ETV Bharat / state

'ನ್ಯಾಯ ಬೇಕು ಮೋದಿ' ಪೋಸ್ಟರ್ ಅಭಿಯಾನದಲ್ಲಿ ಪ್ರಧಾನಿಗೆ 12 ಪ್ರಶ್ನೆ ಕೇಳಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ..

author img

By

Published : Jan 19, 2023, 5:07 PM IST

Updated : Jan 19, 2023, 5:21 PM IST

ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ 12 ಪ್ರಶ್ನೆ-ನ್ಯಾಯ ಬೇಕು ಮೋದಿ ಎಂಬ ಪೊಸ್ಟರ್​​​ನೊಂದಿಗೆ ಸರಣಿ ಟ್ವೀಟ್​ - ರಾಜ್ಯಲಲ್ಲಿ ನಡೆದ ಪಿಎಸ್ಐ ನೇಮಕಾತಿ ಹಗರಣ, ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣಗಳ ಪ್ರಸ್ತಾಪ - ಶರಾವತಿ ಸಂತ್ರಸ್ಥ ಕುಟುಂಬಗಳ ಸಮಸ್ಯೆ,ಕೊರೊನಾ ಕಾಲದಲ್ಲಿ 3000 ಕೋಟಿ ಅವ್ಯವಹಾರ ಮತ್ತಿತರ ಪ್ರಶ್ನೆಗಳನ್ನು ಮುಂದಿಟ್ಟ ಮಾಜಿ ಸಿಎಂ

Opposition leader Siddaramaiah
Opposition leader Siddaramaiah

ಬೆಂಗಳೂರು:ನ್ಯಾಯ ಬೇಕು ಮೋದಿ ಎಂಬ ಪೊಸ್ಟರ್​​ನೊಂದಿಗೆ 12 ಪ್ರಶ್ನೆಗಳನ್ನು ಮುಂದಿಟ್ಟು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ. ಕಲಬುರಗಿ ಹಾಗೂ ಯಾದಗಿರಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.ನ್ಯಾಯ ಬೇಕು ಮೋದಿ ಎಂಬ ಪೊಸ್ಟರ್ ನೊಂದಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದ್ದಾರೆ.


ನೇಮಕಾತಿ ಹಗರಣ ಅರ್ಹರಿಗೆ ನ್ಯಾಯ ಕೊಡಿ:PSI ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ PWD ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾಗಿರುವ ಎಲ್ಲ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.

ಲಂಚ ಕೊಟ್ಟು ವರ್ಗಾವಣೆ:ಕೆ.ಆರ್ ಪುರಂನ ಇನ್ಸ್​​​​ಪೆಕ್ಟರ್​​ ನಂದೀಶ್ 80 ಲಕ್ಷ ರೂ.ಲಂಚ ಕೊಟ್ಟು ವರ್ಗಾವಣೆ ಪಡೆದು ಬಂದ ಕಾರಣಕ್ಕೆ ಒತ್ತಡದಿಂದ ಸತ್ತಿದ್ದಾರೆ ಎಂದು ಸ್ವತಃ ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇತರರಿಗೆ ರಕ್ಷಣೆ ನೀಡುವ ಪೊಲೀಸರಿಗೇ ಹೀಗಾದರೆ, ಸಾಮಾನ್ಯರ ಗತಿ ಏನು ಮೋದಿ ಅವರೇ? ಎಂದು ಪ್ರಶ್ನಿಸಿದ್ದಾರೆ.

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ:ಕೋವಿಡ್ ಸಂದರ್ಭದಲ್ಲಿ ಅಗತ್ಯ ಸಲಕರಣೆ ಪೂರೈಕೆ ಮಾಡಿದ್ದ ಗುತ್ತಿಗೆದಾರ ಬಸವರಾಜ ಅಮರಗೋಳ ಅವರಿಗೆ ರಾಜ್ಯ ಸರ್ಕಾರ ಬಿಲ್‌ ಹಣ ನೀಡದಿರುವುದರಿಂದ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈತನಿಗೆ ನ್ಯಾಯ ಕೊಡಿಸಿ, ಪ್ರಾಣ ಉಳಿಸಬೇಕಾದವರು ನೀವಲ್ಲವೇ ಮೋದಿ ಅವರೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಲೂಟಿ:ಪರೇಶ್ ಮೇಸ್ತಾನ ಸಾವನ್ನೂ ತನ್ನ ಭರ್ಜರಿ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದ ಬಿಜೆಪಿ. ಈಗ ಆತನ ವಯೋವೃದ್ಧ ತಂದೆ-ತಾಯಿ ಕುಟುಂಬಕ್ಕೆ ನ್ಯಾಯ ಬೇಕು. ಕೊರೊನಾ ಕಾಲದಲ್ಲಿ ಸ್ಯಾನಿಟೈಜರ್, ಮಾಸ್ಕ್ ನಿಂದ ಹಿಡಿದು ವೆಂಟಿಲೇಟರ್ ವರೆಗೆ ಎಲ್ಲದರಲ್ಲೂ ರಾಜ್ಯ ಸರ್ಕಾರ ಲೂಟಿ ಮಾಡಿದ್ದರಿಂದ ಕನಿಷ್ಠ 3000 ಕೋಟಿ ಅವ್ಯವಹಾರ ನಡೆದಿದೆ. ಕೊರೊನಾದಿಂದ ಹಾದಿಯಲ್ಲಿ ಬೀದಿಯಲ್ಲಿ ಸತ್ತವರ ಆತ್ಮಗಳು ನ್ಯಾಯಕ್ಕಾಗಿ ನಿಮ್ಮ ಹಾದಿಯನ್ನೇ ಕಾಯುತ್ತಿವೆ ಮೋದಿ ಅವರೇ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.


