ETV Bharat / state

'ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ' ಏಪ್ರಿಲ್ ತಿಂಗಳ ಕಾರ್ಯಕ್ರಮ ಮುಂದೂಡಿಕೆ

author img

By

Published : Apr 15, 2021, 9:24 PM IST

R. Ashok, Minister of Revenue
ಕಂದಾಯ ಸಚಿವ ಆರ್.ಅಶೋಕ್

ಏಪ್ರಿಲ್​ ತಿಂಗಳಲ್ಲಿ ಕೊರೊನಾದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮೂಂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್ 2ನೇ ಅಲೆ ಹಿನ್ನೆಲೆ ಕಂದಾಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ "ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ" ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಮೂಂದೂಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕಂದಾಯ ಇಲಾಖೆ ವತಿಯಿಂದ ಪ್ರತಿ ತಿಂಗಳ ಮೂರನೇ ಶನಿವಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ/ತಹಶೀಲ್ದಾರರು ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ ತಂಡ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮದಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು. ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ 2ನೇ ಅಲೆಯು ಹೆಚ್ಚಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಒಂದೆಡೆ ಗುಂಪು-ಗುಂಪಾಗಿ ಸೇರಿದಲ್ಲಿ ಈ ಸಾಂಕ್ರಾಮಿಕ ರೋಗವು ಇನ್ನೂ ಹೆಚ್ಚಾಗಿ ಹರಡುವ ಸಾಧ್ಯತೆ ಇದೆ.

ಹೀಗಾಗಿ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಮತ್ತು ಸಾಂಕ್ರಾಮಿಕ ರೋಗ ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ತಿಂಗಳ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.