ETV Bharat / state

ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್​.ಸಂತೋಷ್ ಆತ್ಮಹತ್ಯೆ ಯತ್ನ..!

author img

By

Published : Nov 28, 2020, 2:14 AM IST

ಶುಕ್ರವಾರ ಸಂಜೆ 7:30ರ ಸಮಯದಲ್ಲಿ ಸಂತೋಷ್​ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಎನ್.ಆರ್​.ಸಂತೋಷ್ ಆತ್ಮಹತ್ಯೆ ಯತ್ನ
ಎನ್.ಆರ್​.ಸಂತೋಷ್ ಆತ್ಮಹತ್ಯೆ ಯತ್ನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ನಡೆಸಿದ್ದು, ತೀವ್ರ ಅಸ್ವಸ್ಥರಾದ ಹಿನ್ನಲೆಯಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ ಸಂಜೆ 7:30ರ ಸಮಯದಲ್ಲಿ ತಮ್ಮ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಲಗಿದ್ದ ಅವರನ್ನು ಪತ್ನಿ ಜಾಹ್ನವಿ ಎಬ್ಬಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಸಂತೋಷ್ ನಿದ್ದೆ ಮಾತ್ರೆ ಸೇವಿಸಿರುವುದು ಬೆಳಕಿಗೆ ಬಂದಿದೆ.​ ಸಂತೋಷ್ 12 ನಿದ್ದೆ ಮಾತ್ರೆ ಸೇವಿಸಿದ್ದಾರೆ ಎನ್ನಲಾಗಿದೆ. ಅವರನ್ನು ಕೂಡಲೇ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಬಿಎಸ್​ವೈ ಜೊತೆ ಸಂತೋಷ್​
ಬಿಎಸ್​ವೈ ಜೊತೆ ಸಂತೋಷ್​

ಕಳೆದ ಕೆಲ ದಿನದಿಂದ ಮಾನಸಿಕ ಖಿನ್ನತೆಯಿಂದ ಸಂತೋಷ್ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಂತೋಷ್​ ಯಾವುದೇ ಪತ್ರವನ್ನು ಬರೆದಿಟ್ಟಿಲ್ಲ ಎಂದು ತಿಳಿದುಬಂದಿದೆ. ಈ ಕುರಿತು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.