ಶರಾವತಿ ಸಂತ್ರಸ್ಥ ಕುಟುಂಬಗಳ ಸಮಸ್ಯೆ:ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಹೊಣೆಗೇಡಿತನದಿಂದ ನಾಡಿಗೆ ಬೆಳಕು ಕೊಟ್ಟ ಲಕ್ಷಾಂತರ ಮಂದಿಯ ಬಾಳು ಕತ್ತಲಾಗಿದೆ.ಶರಾವತಿ ಸಂತ್ರಸ್ಥ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ?. ಕನ್ನಡ ನಾಡಿನ ಹೆಮ್ಮೆಯ ನಂದಿನಿ ಸಂಸ್ಥೆ ಮೇಲೆ ಗುಜರಾತಿನ ಅಮುಲ್ ಕಣ್ಣು ಬಿದ್ದಿದೆ.

ಅಮುಲ್ ಕಣ್ಣು: ನಮ್ಮ ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ವ್ಯಾಪಾರಿ ಬುದ್ದಿ ಸಾಕು ಮಾಡಿ ಪ್ರಧಾನಿಗಳೇ. ಕನ್ನಡ ನಾಡಿನ ಹೆಮ್ಮೆಯ ನಂದಿನಿ ಸಂಸ್ಥೆ ಮೇಲೆ ಗುಜರಾತಿನ ಅಮುಲ್ ಕಣ್ಣು ಬಿದ್ದಿದೆ. ನಮ್ಮ ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ವ್ಯಾಪಾರಿ ಬುದ್ದಿ ಸಾಕು ಮಾಡಿ ಪ್ರಧಾನಿಗಳೇ ಎಂದು ಪ್ರಶ್ನಿಸಿದ್ದಾರೆ.

ಒಂದೂವರೆ ಲಕ್ಷದಷ್ಟು ಜಾನವಾರುಗಳ ಮರಣ:ಕಾಲು ಬಾಯಿರೋಗ ಮತ್ತು ಚರ್ಮಗಂಟು ರೋಗದಿಂದ ಒಂದೂವರೆ ಲಕ್ಷದಷ್ಟು ಜಾನವಾರುಗಳು ಮರಣ ಹೊಂದಿವೆ. ರೋಗಕ್ಕೆ ಲಸಿಕೆ ಮತ್ತು ಜೀವನಾಧಾರದ ರಾಸುಗಳನ್ನು ಕಳೆದುಕೊಂಡ ರೈತ ಕುಟುಂಬಗಳಿಗೆ ಪರಿಹಾರ ಕೊಡಿಸಿ ಪ್ರಧಾನ ಮಂತ್ರಿಗಳೇ. ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಹತ್ತಾರು ಕುಟುಂಬಗಳ ಮಕ್ಕಳಿಗೆ ಹಾಗೂ ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ನ್ಯಾಯ ಒದಗಿಸಿ.

ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ: ಪ್ರಧಾನಿಗಳೇ ಶೇ 40ರಷ್ಟು ಕಮಿಷನ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯ ಹಣ ನೀಡದೇ ಸತಾಯಿಸಿದ ನಿಮ್ಮ ಬಿಜೆಪಿ ಸರ್ಕಾರದ ಹಣದಾಸೆಗೆ ಗುತ್ತಿಗೆದಾರ ಪ್ರಸಾದ್‌ ಬಲಿಯಾದ. ಈ ಸಾವಿನ ಸರಣಿಯನ್ನು ಕೊನೆಗಾಣಿಸುವವರು ಯಾರು ಮೋದಿ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.


ಶೇ 40ರಷ್ಟು ಕಮಿಷನ್: ಸಚಿವರಾಗಿದ್ದ ಈಶ್ವರಪ್ಪ ಅವರಿಗೆ ಶೇ 40ರಷ್ಟು ಕಮಿಷನ್ ನೀಡಲಾಗದೆ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಶರಣಾದರು. ಬದುಕಿದ್ದಾಗಲಂತೂ ನೀವು ಆತನಿಗೆ ನ್ಯಾಯ ಕೊಡಿಸಿಲ್ಲ, ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿ ಅವರೇ?.

ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್: ಮೆಟ್ರೋ ಪಿಲ್ಲರ್ ಕುಸಿತದಿಂದ ಮೃತಪಟ್ಟ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಇವರ ಎರಡು ವರ್ಷದ ಕಂದಮ್ಮ ವಿಹಾನ್ ಸಾವಿಗೆ ಹೊಣೆ ಯಾರು?. ಮುಖ್ಯ ಎಂಜಿನಿಯರ್ ವಿರುದ್ಧ ಕ್ರಮ ಯಾವಾಗ ಪ್ರಧಾನಿಗಳೇ? ಎಂದು ಕೇಳಿದ್ದಾರೆ.

ಇದನ್ನೂಓದಿ:ಬಿಜೆಪಿ ಸುಳ್ಳು ಸೃಷ್ಟಿ ಮಾಡುವ ಫ್ಯಾಕ್ಟರಿ: ಸಿದ್ದರಾಮಯ್ಯ ವಾಗ್ದಾಳಿ

Last Updated : Jan 19, 2023, 5:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.