರವಾಗಿ ಕೋರ್ಟ್‌ಗೂ ಹೋಗಿದ್ದರು. ಆದರೆ ಆಚರಣೆಗೆ ಅವಕಾಶ ನೀಡದೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್‌ ಆದೇಶಿಸಿತ್ತು.

ಈ ಆದೇಶ ಪ್ರಶ್ನಿಸಿ ಸುಪ್ರಿಂ ಕೋರ್ಟ್​ಗೆ ಮನವಿ ಸಲ್ಲಿಸಲಾಗಿತ್ತು. ಸುಪ್ರಿಂ ಕೂಡ ಯಾಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿತ್ತು. ಅದರಂತೆ ಗಣೇಶ ಹಬ್ಬಕ್ಕೆ ಅವಕಾಶ ದೊರೆತಿರಲಿಲ್ಲ. ಈಗ ರಾಷ್ಟ್ರೀಯ ಹಬ್ಬದ ಆಚರಣೆಗಾಗಿ ಸಚಿವ ಜಮೀರ್​ ಅಹ್ಮದ್ ಖಾನ್ ಸರ್ಕಾರಕ್ಕೆ​ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ :ಮತ್ತೊಮ್ಮೆ ಭುಗಿಲೆದ್ದ ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ: ಗಣರಾಜ್ಯೋತ್ಸವಕ್ಕೆ ಹಿಂದೂ ಜನ ಜಾಗೃತಿ ಸಮಿತಿ ಪಟ್ಟು

Last Updated :Jan 24, 2023, 11:26 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.